Monday, February 2, 2026
Monday, February 2, 2026

Department of Railway ಸಂಕ್ರಾಂತಿ ವಿಶೇಷ ತಾಳಗುಪ್ಪ- ಯಶವಂತಪುರ ನಡುವೆ ವಿಶೇಷ ರೈಲುಗಳ ಸಂಚಾರ

Date:

Department of Railway ಸಂಕ್ರಾಂತಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಸುಗಮ ಪ್ರಯಾಣಕ್ಕೆ ಅನುವು ಮಾಡಿಕೊಡಲು, ನೈಋತ್ಯ ರೈಲ್ವೆಯು ಯಶವಂತಪುರ ಮತ್ತು ತಾಳಗುಪ್ಪ ನಿಲ್ದಾಣಗಳ ನಡುವೆ ಎರಡು ವಿಶೇಷ ಎಕ್ಸ್‌ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ.

ರೈಲು ಸಂಖ್ಯೆ 06585 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 13.01.2026 ರಂದು (ಮಂಗಳವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು, ರೈಲು ಸಂಖ್ಯೆ 06586 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 14.01.2026 ರಂದು (ಬುಧವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅಂದೇ ಸಂಜೆ 05:15ಕ್ಕೆ ಯಶವಂತಪುರ ತಲುಪಲಿದೆ.

ಈ ವಿಶೇಷ ರೈಲು ಥಮ ದರ್ಜೆ ಎಸಿ (1), ಎಸಿ ಟು ಟೈರ್ (2), ಎಸಿ ತ್ರೀ-ಟೈರ್ (6), ಸ್ಲೀಪರ್ ಕ್ಲಾಸ್ (8), ಜನರಲ್ ಸೆಕೆಂಡ್ ಕ್ಲಾಸ್ (3) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 22 ಬೋಗಿಗಳನ್ನು ಒಳಗೊಂಡಿರುತ್ತದೆ.

ಅದೇ ರೀತಿ, ರೈಲು ಸಂಖ್ಯೆ 06587 ಯಶವಂತಪುರ-ತಾಳಗುಪ್ಪ ವಿಶೇಷ ಎಕ್ಸ್‌ಪ್ರೆಸ್ ರೈಲು ದಿನಾಂಕ 23.01.2026 ರಂದು (ಶುಕ್ರವಾರ) ರಾತ್ರಿ 10:45ಕ್ಕೆ ಯಶವಂತಪುರದಿಂದ ಹೊರಟು, ಮರುದಿನ ಬೆಳಗಿನ ಜಾವ 04:45ಕ್ಕೆ ತಾಳಗುಪ್ಪ ತಲುಪಲಿದೆ. ಇದರ ಜೋಡಿ ರೈಲು, ರೈಲು ಸಂಖ್ಯೆ 06588 ತಾಳಗುಪ್ಪ-ಯಶವಂತಪುರ ವಿಶೇಷ ಎಕ್ಸ್‌ಪ್ರೆಸ್ ದಿನಾಂಕ ರೈಲು 24.01.2026 ರಂದು (ಶನಿವಾರ) ಬೆಳಿಗ್ಗೆ 10:00ಕ್ಕೆ ತಾಳಗುಪ್ಪದಿಂದ ಹೊರಟು, ಅದೇ ದಿನ ಸಂಜೆ 05:15 ಕ್ಕೆ ಯಶವಂತಪುರ ತಲುಪಲಿದೆ.

Department of Railway ಈ ವಿಶೇಷ ರೈಲುಗಳು ಎರಡೂ ದಿಕ್ಕುಗಳಲ್ಲಿ ಸಂಚರಿಸುವಾಗ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ತರೀಕೆರೆ, ಭದ್ರಾವತಿ, ಶಿವಮೊಗ್ಗ ಟೌನ್, ಆನಂದಪುರಂ ಮತ್ತು ಸಾಗರ ಜಂಬಗಾರು ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿವೆ.

ಈ ವಿಶೇಷ ರೈಲು ಪ್ರಥಮ ದರ್ಜೆ ಕಮ್ ಎಸಿ ಟು ಟೈರ್ (1), ಎಸಿ ತ್ರೀ-ಟೈರ್ (2), ಸ್ಲೀಪರ್ ಕ್ಲಾಸ್ (10), ಜನರಲ್ ಸೆಕೆಂಡ್ ಕ್ಲಾಸ್ (5) ಮತ್ತು ಎಸ್‌ಎಲ್‌ಆರ್/ಡಿ (2) ಬೋಗಿಗಳು ಸೇರಿದಂತೆ 20 ಬೋಗಿಗಳನ್ನು ಒಳಗೊಂಡಿರುತ್ತದೆ.

ಪ್ರಯಾಣಿಕರು ಈ ವಿಶೇಷ ರೈಲು ಸೇವೆಯ ಲಾಭವನ್ನು ಪಡೆದುಕೊಳ್ಳಲು ಹಾಗೂ ಮುಂಚಿತವಾಗಿ ತಮ್ಮ ಪ್ರಯಾಣವನ್ನು ಯೋಜಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...