Wednesday, September 16, 2026
Wednesday, September 16, 2026

National Youth Day ಭಾರತಕ್ಕೊಂದೇ ಅಲ್ಲ, ಇಡೀ ವಿಶ್ವಕ್ಕೇ ವಿವೇಕಾನಂದರು ಆಧ್ಯಾತ್ಮಿಕ ಗುರು : ಮಹೇಶ್ ಖಾರ್ವಿ

Date:

National Youth Day ಸ್ವಾಮಿ ವಿವೇಕಾನಂದರು ಭಾರತಕ್ಕೆ ಮಾತ್ರವಲ್ಲದೇ ಪ್ರಪಂಚದ ಇತರೆ ದೇಶಗಳಿಗೂ ಸಹ ಅವರ ತತ್ವಗಳು, ಬದುಕಿದ ಹಾದಿ, ಯುವ ಜನತೆಗೆ ನೀಡಿದ ಸ್ಫೂರ್ತಿಯ ಕರೆಗಳಿಂದ ಅವರು ಇಂದಿಗೂ ಎಂದೆಂದಿಗೂ ಆಧ್ಯಾತ್ಮಿಕ ಗುರು ಎಂದು ಯುವಾ ಬ್ರಿಗೇಡ್ ಜಿಲ್ಲಾ ಸಂಚಾಲಕ ಮಹೇಶ್ ಖಾರ್ವಿ ಹೇಳಿದರು.

ಸೊರಬ ಪಟ್ಟಣದ ಹೊಸಪೇಟೆ ಬಡಾವಣೆಯ ಶ್ರೀ ಸ್ವಾಮಿ ವಿವೇಕಾನಂದ ವೃತ್ತದಲ್ಲಿ ಯುವಾ ಬ್ರಿಗೇಡ್ ವತಿಯಿಂದ ವಿವೇಕಾನಂದ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಸ್ವಾಮಿ ವಿವೇಕಾನಂದರ ಜನ್ಮ ದಿನದಂದು ರಾಷ್ಟ್ರೀಯ ಯುವ ದಿನ ಆಚರಣೆ ಮಾಡಬೇಕು ಎಂದು ಕೇಂದ್ರ ಸರ್ಕಾರ ಘೋಷಣೆ ಮಾಡಿದೆ. ವಿಶ್ವಕ್ಕೆ ಭಾರತದ ಬಗ್ಗೆ ಹೆಮ್ಮೆ ಪಡುವಂತೆ ಚಿಕಾಗೋದಲ್ಲಿ ಭಾಷಣ ಮಾಡಿದರು.

ಹಿಂದೂ ಧರ್ಮವು ಒಂದು ಶ್ರೇಷ್ಠ ಧರ್ಮ ಎಂಬ ಭಾವನೆ ಮೂಡಿಸಿದರು. ಯುವ ಸಮೂಹದ ಶಕ್ತಿ, ಸಾಮರ್ಥ್ಯದ ಬಗ್ಗೆ ವಿಶ್ವಕ್ಕೆ ಸಾರಿ ಹೇಳಿದವರಲ್ಲಿ ಸ್ವಾಮಿ ವಿವೇಕಾನಂದರು ಮೊದಲಿಗರು ಎಂದರು.

National Youth Day ಈ‌ ಸಂದರ್ಭದಲ್ಲಿ ಯುವಾ ಬ್ರಿಗೇಡ್ ತಾಲೂಕು ಸಂಚಾಲಕ ರಂಗನಾಥ ಮೊಗವೀರ್, ಪ್ರಜಾ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಮಂಜುನಾಥ ಶೆಟ್ಟಿ, ಪ್ರಮುಖರಾದ ಬಸವರಾಜ ಪಾಟೀಲ್, ಚಂದ್ರಶೇಖರ ಜೈನ್, ಲಕ್ಷ್ಮೀಶ, ಅಣ್ಣಪ್ಪ, ರಾಘು ಆಚಾರ್, ಶಿವಕುಮಾರ್, ಸಲೀಂ, ಓಂಕಾರಪ್ಪ, ಷಣ್ಮುಖ, ಮಧನ್ ಚಂದ್ರಗುತ್ತಿ, ಮಧನ್ ಕುಮಾರ್, ಚಂದು ತಾವರೆಹಳ್ಳಿ ಸೇರಿದಂತೆ ಇತರರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...