Sunday, May 17, 2026
Sunday, May 17, 2026

Gurudutt Hegde ಪುರೆ, ನವಿಲೆ,ತ್ಯಾವರಚಟ್ನಳ್ಳಿ & ಗೋಪಶೆಟ್ಟಿಕೊಪ್ಪ ಕೆರೆಗಳಿಗೆ ಅಮೃತ- 2.0 ಯೋಜನೆಯಡಿ ಪುನಶ್ಚೇತನ- ಗುರುದತ್ತ ಹೆಗಡೆ.

Date:

Gurudutt Hegde ಶಿವಮೊಗ್ಗ ಮಹಾನಗರ ಪಾಲಿಕೆಯ ವ್ಯಾಪ್ತಿಗೊಳಪಡುವ ಪುರಲೆ, ನವಿಲೆ, ಗೋಪಶೆಟ್ಟಿಕೊಪ್ಪ ಮತ್ತು ತ್ಯಾವರಚಟ್ನಳ್ಳಿಯ ಕೆರೆಗಳನ್ನು ಕೇಂದ್ರ ಪುರಸ್ಕೃತ ಅಮೃತ-2.0 ಯೋಜನೆಯಡಿ ಜಲಮೂಲಗಳ ಪುನಶ್ಚೇತನ ಕಾಮಗಾರಿಗಳನ್ನು ತ್ವರಿತಗತಿಯಲ್ಲಿ ಆರಂಭಿಸಿ ಸಕಾಲದಲ್ಲಿ ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನಗರ ಯೋಜನಾ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.

ತಮ್ಮ ಕಚೇರಿ ಸಭಾಂಗಣದಲ್ಲಿ ಶಿವಮೊಗ್ಗ ಮಹಾನಗರಪಾಲಿಕೆ ಮತ್ತು ಭದ್ರಾವತಿ ನಗರಸಭೆ ವ್ಯಾಪ್ತಿಯಲ್ಲಿನ ಜಲಮೂಲಗಳ ಅಭಿವೃದ್ಧಿ ಕಾಮಗಾರಿಗಳ ಕುರಿತು ಏರ್ಪಡಿಸಲಾಗಿದ್ದ ವಿಸ್ತೃತ ಯೋಜನಾ ವರದಿಗಳ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. ಮುಂದಿನ ಎರಡು ದಶಕಗಳ ಅವಧಿಯಲ್ಲಿ ಏರುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ಸದರಿ ಪ್ರದೇಶದಲ್ಲಿ ಕೈಗೊಳ್ಳಬಹುದಾದ ಸಂಭಾವ್ಯ ಕಾಮಗಾರಿಗಳನ್ನು ಗಮನದಲ್ಲಿಟ್ಟುಕೊಂಡು ಕ್ರಿಯಾಯೋಜನೆಯನ್ನು ರೂಪಿಸುವಂತೆ ಅವರು ಅಧಿಕಾರಿಗಳಿಗೆ ಸಲಹೆ ನೀಡಿದರು. ಪ್ರತಿ ಕೆರೆಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳುವ ಮುನ್ನ ಕೆರೆಯ ಸುತ್ತಲು ಇರುವ ಒಳಚರಂಡಿ ಜಾಲ ಸಮರ್ವಕವಾಗಿ ಕಾರ್ಯನಿರ್ವಹಿಸುವಂತೆ ಅಭಿವೃದ್ಧಿಪಡಿಸಲು ಪಾಲಿಕೆಯ ಅಭಿಯಂತರರಿಗೆ ಸೂಚಿಸಿದರು. ಅಸ್ತಿತ್ವದಲ್ಲಿರುವ ಕೆರೆಗಳ ಏರಿ ಅಭಿವೃದ್ಧಿ ಕೈಗೊಳ್ಳುವ ಸಂದರ್ಭದಲ್ಲಿ ಸಾದ್ಯವಾದಷ್ಟು ಗ್ರಾವೆಲ್/ಮುದ್ರಮ್ ನ್ನು ಉಪಯೋಗಿಸುವಂತೆ ಸೂಚಿಸಿದ ಅವರು, ಸದರಿ 04ಕಾಮಗಾರಿಗಳ ಡಿಪಿಆರ್ ನ್ನು ಅನುಮೋದಿಸಿ ಮುಂದಿನ ಕ್ರಮಕ್ಕಾಗಿ ಪೌರಾಡಳಿತ ನಿರ್ದೇಶನಾಲಯಕ್ಕೆ ಸಲ್ಲಿಸಲು ಸಭೆಯಲ್ಲಿ ಶಿಫಾರಸ್ಸು ಮಾಡಿ ಆದೇಶಿಸಿದರು.

ಶಿವಮೊಗ್ಗ ಮಹಾನಗರಪಾಲಿಕೆಗೆ 05 ಜಲಮೂಲಗಳ ಪುನಶ್ಚತನಕ್ಕೆ ರೂ.20.50ಕೋಟಿ ಅನುದಾನವನ್ನು ನಿಗಧಿಪಡಿಸಿ ಈಗಾಗಲೇ ಅನುಮೋದನೆ ನೀಡಿದೆ. PDMCಬೆಂಗಳೂರು ರವರಿಂದ ಪುರಲೆ ಕೆರೆ – 571.00ಲಕ್ಷ, ನವುಲೆ ಕೆರೆ-587.08ಲಕ್ಷ, ತಾವರೇ ಚಟ್ನಹಳ್ಳಿ(ರಾಗಿಗುಡ್ಡ) ಕೆರೆ-581.95ಲಕ್ಷ ಹಾಗೂ ಗೋಪಿಶೆಟ್ಟಿಕೊಪ್ಪ ಕೆರೆ-608.08ಲಕ್ಷ ರೂ.ಗಳನ್ನು ಕೆರೆಗಳ ಅಭಿವೃದ್ಧಿಗೆ ನಿಗಧಿಪಡಿಸಲಾಗಿದೆ. ನಗರ ವ್ಯಾಪ್ತಿಯಿಂದ ಹೊರಗುಳಿದ ಕಾರಣ ಹಾಗೂ ಮಂಜೂರಾದ ಮೊತ್ತ ಯೋಜನಾವೆಚ್ಚದಲ್ಲಿ ಭರಿಸಲು ಸಾಧ್ಯವಾಗದಿರುವುದರಿಂದ ಹರಿಗೆ ಕರೆಯನ್ನು ಕೈಬಿಟ್ಟಿರುವುದಾಗಿ ಅವರು ತಿಳಿಸಿದ ಅವರು, ಸದರಿ ಕೆರೆಗಳ ಸ್ಥಳಕ್ಕೆ ಅನುಗುಣವಾಗಿ ಕಾಮಗಾರಿಗಳನ್ನು ನಿರ್ವಹಿಸಬೇಕಾದ ಕಾರಣ ಡಿ.ಪಿ.ಆರ್ ಗಳ ಅಂದಾಜು ಮೊತ್ತವು ಅನುಮೋದಿತ ಕ್ರಿಯಾಯೋಜನೆ ಮೊತ್ತಕ್ಕಿಂತ ಹೆಚ್ಚಾಗಿದ್ದು, ಹೆಚ್ಚುವರಿ ಮೊತ್ತವನ್ನು ಮಹಾನಗರಪಾಲಿಕೆ ಅನುದಾನದಡಿ ಭರಿಸಬಹುದಾಗಿದೆ ಎಂದು ಮಹಾನಗರಪಾಲಿಕೆ ಆಯುಕ್ತರ ಸಲಹೆಯನ್ನು ಪರಿಗಣಿಸಲಾಗಿದೆ ಎಂದರು.

Gurudutt Hegde ಒಳಚರಂಡಿ ಸಂಸ್ಕರಣಾ ವ್ಯವಸ್ಥೆ ಅಸ್ತಿತ್ವದಲ್ಲಿಲ್ಲದ ಕಾರಣ ಬಹುತೇಕ ಕೆರೆಗಳಿಗೆ ಕಲುಷಿತ ನೀರು, ತ್ಯಾಜ್ಯ ಬಂದು ಸೇರುತ್ತಿದೆ. ಕೆರೆಯಲ್ಲಿ ಹೂಳಿನ ಪ್ರಮಾಣ ಹೆಚ್ಚುತ್ತಿರುವುದರಿಂದ ಕೆರೆಗಳಲ್ಲಿ ನೀರಿನ ಸಂಗ್ರಹಣಾ ಸಾಮರ್ಥ್ಯ ಕಡಿಮೆಯಾಗುತ್ತಿದೆ. ಬೆಳೆದು ನಿಂತಿರುವ ಗಿಡ-ಗಂಟೆಗಳನ್ನು ತೆರೆವುಗೊಳಿಸುವುದು, ಹೂಳು ತೆಗೆಯುವುದು, ಕೆರೆಗಳ ಅತಿಕ್ರಮಣ ನಿಯಂತ್ರಿಸಿ, ಅಚ್ಚುಕಟ್ಟು ಪ್ರದೇಶದಲ್ಲಿ ಉದ್ಯಾನವನಗಳ ನಿರ್ಮಾಣ, ಕೆರೆಗಳಲ್ಲಿ ತೇಲುವ ಉದ್ಯಾನವನಗಳ ನಿರ್ಮಾಣ, ಒಟ್ಟಾರೆ ಜಲಮೂಲಗಳನ್ನು ಜೀರ್ಣೋಭಿವೃದ್ಧಿಗೊಳಿಸಿ ನೀರಿನ ಗುಣಮಟ್ಟ ಸುಧಾರಿಸುವ ಸದುದ್ದೇಶ ಹೊಂದಲಾಗಿದೆ. -ಗುರುದತ್ತ ಹೆಗಡೆ, ಜಿಲ್ಲಾಧಿಕಾರಿಗಳು, ಶಿವಮೊಗ್ಗ.
ಸಭೆಯಲ್ಲಿ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ರಂಗಸ್ವಾಮಿ, ಕರ್ನಾಟಕ ಕೆರೆ ಸಂರಕ್ಷಣೆ ಮತ್ತು ಅಭಿವೃದ್ಧಿ ಪ್ರಾಧಿಕಾರದ ಪ್ರತಿನಿಧಿ ಹಾಗೂ ಸಣ್ಣ ನೀರಾವರಿ ಇಲಾಖೆ ಸಹಾಯಕ ಕಾರ್ಯಪಾಲಕ ಅಭಿಯಂತರ ಪುರುಷೋತ್ತಮ, ಭೂಮಾಪನ, ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆ ಉಪ ನಿರ್ದೇಶಕಿ ಶ್ರೀಮತಿ ಆಶಾ ಕುಮಾರಿ, ಮಹಾನಗರಪಾಲಿಕೆಯ ಅಭಿಯಂತರ ತೇಜೂಪ್ರಸಾದ್‌, ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಪರಿಸರ ಅಧಿಕಾರಿ ಶ್ರೀಮತಿ ಶಿಲ್ಪಾ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಶಿವಮೊಗ್ಗ ಮಿಳಘಟ್ಟದಲ್ಲಿ ಮನೆಗೆ ಬೆಂಕಿ.ಶಾಸಕ ಚನ್ನಬಸಪ್ಪ‌ ಭೇಟಿ- ನೊಂದವರಿಗೆ ಸಾಂತ್ವನ.

S.N. Channabasappa ನಗರದ ಮಿಳಘಟ್ಟದ 1ನೇ ಕ್ರಾಸ್‌ನಲ್ಲಿರುವ ಮನೆಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ...

DC Shivamogga ತ್ಯಾಜ್ಯ ಉತ್ಪಾದನೆ ನಿಯಂತ್ರಿಸಿ, ವಿಲೇವಾರಿಗೆ ಅಧಿಕಾರಿಗಳು ವಿಶೇಷ ಗಮನ ಹರಿಸಿ, ಸಾರ್ವಜನಿಕರೂ ಸಹಕರಿಸಿ- ಪ್ರಭುಲಿಂಗ ಕವಳಿಕಟ್ಟಿ

DC Shivamogga ನಗರೀಕರಣ ಮತ್ತು ಕೈಗಾರಿಕೀಕರಣದಿಂದಾಗಿ ಉತ್ಪತ್ತಿಯಾಗುತ್ತಿರುವ ಘನತ್ಯಾಜ್ಯದ ಪ್ರಮಾಣ ದಿನೇದಿನೇ...

MESCOM ಮೇ19. ಶಿವಮೊಗ್ಗದ ಚಿಕ್ಕಲ್ಲು,ಗುರುಪುರ, ಪುರಲೆ ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

MESCOM ಎಂ.ಆರ್.ಎಸ್. 110/11 ಕೆ.ವಿ. ವಿ.ವಿ.ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿದ್ದು,...