Monday, February 2, 2026
Monday, February 2, 2026

S. N. Channabasappa ಜಕಣಾಚಾರಿಯಂತಹ ಮಹಾಶಿಲ್ಪಿಯ ಜನ್ಮನೀಡಿದ ಅವರ ತಾಯಿಗೆ ನಮ್ಮ ನಮನಗಳು- ಎಸ್.ಎನ್.ಚನ್ನಬಸಪ್ಪ.

Date:

S. N. Channabasappa ಅಮರಶಿಲ್ಪಿ ಜಕಣಾಚಾರಿಗಳು ಭಗವಂತ ಈ ನಾಡಿಗೆ ನೀಡಿದ ವರವಾಗಿದ್ದು, ಬೇಲೂರು, ಹಳೇಬೀಡಿನ ಶಿಲ್ಪಕಲೆಗಳು ಜಗತ್ಪ್ರಸಿದ್ದಿಯಾಗಲು ಇವರೇ ಕಾರಣಕರ್ತರು ಎಂದು ಶಾಸಕರಾದ ಎಸ್ ಎನ್ ಚನ್ನಬಸಪ್ಪ ಸ್ಮರಿಸಿದರು.
ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಗುರುವಾರ ಕುವೆಂಪು ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಶಿಲ್ಪಕಲೆಯೇ ಇಲ್ಲದ ಜಗತ್ತನ್ನು ಊಹಿಸಲೂ ಸಾಧ್ಯವಿಲ್ಲ. ಶಿಲ್ಪಕಲೆ ಭಗವಂತ ನಮಗೆ ನೀಡಿದ ವರ. ಜಕಣಾಚಾರಿಯಂತಹ ಮಹಾನ್ ಶಿಲ್ಪಿಯನ್ನು ನೀಡಿದ ಅವರ ತಾಯಿಗೆ ನಮ್ಮ ನಮನಗಳು. ನಮ್ಮದು ಶಿಲ್ಪಕಲೆ, ಸಾಹತ್ಯ, ಭವ್ಯ ಸಾಂಸ್ಕೃತಿಕ ನೆಲಗಟ್ಟಿನ ನಾಡು. ಅನೇಕ ಸಾಧು-ಸಂತರು, ದಾರ್ಶನಿಕರು ಭವ್ಯವಾದ ಭಾರತ ದೇಶ ಕಟ್ಟಲು ತಮ್ಮನ್ನು ತಾವೇ ಧಾರೆ ಎರೆದುಕೊಂಡಿದ್ದು, ಅವರನ್ನೆಲ್ಲ ನಾವು ಸದಾ ಸ್ಮರಿಸಬೇಕು.
ಬೇಲೂರು, ಹಳೇಬೀಡು, ಸೋಮನಾಥಪುರ, ಶೃಂಗೇರಿ, ಬಾದಾಮಿ, ಬನವಾಸಿ ಹೀಗೆ ರಾಜ್ಯದೆಲ್ಲೆಡೆ ವಿಶೇಷ ಶಿಲ್ಪಕಲೆಗಳ ಸುಂದರ ಇತಿಹಾಸವನ್ನು ನಾವು ಹೊಂದಿದ್ದೇವೆ. ನಮ್ಮದು ದೇವ ನಿರ್ಮಿತ ದೇಶ, ಇದಕ್ಕೆ ಹುಟ್ಟಿದ ದಿನಾಂಕವಿಲ್ಲ. ಹಾಗೆಯೇ ಸಾವಿನ ದಿನಾಂಕವೂ ಇಲ್ಲದ ಚಿರಸ್ಥಾಯಿ ನಮ್ಮ ನೆಲೆವೀಡು. ಇದೇ ರೀತಿ ನಮ್ಮ ಅಮರಶಿಲ್ಪಿ ಜಕಣಾಚಾರಿಗಳೂ ಸಹ ಎಂದಿಗೂ ಅಮರ. ಇಂತಹ ಸಮಾಜದಲ್ಲಿ ನೀವು ಜನ್ಮ ಪಡೆದಿರುವುದು ನಿಜಕ್ಕೂ ಹೆಮ್ಮೆಯ ಸಂಗತಿಯಾಗಿದೆ.
ನಗರದ ಫ್ಲೈಓವರ್ ಅಥವಾ ಯಾವುದಾದರೂ ಮುಖ್ಯ ವೃತ್ತಕ್ಕೆ ಅಮರಶಿಲ್ಪಿ ಜಕಣಾಚಾರಿಗಳ ಹೆಸರನ್ನು ನಾಮಕರಣ ಮಾಡಬೇಕೆಂದು ಸಮಾಜದವರು ಮನವಿ ಮಾಡಿದ್ದೀರ. ಅಮರಶಿಲ್ಪಿಗಳ ಹೆಸರನ್ನು ನಾಮಕರಣ ಮಾಡುವುದು ನಮ್ಮ ಕರ್ತವ್ಯ ಕೂಡ ಆಗಿದೆ. ಇಲಾಖೆಯಿಂದ ಒಂದು ಪ್ರಸ್ತಾವನೆಯನ್ನು ಸಲ್ಲಿಸಿರಿ, ಖಂಡಿತವಾಗಿಯೂ ಅವರ ಹೆಸರನ್ನು ನಗರದ ಆಯಕಟ್ಟಿನ ಜಾಗಕ್ಕೆ ನಾಮಕರಣ ಮಾಡಲು ಸಹಕರಿಸುವುದಾಗಿ ಭರವಸೆ ನೀಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಸಿ ಎಸ್ ಚಂದ್ರಭೂಪಾಲ್ ಮಾತನಾಡಿ, ಅಮರಶಿಲ್ಪಿ ಜಕಣಾಚಾರಿಗಳು ಈ ದೇಶದ ಶಿಲ್ಪಕಲೆಗೆ ಅಪಾರ ಕೊಡುಗೆಯನ್ನಿತ್ತಿದ್ದು ಎಂದಿಗೂ ಸ್ಮರಣೀಯರು. ಇಂತಹ ಸಮಾಜದಲ್ಲಿ ಜನಿಸಿದ ನೀವೇ ಪುಣ್ಯವಂತರು. ನಿಮ್ಮ ಸಮಾಜ ಯಾವತ್ತೂ ಇತರೆ ಸಮಾಜಗಳನ್ನು ಅತ್ಯಂತ ಗೌರವ, ಪ್ರೀತಿ, ವಿಶ್ವಾಸದಿಂದ ಕಾಣುತ್ತಾ ಬಂದಿದ್ದು, ಜಕಣಾಚಾರಿಯವರ ಹೆಸರನ್ನು ನಗರದ ಪ್ರಮುಖ ವೃತ್ತಕ್ಕೆ ನಾಮಕರಣ ಮಾಡಲು ತಮ್ಮ ಸಂಪೂರ್ಣ ಸಹಕಾರ ಇದ್ದು ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಮಾತನಾಡುವುದಾಗಿ ತಿಳಿಸಿದರು.

S. N. Channabasappa ರಾಣೆಬೆನ್ನೂರಿನ ಶ್ರೀ ವಿಶ್ವವಿಭು ರೇಕಿ ಧ್ಯಾನಪೀಠದ ಮೌನೇಶ್ವರ ಆಚಾರ್ಯ ಇವರು ವಿಶೇಷ ಉಪನ್ಯಾಸ ನೀಡಿ ಮಾತನಾಡಿ, ವಿಶ್ವಕರ್ಮ ಪರಂಪರೆ ಪ್ರತಿಭಾವಂತರ, ತಂತ್ರಜ್ಞಾನರ, ಪಂಚವೇದದ, ಪಂಚ ಶಕ್ತಿ, ಪಂಚ ವಿಜ್ಞಾನಗಳ ಪರಂಪರೆ ಹೊಂದಿದೆ. ಶಿಲ್ಪಗಳ ರಚನೆಯಿಂದ ಸೌಂದರ್ಯದ ಬೀಡು ಮತ್ತು ಭಕ್ತಿಯ ನೆಲೆಯನ್ನಾಗಿ ಈ ನಾಡನ್ನು ರೂಪಿಸಿದೆ.
ತಮ್ಮ ಮಹಾನ್ ಶಿಲ್ಪಗಳ ಮೂಲಕ ಭಕ್ತಿಯ ಬೀಜ ಬಿತ್ತಿದ ಮಹತ್‌ಶಿಲ್ಪಿ ಜಕಣಾಚಾರಿ. ವಿಶ್ವಕರ್ಮ ಪರಂಪರೆ ಪ್ರಾಚೀನವಾದ ಐದು ವೇದಗಳನ್ನು ಮಾನ್ಯ ಮಾಡುತ್ತದೆ. ಮತ್ತು ಅದಕ್ಕೆ ತಕ್ಕಂತೆ ಆಚರಣೆಗಳು ಇರುತ್ತವೆ. ದೇವಶಿಲ್ಪ ಮತ್ತು ಮಾನವ ಶಿಲ್ಪ ಎಂಬ ಪ್ರಕಾರಗಳಿದ್ದು ವೇದಗಳ ಆಚರಣೆ ಅನುಸಾರ ಈ ಶಿಲ್ಪಕಲೆಗಳನ್ನು ಕೆತ್ತಲಾಗುತ್ತದೆ ಎಂದು ಮಾಹಿತಿ ನೀಡಿದ ಅವರು ಅಮರಶಿಲ್ಪಿ ಜಕಣಾಚಾರಿಗಳ ಜೀವನ ಚರಿತ್ರೆ ಕುರಿತು ವಿವರಣೆ ನೀಡಿದರು.

ಜಿಲ್ಲಾ ವಿಶ್ವಕರ್ಮ ಮಹಾಸಭಾದ ಗೌರವ ಅಧ್ಯಕ್ಷ ಸತ್ಯನಾರಾಯಣ, ಜಿಲ್ಲಾ ವಿಶ್ವಕರ್ಮ ಮಹಾಸಭಾ ಅಧ್ಯಕ್ಷ ಅಗರದಹಳ್ಳಿ ನಿರಂಜನಮೂರ್ತಿ, ವಿಶ್ವಕರ್ಮ ಸಮಾಜದ ಅನ್ನಪೂರ್ಣ ಕಾಳಾಚಾರ್, ರಮೇಶ್, ಶ್ರೀನಿವಾಸಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್, ಸಮಾಜದ ಮುಖಂಡರು ಪಾಲ್ಗೊಂಡಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...