Thursday, September 10, 2026
Thursday, September 10, 2026

Shadakshari C S ಪ್ರಸ್ತುತ ದಿನಮಾನಗಳಲ್ಲಿ ಇಡೀದಿನ ಆಗುವ ಕೆಲಸವನ್ನ ಒಂದೇ ಗಂಟೆಯಲ್ಲಿ ಮುಗಿಸುವ ಅಗತ್ಯವಿದೆ,- ಸಿ.ಎಸ್.ಷಡಾಕ್ಷರಿ.

Date:

Shadakshari C S ಸರ್ಕಾರಿ ನೌಕರರಾದ ನಾವುಗಳು ಆಧುನಿಕ ತಂತ್ರಜ್ಞಾನವನ್ನು ಬಳಸಿಕೊಂಡು ಸಾರ್ವಜನಿಕರ ಕೆಲಸವನ್ನು ತ್ವರಿತಗತಿಯಲ್ಲಿ ಮಾಡಿಕೊಡುವ ನಿಟ್ಟಿನಲ್ಲಿ ಮುಂದಾಗಬೇಕಿದೆ ಎಂದು ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರಿ ಹೇಳಿದರು.
ನಗರದ ಸರ್ಕಾರಿ ನೌಕರರ ಭವನದಲ್ಲಿ ಶಿಕ್ಷಣ ಇಲಾಖೆಯ ಲಿಪಿಕ ನೌಕರರ ಸಂಘ, ವಾಹನ ಚಾಲಕರ ಸಂಘ ಹಾಗೂ ಡಿ.ಗ್ರೂಪ್ ನೌಕರರ ಸಂಘದ ವತಿಯಿಂದ ಏರ್ಪಡಿಸಲಾಗಿದ್ದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಸ್ತುತ ದಿನಮಾನಗಳಲ್ಲಿ ಇಡೀ ದಿನ ಆಗುವ ಕೆಲಸವನ್ನು ಒಂದೇ ಗಂಟೆಯಲ್ಲಿ ಮಾಡಿ ಮುಗಿಸುವಂತಹ ಅವಶ್ಯಕತೆ ಇದೆ. ಇದಕ್ಕಾಗಿ ಪ್ರತಿಯೊಬ್ಬ ನೌಕರನೂ ಆಧುನಿಕ ತಂತ್ರಜ್ಞಾನದ ಜ್ಞಾನವನ್ನು ಪಡೆದುಕೊಳ್ಳಬೇಕು,. ಆಗ ಮಾತ್ರ ಕೆಲಸದಲ್ಲಿ ವೇಗವನ್ನು ಪಡೆಯಬಹುದು ಎಂದರು.
ಆರ‍್ಟಿಫಿಶಿಯಲ್ ಇಂಟಲಿಜೆನ್ಸಿ ಈಗ ಎಲ್ಲಾ ಕಡೆ ಬಳಸಿಕೊಳ್ಳಲಾಗುತ್ತಿದೆ. ಇದು ಇಲಾಖಾ ವ್ಯಾಪ್ತಿಗೆ ಬಂದರೆ ಸರ್ಕಾರಕ್ಕೆ ನೌಕರರ ಅವಶ್ಯಕತೆಯೇ ಬರುವುದಿಲ್ಲ. ಸರ್ಕಾರ ಈ ನಿಟ್ಟಿನಲ್ಲಿ ಚಿಂತನೆ ನಡೆಸುವ ಸಾಧ್ಯತೆ ಇದೆ. ಆದ್ದರಿಂದ ನೌಕರರ ಸಮೂಹ ಕಚೇರಿಗೆ ಅಲೆಸದೇ ಕೆಲಸವನ್ನು ಮಾಡಿಕೊಡಬೇಕು ಎಂದರು.
ಸರ್ಕಾರಿ ನೌಕರರಿಗೆ ನಮ್ಮ ಸಂಘಟನೆ ಸರ್ಕಾರದೊಂದಿಗೆ ಮಾತುಕತೆ ಮೂಲಕವೇ ೭ನೇ ವೇತನ,ಆರೋಗ್ಯ ಸಂಜೀವಿನಿಸೇರಿದಂತೆ ಅನೇಕ ಸವಲತ್ತುಗಳನ್ನು ಕೊಡಿಸಿದೆ. ಎನ್‌ಪಿಎಸ್‌ನ್ನು ರದ್ದುಪಡಿಸಿ ಒಪಿಎಸ್‌ನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಈಗಾಗಲೇ ಮಾತುಕತೆ ನಡೆದಿದೆ. ಇವೆಲ್ಲದಕ್ಕೂ ಕಾರಣ ಸಂಘಟನೆ ಎಂದರು.
Shadakshari C S ಕಾರ್ಯಕ್ರಮದಲ್ಲಿ ಬೋಧಕೇತರ ನೌಕರರ ಸಂಘದ ರಾಜ್ಯಾಧ್ಯಕ್ಷ ನವೀನ್, ಉಪಾಧ್ಯಕ್ಷ ದೇವರಾಜ್, ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಮೋಹನ್ ಕುಮಾರ್, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಸಿದ್ದಬಸಪ್ಪ, ಡಿಡಿಪಿಐ ಮಂಜುನಾಥ್, ಬಿಇಓ ರಮೇಶ್, ತಾಲೂಕಿನ ಇತರೆ ಬಿಇಓಗಳು ಇತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...