B. Y. Raghavendra ಶಿವಮೊಗ್ಗದ ಶ್ರೀ ಬೆಕ್ಕಿನಕಲ್ಮಠದಲ್ಲಿ ಆರಂಭಗೊಂಡಿರುವ ಪರಮ ತಪಸ್ವಿ ಲಿಂ. ಶ್ರೀ ಗುರುಬಸವ ಮಹಾಸ್ವಾಮಿಗಳವರ 114ನೇ ಪುಣ್ಯ ಸ್ಮರಣೋತ್ಸವ, 556ನೇ ಶಿವಾನುಭವ ಗೋಷ್ಠಿ ಹಾಗೂ ಶರಣ ಸಾಹಿತ್ಯ ಸಮ್ಮೇಳನದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಪಾಲ್ಗೊಂಡಿದ್ದರು.
ಶ್ರೀ ಮನ್ಮಹಾರಾಜ ನಿರಂಜನ ಜಗದ್ಗುರು ಶ್ರೀ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಮಹಾಸ್ವಾಮಿಗಳವರ ದಿವ್ಯ ಸಾನ್ನಿಧ್ಯದಲ್ಲಿ ನಡೆದ ಈ ಪವಿತ್ರ ಸಮಾರಂಭದಲ್ಲಿ, ಸಂಸದ ರಾಘವೇಂದ್ರರಿಗೆ “ಗುರುಬಸವಶ್ರೀ” ಪ್ರಶಸ್ತಿಯನ್ನ ನೀಡಲಾಯಿತು..
ಈ ಸನ್ಮಾನವನ್ನು ಪೂಜ್ಯರ ಪ್ರಸಾದ ಮತ್ತು ಆಶೀರ್ವಾದವೆಂದು ಭಾವಿಸುತ್ತೇನೆ. ಅತ್ಯಂತ ವಿನಮ್ರತೆಯಿಂದ ಸ್ವೀಕರಿಸಿದ್ದೇನೆ.
ಈ ಗೌರವಕ್ಕೆ ನಾನು ಸದಾ ಆಭಾರಿ ಎಂದು ಪ್ರಶಸ್ತಿ ಸ್ವೀಕರಿಸಿ ಸಂಸದ ರಾಘವೇಂದ್ರ ನುಡಿದರು.
B. Y. Raghavendra ಈ ಸಂದರ್ಭದಲ್ಲಿ ಶಿವಮೊಗ್ಗ ನಗರ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರಾದ ಶ್ರೀ ಬೋಜೇಗೌಡರು, ಶ್ರೀ ಎಸ್. ರುದ್ರೇಗೌಡರು, ಡಾ ಧನಂಜಯ್ ಸರ್ಜಿ , ಶ್ರೀ ಜ್ಯೋತಿಪ್ರಕಾಶ್ ಸೇರಿದಂತೆ ವೇದಿಕೆಯ ಮೇಲೆ ಅನೇಕ ಗಣ್ಯರು ಹಾಗೂ ಮಠದ ಭಕ್ತವೃಂದದವರು ಉಪಸ್ಥಿತರಿದ್ದರು.
