Sunday, August 2, 2026
Sunday, August 2, 2026

Rangayana “ಸ್ವಾತಂತ್ರ್ಯದ ಓಟ” ನಾಟಕದಲ್ಲಿ ಅಭಿನಯಿಸಲು ಕಲಾವಿದರಿಗೆ “ರಂಗಾಯಣ”ದಿಂದ ಅರ್ಜಿ ಆಹ್ವಾನ

Date:

Rangayana ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತರಾದ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ರಂಗಾಯಣ, ಶಿವಮೊಗ್ಗ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶಿಸುವ ಯೋಜನೆ ಹಮ್ಮಿಕೊಂಡಿದ್ದು, ಈ ಯೋಜನೆಗೆ 2026 ರ ಫೆಬ್ರವರಿಯಿಂದ 2026 ರ ಜೂನ್‌ವರೆಗೆ ಐದು ತಿಂಗಳ ಅವಧಿಗೆ ರೆಪರ್ಟರಿ ಕಲಾವಿದರಲ್ಲದೇ 15 ಜನ ಆಸಕ್ತ ಹಾಗೂ ಅನುಭವಿ ಕಲಾವಿದರಿಂದ ಅರ್ಜಿ ಆಹ್ವಾನಿಸಲಾಗಿದೆ.

Rangayana ಕಲಾವಿದರ ವಯಸ್ಸು ಕನಿಷ್ಟ 20 ರಿಂದ ಗರಿಷ್ಟ 40 ಇರಬೇಕು. ಆಯ್ಕೆಯಾದ ಕಲಾವಿದರಿಗೆ ಮಾಹೆಯಾನ ರೂ.22 ಸಾವಿರ ಗೌರವ ಸಂಭಾವನೆ, ಊಟ, ಉಪಹಾರ ಮತ್ತು ವಸತಿ ವ್ಯವಸ್ಥೆ ಒದಗಿಸಲಾಗುವುದು. ಯೋಜನೆಯು 5 ತಿಂಗಳ ಅವಧಿಯಾಗಿದ್ದು ಅರ್ಜಿ ಸಲ್ಲಿಸಲು ಜ.16 ಕಡೆಯ ದಿನವಾಗಿರುತ್ತದೆ. ಅರ್ಜಿಯನ್ನು ಆಡಳಿತಾಧಿಕಾರಿಗಳು, ರಂಗಾಯಣ, ಹೆಲಿಪ್ಯಾಡ್ ಹಿಂಭಾಗ, ಅಶೋಕನಗರ, ಶಿವಮೊಗ್ಗ 577201 ಇಲ್ಲಿಗೆ ಖುದ್ದಾಗಿ, ಅಂಚೆ ಮೂಲಕ ಅಥವಾ ಇ-ಮೇಲ್ admin.rangayanashivamogga@gmail.com ಮೂಲಕ ಕಳುಹಿಸಬಹುದಾಗಿದೆ. ಹೆಚ್ಚಿನ ಮಾಹಿತಿಗೆ ರಂಗಾಯಣ, ಶಿವಮೊಗ್ಗ ಕಚೇರಿ, ದೂರವಾಣಿ ಸಂಖ್ಯೆ : 08182-256353, 7975229166 ನ್ನು ಸಂಪರ್ಕಿಸಬಹುದಾಗಿದೆ. ಅರ್ಜಿಯೊಂದಿಗೆ ತಮ್ಮ ಇತ್ತೀಚಿನ ಭಾವಚಿತ್ರ, ಮೊಬೈಲ್ ಸಂಖ್ಯೆ, ವಿದ್ಯಾರ್ಹತೆ, ರಂಗಭೂಮಿ ಅನುಭವದ ವಿವರ, ಆಧಾರ್ ಕಾರ್ಡ್ ಪ್ರತಿಯನ್ನು ಲಗತ್ತಿಸಬೇಕೆಂದು ರಂಗಾಯಣ ಆಡಳಿತಾಧಿಕಾರಿ ಡಾ.ಶೈಲಜಾ ಎ ಸಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...