Tuesday, February 3, 2026
Tuesday, February 3, 2026

Priyank Kharge ಪಂಚಮಿತ್ರ ಪೋರ್ಟಲ್ ಯಶಸ್ವಿ ನಿರ್ವಹಣೆ- ಸಚಿವ ಪ್ರಯಾಂಕ ಖರ್ಗೆ.

Date:

Priyank Kharge ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳನ್ನು ನೀಡುವ ‘ಪಂಚಮಿತ್ರ’ ಪೋರ್ಟಲ್ ಮತ್ತು ವಾಟ್ಸಪ್ ಚಾಟ್‌ ಮೂಲಕ ಜನರು ತಮ್ಮ ಕುಂದುಕೊರತೆಗಳ ಬಗ್ಗೆ ಅಹವಾಲುಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸುವ ವಿನೂತನ ಯೋಜನೆ ಪ್ರಾರಂಭಿಸಲಾಗಿತ್ತು. ಜನರು ಮನೆಯಲ್ಲಿಯೇ ಕುಳಿತು ವಾಟ್ಸಪ್ ಮೂಲಕ ಅಹವಾಲು ಸಲ್ಲಿಸಲು ಸಹಾಯವಾಣಿ ಸಂಖ್ಯೆ 8277506000 ಪ್ರಾರಂಭಿಸಲಾಗಿತ್ತು. ಇದು ದೇಶದಲ್ಲೇ ಈ ರೀತಿಯ ಪ್ರಥಮ ಪ್ರಯತ್ನವಾಗಿದ್ದು, ಇದೀಗ ಅತ್ಯಂತ ಯಶಸ್ವಿ ಯೋಜನೆಯಾಗಿ ಹೊರಹೊಮ್ಮಿದೆ.

ಗ್ರಾಮೀಣ ಪ್ರದೇಶಗಳ ಜನರು ವಿವಿಧ ಕೆಲಸಗಳಿಗಾಗಿ ತಾಲೂಕು ಕೇಂದ್ರಗಳಲ್ಲಿನ ಸರ್ಕಾರಿ ಕಚೇರಿಗಳಿಗೆ ಅಲೆಯುವುದನ್ನು ತಪ್ಪಿಸುವುದಕ್ಕಾಗಿ ಗ್ರಾಮ ಪಂಚಾಯತಿಗಳಲ್ಲಿಯೇ ಅಗತ್ಯ ಸೇವೆಗಳನ್ನು ಒದಗಿಸಲಾಗುತ್ತಿದೆ. ಇದರೊಂದಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಈ ಯೋಜನೆ ಸಹಕಾರಿಯಾಗಿದೆ.

Priyank Kharge ರಾಜ್ಯದಲ್ಲಿ ಈವರೆಗಿನ ಪಂಚಮಿತ್ರ ವಾಟ್ಸಪ್ ಚಾಟ್ ಬಾಟ್ ಬಳಕೆದಾರರ ವರದಿ ಹೀಗಿದೆ :

➧ ರಾಜ್ಯದ ಒಟ್ಟು ಬಳಕೆದಾರರು : 1,21,535

➧ ಎಲ್ಲಾ ಜಿಲ್ಲೆಗಳಿಂದ ಅಹವಾಲು ಸ್ವೀಕಾರ : 12,771

➧ ಅಹವಾಲುಗಳ ವಿಲೇವಾರಿ : 12,708

ಗ್ರಾಮ ಪಂಚಾಯತಿಗಳಿಗೆ ಸಂಬಂಧಿಸಿದ ಮಾಹಿತಿ, ಸೇವೆಗಳು ಮತ್ತು ಕುಂದುಕೊರತೆಗಳ ಅಹವಾಲು ಸಲ್ಲಿಸಲು ಸುಲಭ ಮಾರ್ಗ ಇದಾಗಿದೆ. ಗ್ರಾಮೀಣ ಜನರು ಈ ಯೋಜನೆಯನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ಕೋರುತ್ತೇನೆ ಎಂದು‌ ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ , ತಂತ್ರಜ್ಞಾನ ಇಲಾಖೆ ಸಚಿವ ಪ್ರಿಯಾಂಕ ಖರ್ಗೆ ಮನವಿಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...