Thursday, March 19, 2026
Thursday, March 19, 2026

S. Rudre Gowda ರಮಣ ಮಹರ್ಷಿಗಳ‌ ಜೀವನ ನಮಗೆಲ್ಲ ಪ್ರೇರಕ ಶಕ್ತಿ- ಎಸ್.ರುದ್ರೆಗೌಡ

Date:

S. Rudre Gowda ರಮಣ ಮಹರ್ಷಿಗಳ ಜೀವನ ಸಂದೇಶ ನಮಗೆಲ್ಲ ಪ್ರೇರಣೆ ಎಂದು ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ರುದ್ರೇಗೌಡ ಹೇಳಿದರು.

ಬಸವ ಕೇಂದ್ರದಲ್ಲಿ ಶ್ರೀ ರಮಣ ಕೇಂದ್ರದ ವತಿಯಿಂದ ರಮಣ ಜಯಂತಿ ಪ್ರಯುಕ್ತ ಆಯೋಜಿಸಿದ್ದ ಡಿ.ಜಿ.ಶಿವಣ್ಣಗೌಡ ದತ್ತಿನಿಧಿ ಕಾರ್ಯಕ್ರಮದಲ್ಲಿ ಮಾತನಾಡಿ, ಭಗವಾನ್ ಶ್ರೀ ರಮಣರು ಮೌನವಾಗಿದ್ದುಕೊಂಡೇ ಸಮಾಜವನ್ನು ತಿದ್ದಿದರು. ಅಂತಹವರ ಬಗ್ಗೆ ಶಿವಮೊಗ್ಗದಲ್ಲಿ ಒಂದು ಉತ್ತಮ ಕಟ್ಟಡ ನಿರ್ಮಾಣ ಮಾಡಲು ಮುಂದಿನ ದಿನಗಳಲ್ಲಿ ಪ್ರಯತ್ನಿಸೋಣ ಎಂದು ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮಾತನಾಡಿ, ಇಂದಿನ ಜೀವನದ ತೊಳಲಾಟದಲ್ಲಿ ರಮಣರ ತತ್ವಗಳು ಮನಶಾಂತಿ ನೀಡುತ್ತದೆ ಎಂಬುದನ್ನು ಅರಿಯಬೇಕು. ಇಂದಿನ ಕಾರ್ಯಕ್ರಮ ಅರ್ಥಪೂರ್ಣ ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಷಡಾಕ್ಷರಿ ಮಾತನಾಡಿ, ಶಾಲಾ ಪಠ್ಯದಲ್ಲಿ ರಮಣರ ಬಗ್ಗೆ ತಿಳಿಸುವ ಪಠ್ಯ ಸೇರಿಸಬೇಕು. ಶಿವಮೊಗ್ಗದಲ್ಲಿ ಒಂದು ಶಾಶ್ವತವಾದ ರಮಣ ಕೇಂದ್ರ ಸ್ಥಾಪಿಸಲು ಎಲ್ಲ ರೀತಿಯ ನೆರವು ನೀಡುವುದಾಗಿ ಭರವಸೆ ನೀಡಿದರು.

ಶಾಂತಿಯನ್ನು ಅರಸಿಕೊಂಡು ಹೋಗಬೇಕಿಲ್ಲ. ಅದು ನಮ್ಮಲ್ಲಿಯೇ ಇದೆ ಎಂಬ ರಮಣರ ಮಾತು ನಮಗೆ ಮಾರ್ಗದರ್ಶನವಾಗಬೇಕು ಎಂದು ತಿಳಿಸಿದರು.

S. Rudre Gowda ವಿದ್ವಾನ್ ರಾಘವೇಂದ್ರ ಭಟ್ ಮಾತನಾಡಿ, ರಮಣ ಮಹರ್ಷಿಗಳು ನಿದ್ರೆಯಲ್ಲಿಯೂ ಸದಾ ಜಾಗೃತವಾಗಿದ್ದ ಮಹಾಸಾಧಕರಾಗಿದ್ದರು. ಅರುಣಾಚಲ ಎಂಬ ಹೆಸರನ್ನು ಕೇಳಿ ಪುಳಕಿತರಾದ ಬಾಲಕ ರಮಣ ಇಡೀ ತನ್ನ ಜೀವನವನ್ನು ತಿರುವಣ್ಣಾಮಲೈನಲ್ಲಿ ಕಳೆದ ರೀತಿ ಇತರರಿಗೆ ಮಾದರಿಯಾಗಿದ್ದಾರೆ. 71 ವರ್ಷ ಜೀವಿಸಿದ್ದ ಮಹಾ ಸಾಧಕರು ಇರುವಷ್ಟು ದಿನವೂ ಸಕಲ ಪ್ರಾಣಿ ಪಕ್ಷಿಗಳನ್ನು, ಎಲ್ಲ ಜೀವಿಗಳನ್ನೂ ಒಂದೇ ರೀತಿಯಲ್ಲಿ ಕಾಣುವ ಮನಸ್ಸನ್ನು ಹೊಂದಿದ್ದರು ಎಂದರು.

ಲಲಿತಮ್ಮ ಮತ್ತು ಸಂಗಡಿಗರಿಂದ ಭಕ್ತಿಗೀತೆಗಳ ಕಾರ್ಯಕ್ರಮ ನಡೆಯಿತು. ರತ್ನಮ್ಮ ಪ್ರಾರ್ಥಿಸಿದರು. ರಮಣ ಕೇಂದ್ರದ ವಿನಾಯಕ ಸ್ವಾಗತಿಸಿದರು. ಎಂ.ಎನ್.ಸುಂದರ್ ರಾಜ್ ಪ್ರಾಸ್ತಾವಿಕ ಮಾತನಾಡಿದರು. ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷ ಜಿ.ವಿಜಯಕುಮಾರ್ ವಂದಿಸಿದರು. ಶಾಂತಮ್ಮ, ವಿನಯ್, ಚನ್ನಪ್ಪ, ಡಿ.ಎಸ್.ಚಂದ್ರಶೇಖರ್, ಶೀಲಾ ಚಂದ್ರಶೇಖರ್, ಎ.ಎಲ್.ಚಂದ್ರಶೇಖರ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...