Thursday, February 12, 2026
Thursday, February 12, 2026

B.Y. Raghavendra ಬ್ಯಾಂಕ್ ಗಳು ಮೂಲಕ ಜಾರಿಯಾಗುವ ಕೇಂದ್ರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪಬೇಕು- ಬಿ.ವೈ.ರಾಘವೇಂದ್ರ

Date:

B.Y. Raghavendra ಶಿವಮೊಗ್ಗ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ‘ಜಿಲ್ಲಾ ಮಟ್ಟದ ಸಲಹಾ ಸಮಿತಿ’ ಹಾಗೂ ‘ಜಿಲ್ಲಾ ಮಟ್ಟದ ಪರಿಶೀಲನಾ ಸಮಿತಿ ಸಭೆಯಲ್ಲಿ ಸಂಸದರಾದ ಬಿ.ವೈ. ರಾಘವೇಂದ್ರ ಅವರು ಭಾಗವಹಿಸಿದರು.

ಜಿಲ್ಲೆಯ ಬ್ಯಾಂಕಿಂಗ್ ಮತ್ತು ಆರ್ಥಿಕ ಪ್ರಗತಿಯ ಪರಿಶೀಲನೆ ನಡೆಸಲಾಯಿತು.

ಆರ್ಥಿಕ ಒಳಗೊಳ್ಳುವಿಕೆ ಮೂಲಕ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬ್ಯಾಂಕಿಂಗ್ ಸೌಲಭ್ಯ ಮತ್ತು ಆರ್ಥಿಕ ಭದ್ರತೆ ಒದಗಿಸುವುದು ಪ್ರಧಾನಿ ಶ್ರೀ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರದ ಪ್ರಮುಖ ಧ್ಯೇಯವಾಗಿದೆ. ಪಿ.ಎಂ. ಸ್ವನಿಧಿ, ಮುದ್ರಾ ಯೋಜನೆ, ಪಿ.ಎಂ. ವಿಶ್ವಕರ್ಮ ಹಾಗೂ ರೈತರಿಗಾಗಿ ಕಿಸಾನ್ ಕ್ರೆಡಿಟ್ ಕಾರ್ಡ್‌ನಂತಹ ಮಹತ್ವಾಕಾಂಕ್ಷಿ ಯೋಜನೆಗಳು ಕೇವಲ ಅಂಕಿ ಅಂಶಗಳಿಗೆ ಸೀಮಿತವಾಗದೆ, ಅರ್ಹ ಫಲಾನುಭವಿಗಳಿಗೆ ತಲುಪಬೇಕು ಎಂಬುದು ಪ್ರಧಾನಿಯವರ ವಿಶೇಷ ಕಾಳಜಿಯಾಗಿದೆ ಎಂದು ತಿಳಿಸಿದರು.

ಈ ನಿಟ್ಟಿನಲ್ಲಿ, ಸಾಲ ಸೌಲಭ್ಯ ಕೋರಿ ಬರುವ ಜನಸಾಮಾನ್ಯರಿಗೆ, ರೈತರಿಗೆ ಹಾಗೂ ಉದ್ಯಮಿಗಳಿಗೆ ಅನಗತ್ಯ ಅಲೆದಾಟ ತಪ್ಪಿಸಬೇಕು. ಬ್ಯಾಂಕ್ ಅಧಿಕಾರಿಗಳು ವಿಳಂಬ ಧೋರಣೆಯನ್ನು ತೋರದೆ, ಅರ್ಜಿಗಳನ್ನು ತ್ವರಿತವಾಗಿ ವಿಲೇವಾರಿ ಮಾಡುವ ಮೂಲಕ ಜನರ ಆರ್ಥಿಕ ಅಭಿವೃದ್ಧಿಗೆ ಸಹಕರಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಲಾಯಿತು.

B.Y. Raghavendra ಈ ಸಭೆಯಲ್ಲಿ ಜಿಲ್ಲಾ ಪಂಚಾಯತ್ ಸಿಇಒ ಶ್ರೀ ಹೇಮಂತ್ ಎನ್, ಲೀಡ್ ಬ್ಯಾಂಕ್ ವ್ಯವಸ್ಥಾಪಕರು ಹಾಗೂ ವಿವಿಧ ಬ್ಯಾಂಕ್‌ಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B. Y. Raghavendra ಆಗುಂಬೆ ಘಾಟ್ ಮೇಲ್ದರ್ಜೆಗೆ ಕೇಂದ್ರದ ಸಮ್ಮತಿ: ಸಂಸದ ರಾಘವೇಂದ್ರರ ಪ್ರಯತ್ನಕ್ಕೆ ಫಲ.

B. Y. Raghavendra ಆಗುಂಬೆ ಘಾಟ್ ರಸ್ತೆ ಮೇಲ್ದರ್ಜೆಗೇರಿಸಲು ಮುಂದಾದ ಕೇಂದ್ರ...

Dhananjaya ಶಿವಮೊಗ್ಗ “ಜೆಸಿ” ಸಿನಿಮಾದಲ್ಲಿ ನಟ ಡಾಲಿ ಧನಂಜಯ್ ಚಿತ್ರ ವೀಕ್ಷಣೆ.

Dhananjaya ಡಾಲಿ ಪಿಕ್ಚರ್ಸ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಜೆಸಿ ಸಿನಿಮಾವನ್ನು ಸ್ಯಾಂಡಲ್‌ವುಡ್‌ನ...

Marikamba Jatra 2026 ಶಿವಮೊಗ್ಗದ ಮಾರಿಕಾಂಬ ಜಾತ್ರೆ ವಿಶೇಷ: ಟಗರು ಕಾಳಗದ ಅಂಕಣ ಪೂಜೆ.

Marikamba Jatra 2026 ನಮ್ಮೂರ ಬಳಗ ರಾಷ್ಟ್ರಮಟ್ಟದ ಟಗರು ಕಾಳಗ ಅಂಕಣ...

Shimoga News ಆತ್ಮವಿಶ್ವಾಸ ಹೆಚ್ಚಿಸುವಲ್ಲಿ ಎನ್ಎಸ್ಎಸ್ ಮಹತ್ತರ ಪಾತ್ರವಹಿಸುತ್ತದೆ.- ಪ್ರೊ.ಬಿ.ವಸಂತಕುಮಾರ್.

Shimoga News ವಿದ್ಯಾರ್ಥಿಗಳಿಗೆ ಗ್ರಾಮೀಣ ಪ್ರದೇಶದ ಅರಿವು ಆಗುವುದರ ಜತೆಯಲ್ಲಿ ಸೇವಾ...