Friday, March 20, 2026
Friday, March 20, 2026

Kuvempu “ಸುಂದರ ಕವಿ ಕಾಣೋ”ಕುವೆಂಪು ಸ್ಮರಣೆ.-ಡಾ.ಸುಧೀಂದ್ರ.

Date:

Kuvempu ಕುವೆಂಪು ಅವರ ಇಂಗ್ಲಿಷ್ ಕವಿತೆಗಳನ್ನು ಓದಿ ಪರಿಶೀಲಿಸಿದ ಐರಿಷ್ ಕವಿ ಕಸಿನ್ಸ್
“ಏನಿದೆಲ್ಲ ಕಗ್ಗ? .
ನಿಮ್ಮನ್ನ ನೋಡಿದರೆ ತಲೆಯಿಂದ ಕಾಲಿನವರೆಗೂ ಸ್ವದೇಶಿಯಾಗಿ ಕಾಣುತ್ತೀರಿ.. ಆದರೆ ಕವಿತೆ ಮಾತ್ರ ಸ್ವದೇಶಿಯಲ್ಲ. ನಿಮ್ಮ ಮಾತೇ ಭಾಷೆಯಲ್ಲಿ ಏನಾದರೂ ಬರೆದಿದ್ದೀರಾ? ಎಂದು ಕೇಳಿದರು.
ನಂತರ ಇಬ್ಬರ ನಡುವೆ ಕಾವ್ಯ, ಇಂಗ್ಲಿಷ್ ಭಾಷೆ ಮತ್ತು ಕನ್ನಡ ಭಾಷೆ ಮೊದಲಾದ ವಿಚಾರಗಳ ಮಾತುಕತೆ ನಡೆಯಿತು.
ಒಟ್ಟಾರೆ ಹೇಲಕಬೇಕೆಂದರೆ ’ಯಾವ ಭಾಷೆಯೂ ತನಗೆ ತಾನೆ ಅಸಮರ್ಥವಲ್ಲ. ಸಮರ್ಥನೊಬ್ಬನು ಬರುವತನಕ ಮಾತ್ರ ಅದು ಅಸಮರ್ಥವೆಂಬಂತೆ ತೋರಬಹುದು, ಸಮರ್ಥನು ಬಂದೊಡನೆ ಅವನ ಕೈಯಲ್ಲಿ ಅದು ಎಂತಹ ಅದ್ಭುತವನ್ನಾದರೂ ಸಾಧಿಸಬಲ್ಲದು’ ಎಂದು ಕಸಿನ್ಸ್ ‌ ಅಭಿಪ್ರಾಯ ಪಟ್ಟರಂತೆ.

ಆಗ ಇಪ್ಪತ್ತರ ಬಿಸಿ ವಯಸ್ಸಿನ ಯುವಕ ಕುವೆಂಪು, ಆಕ್ಷಣಕ್ಕೆ ಸಹಜವಾಗಿಯೇ ಸಿಟ್ಟುಗೊಂಡರಂತೆ. ಅಂತಹ ಕುಪಿತ ಮನಸ್ಥಿತಿಯಲ್ಲೇ ಅಲ್ಲಿಂದ ಜಾಗ ಖಾಲಿಮಾಡಿದರು.

” ಅದೊಂದು ಮಹತ್ವದ ಹಾಗೂ ಸ್ಮರಣೀಯವಾದ ದಿನ!”ಎಂದು ನೆನಪಿನ ದೋಣಿಯಲ್ಲಿ ಕುವೆಂಪು ಆ ಸಂದರ್ಭವನ್ನು ಕುರಿತು ಕಸಿನ್ಸ್ ಅವರ ಹಿತವಚನ ಮೇಲೆಮೇಲೆಕ್ಕೆ ತಿರಸ್ಕೃತವಾಗಿದ್ದರು ಸುದೈವದಿಂದ ನನ್ನ ಅಂತಃಪ್ರಜ್ಞೆ ಅದನ್ನು ಒಪ್ಪಿಕೊಂಡಿತ್ತೆಂದು ತೋರುತ್ತದೆ. ಕನ್ನಡ ವಾಗ್ದೇವಿಯ ಕೃಪೆಯೂ ಆ ಸುಸಂಧಿಯನ್ನು ಉಪಯೋಗಿಸಿಕೊಂಡು ತನ್ನ ಕಂದನನ್ನು ತನ್ನ ಹಾಲೆದೆಗೆ ಎಳೆದುಕೊಂಡಳು! ಹಿಂತಿರುಗಿ ಬರುವಾಗಲೇ ದಾರಿಯಲ್ಲಿ ಏನೋ ಒಂದು ಕನ್ನಡ ಕವಿತೆ ರಚಿಸುತ್ತಾ ಗುನುಗುತ್ತಾ ಬಂದೆ ಎಂದು ಬರೆದಿದ್ದಾರೆ.

Kuvempu ಈ ಬದಲಾವಣೆ ಹೊಂದಿದ ನಂತರ ಕುವೆಂಪು ಗಟ್ಟಿಯಾಗಿಯೇ ಬರೆದರು. ಗದ್ಯಧಾಟಿಯಲ್ಲಂತೂ ಅವರ ಶೈಲಿ
ಮನೋಜ್ಞ.ಅನನ್ಯ.
ಕವಿತೆಗಳಲ್ಲಿ ನಿಸರ್ಗ ನರ್ತಿಸುತ್ತದೆ. ನಿಸರ್ಗಕವಿ ಅಂತಲೇ ನಮಗೆ ಅವರು ಜನಜನಿತ.

ಪದವಿ, ಪದಕ, ಬಿರುದು, ಮಾನ‌ ಸಮ್ಮಾನಗಳು ಅವರನ್ನ ಅರಸಿಕೊಂಡು ಬಂದವು. ಕುವೆಂಪು ಅವರೇ ಹೇಳುವಂತೆ” ಛೀ, ಕೀರ್ತಿ ಶನಿ ತೊಲಗಾಚೆ” ಎಂದು ಅವುಗಳನ್ನ ದೂರ ಸರಿಸಿದರು. ಅಷ್ಟೇ ಮೇಲಕ್ಕೇರಿದರು.
ಇಂದವರ ಜನ್ಮದಿನ.
ಸೂರ್ಯೋದಯ,
ಚಂದ್ರೋದಯ ದೇವರ ದಯ ಕಾಣೋ
ಎಂಬಂತೆ ಮಹಾಕವಿಯ ನೆನಪೇ ನಮಗೆ ಒಂದು ಸುಂದರ
” ಅಕ್ಷರಗಳ ಕವಿ ಕಾಣೋ!” ಎಂಬ ಮಿಡಿತ ನಮಗೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...