Friday, March 20, 2026
Friday, March 20, 2026

Scouts and Guides ಸ್ಕೌಟ್ಸ್ & ಗೈಡ್ಸ್ ನಲ್ಲಿ ಭಾಗವಹಿಸುವಿಕೆ: ನಾಯಕತ್ವ ಗುಣ ವೃದ್ಧಿಗೆ ಪ್ರೇರಕ- ರಾಜೇಶ್ ಅವಲಕ್ಕಿ

Date:

Scouts and Guides ಶಾಲೆಯಲ್ಲಿ ಮಕ್ಕಳು ಪಠ್ಯಪುಸ್ತಕ ತರಬೇತಿ ಜೊತೆಗೆ ಸ್ಕೌಟ್ಸ್ ಮತ್ತು ಗೈಡ್ಸ್ ನಂತಹ ಕ್ರಿಯಾತ್ಮಕ ಚಟುವಟಿಕೆಗಳಲ್ಲಿ ಭಾಗವಹಿಸುವುದರಿಂದ ನಾಯಕತ್ವ ಗುಣ ವೃದ್ಧಿಸುತ್ತದೆ ಎಂದು ಸ್ಕೌಟ್ಸ್ ಆಂಡ್ ಗೈಡ್ಸ್ ನ ಸ್ಥಳೀಯ ಸಂಸ್ಥೆಗಳ ಕಾರ್ಯದರ್ಶಿ ರಾಜೇಶ್ ಅವಲಕ್ಕಿ ಹೇಳಿದರು.

ಮೇರಿ ಇಮ್ಯಾಕ್ಯುಲೇಟ್ ಹೈಯರ್ ಪ್ರೈಮರಿ ಸ್ಕೂಲ್ ಓಲ್ಡ್ ಸ್ಟೂಡೆಂಟ್ಸ್ 1982ರ ಬ್ಯಾಚ್ ವಿದ್ಯಾರ್ಥಿಗಳಿಂದ ಶಾಲೆಯ 20 ಮಕ್ಕಳಿಗೆ ಗೈಡ್ಸ್ ಮಕ್ಕಳ ಯೂನಿಫಾರ್ಮ್ ವಿತರಣಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳುವ ಬಗ್ಗೆ ಹಾಗೂ ಸಮಾಜದಲ್ಲಿ ಬದುಕುವ ರೀತಿ ಕಲಿಸಿಕೊಡುತ್ತದೆ. ಕೌಶಲ್ಯದ ಜೊತೆ ಮನುಕುಲ ಸೇವೆ ಕಲ್ಪಿಸುವ ಸ್ಕೌಟ್ಸ್ ಆಂಡ್ ಗೈಡ್ಸ್ ಇಂದಿನ ಕಾಲಘಟ್ಟಕ್ಕೆ ಪ್ರಸ್ತುತ ಎಂದು ತಿಳಿಸಿದರು.

ಶಾಲೆಯ ಪ್ರಾಚಾರ್ಯ ಸಿಸ್ಟರ್ ಬೆನಿಕ್ಟ ಡಿಸೋಜಾ ಮಾತನಾಡಿ, ಶಿಕ್ಷಣ ಸಂಸ್ಥೆಯಲ್ಲಿ ಸಾವಿರಾರು ವಿದ್ಯಾರ್ಥಿಗಳು ಶಿಕ್ಷಣ ಪಡೆದು, ದೇಶವಿದೇಶದಲ್ಲಿ ಖ್ಯಾತಿ ಹೊಂದಿದ್ದಾರೆ. ಆದರೆ ಕಡಿಮೆ ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರ ನೆನೆದು ಈ ಶಿಕ್ಷಣ ಸಂಸ್ಥೆಗೆ ಅಪಾರ ಸೇವೆ ಸಲ್ಲಿಸುತ್ತ ಬಂದಿದ್ದಾರೆ. 1982ರಲ್ಲಿ ಓದಿದ ವಿದ್ಯಾರ್ಥಿ ವಿದ್ಯಾರ್ಥಿನಿಯರು ಅವರ ಈ ಶಾಲೆಗೆ ಸ್ವಯಂ ಪ್ರೇರಿತರಾಗಿ ಶಾಲಾ ಮಕ್ಕಳಿಗೆ ಆರೋಗ್ಯ ತಪಾಸಣೆ ಮತ್ತು ಸಮವಸ್ತ್ರಗಳ ಕೊಡುಗೆ, ವಿದ್ಯಾರ್ಥಿಗಳ ವಾರ್ಷಿಕ ಶುಲ್ಕ ಸಹಾಯ ಮಾಡುತ್ತಿದ್ದಾರೆ. ಇವರ ಸೇವೆ ಶಿಕ್ಷಣ ಸಂಸ್ಥೆಗೆ ನಿರಂತರವಾಗಿ ಮುಂದುವರೆಯಬೇಕು ಎಂದು ತಿಳಿಸಿದರು.

Scouts and Guides ಕಾರ್ಯಕ್ರಮದ ನಿರೂಪಣೆಯನ್ನು ಕ್ರಿಸ್ಟಿನಾ ಶೀಲ ನೆರವೇರಿಸಿದರು. ರವಿ ಕೋಟೋಜಿ, 1982ನೇ ಸಾಲಿನ ವಿದ್ಯಾರ್ಥಿಗಳಾದ ಸಂತೋಷ್, ಧರ್ಮೇಂದ್ರ ಸಿಂಗ್, ಜಾನಿ ಜೋಸೆಫ್, ಟ್ರೆಸ್ಸಿ ಫರ್ನಾಂಡಿಸ್, ಕ್ರಿಸ್ಟಫರ್ ನಟರಾಜ್, ಅಲ್ಲುಲ್ಲ ಖಾನ್, ಸುಹಾಸ್ ಇತರರು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...