Friday, March 20, 2026
Friday, March 20, 2026

Rangayana “ಸ್ವಾತಂತ್ರ್ಯದ ಓಟ” ನಾಟಕದಲ್ಲಿ ಅಭಿನಯಿಸಲು ಕಲಾವಿದರಿಗೆ “ರಂಗಾಯಣ”ದಿಂದ ಅರ್ಜಿ ಆಹ್ವಾನ

Date:

Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಈ ಯೋಜನೆಗೆ 2026 ರ ಫೆಬ್ರವರಿಯಿಂದ 2026 ರ ಜೂನ್‌ವರೆಗೆ ಐದು ತಿಂಗಳ ಅವಧಿಗೆ ರೆಪರ್ಟರಿ ಕಲಾವಿದರಲ್ಲದೇ 15 ಜನ ಆಸಕ್ತ ಹಾಗೂ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

Rangayana ಕಲಾವಿದರ ವಯಸ್ಸು ಕನಿಷ್ಟ 20 ರಿಂದ ಗರಿಷ್ಟ 40 ಇರಬೇಕು. ಆಯ್ಕೆಯಾದ ಕಲಾವಿದರಿಗೆ ಮಾಹೆಯಾನ ರೂ.22 ಸಾವಿರ ಗೌರವ ಸಂಭಾವನೆ, ಊಟ, ಉಪಹಾರ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಯೋಜನೆಯು 5 ತಿಂಗಳ ಅವಧಿಯಾಗಿದ್ದು ಅರ್ಜಿ ಸಲ್ಲಿಸಲು ಜ.16 ಕಡೆಯ ದಿನವಾಗಿರುತ್ತದೆ. ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿಗೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353, 7975229166 ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿಯೊಂದಿಗೆ ತಮ್ಮ ಇತ್ತೀಚಿನ ಭಾವಚಿತ್ರ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ರಂಗಭೂಮಿ ಅನುಭವದ ವಿವರ, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಬೇಕೆಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...