Monday, February 2, 2026
Monday, February 2, 2026

Bharat Scouts and Guides ಸ್ಕೌಟ್ಸ್ & ಗೈಡ್ಸ್ ಚಟುವಟಿಕೆಗಳಲ್ಲಿ ಶಿವಮೊಗ್ಗ ಜಿಲ್ಲೆಯು ಭಾರತಕ್ಕೇ ಮಾದರಿ: ಶಾಸಕ ಡಿ.ಎಸ್.ಅರುಣ್

Date:

Bharat Scouts and Guides ಜೀವನ ಹಾಗೂ ವೃತ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಲು ಕೌಶಲ್ಯಗಳು ಅಗತ್ಯ ಎಂದು ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಹೇಳಿದರು.

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಶತಮಾನೋತ್ಸವದ ಸಮಾರೋಪ ಸಮಾರಂಭದಲ್ಲಿ ಮಾತನಾಡಿ, ಪ್ರತಿಯೊಂದು ಕ್ಷೇತ್ರದಲ್ಲೂ ಇಂದು ಕೌಶಲ್ಯದ ಕೊರತೆ ಎದ್ದು ಕಾಣಿಸುತ್ತಿದೆ. ಶಿಕ್ಷಣದ ಜತೆಗೆ ಮಕ್ಕಳಿಗೆ ಕೌಶಲ್ಯವನ್ನು ಕಲಿಸಬೇಕಿದೆ. ತಂತ್ರಜ್ಞಾನ ಮುಂದುವರೆದ ಹಾಗೆ ಉದ್ಯೋಗ ಹಾಗೂ ಖಾಸಗಿ ಕ್ಷೇತ್ರಗಳಲ್ಲಿ ವಿಫುಲವಾದ ಅವಕಾಶಗಳಿವೆ. ಪ್ರತಿಯೊಂದು ಹಂತದಲ್ಲೂ ಕೌಶಲ್ಯ ತುಂಬಾ ಮುಖ್ಯ ಎಂದು ತಿಳಿಸಿದರು.

ಮಕ್ಕಳಿಗೆ ಮಾನವೀಯ ಗುಣಗಳ ಜೊತೆಗೆ ದೈಹಿಕ ಹಾಗೂ ಮಾನಸಿಕ ಸದೃಢತೆಗೆ ಸ್ಕೌಟ್ಸ್ ಅಂಡ್ ಗೈಡ್ಸ್ ಪ್ರೇರೇಪಣೆ ಆಗಿದೆ. ಪ್ರಪಂಚಾದ್ಯಂತ ನೂರಾರು ದೇಶಗಳಲ್ಲಿ ವಿಶೇಷ ಕಾರ್ಯಗಳನ್ನು ಮಾಡುತ್ತ ತನ್ನದೇ ಆದ ಛಾಪು ಮೂಡಿಸಿದೆ. ಸಾಂಸ್ಕೃತಿಕ ಹಾಗೂ ಕ್ರೀಡೆಯ ಬಗ್ಗೆ ಮಕ್ಕಳು ಆಸಕ್ತಿ ವಹಿಸುವಂತೆ ಪೋಷಕರು, ಶಿಕ್ಷಕರು ಗಮನಹರಿಸಬೇಕು. ಶಿವಮೊಗ್ಗ ಜಿಲ್ಲೆಯಲ್ಲಿ ಸ್ಕೌಟ್ಸ್ ಅಂಡ್ ಗೈಡ್ಸ್ ಗೆ ಅನೇಕರು ವಿಶೇಷವಾದ ಕೊಡುಗೆ ನೀಡುತ್ತಾ ಬಂದಿದ್ದಾರೆ. ಈ ನಿಟ್ಟಿನಲ್ಲಿ ನಮ್ಮ ಶಿವಮೊಗ್ಗ ಭಾರತಕ್ಕೆ ಮಾದರಿಯಾಗಿದೆ ಎಂದರು.

ಶತಮಾನೋತ್ಸವದ ಅಂಗವಾಗಿ ಕಟ್ಟಡ ನಿರ್ಮಿಸಲು ಆರ್ಥಿಕ ನೆರವು ನೀಡುತ್ತೇನೆ ಎಂದು ಭರವಸೆ ನೀಡಿದರು.

Bharat Scouts and Guides ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಆಯುಕ್ತೆ ಶಕುಂತಲಾ ಚಂದ್ರಶೇಖರ್, ಭಾರತಿ ಚಂದ್ರಶೇಖರ್, ರಾಜ್ಯ ಉಪಾಧ್ಯಕ್ಷ ಮಹೇಶ್, ಆಯುಕ್ತ ಕೆ.ರವಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯಕುಮಾರ್, ಚೂಡಾಮಣಿ ಪವಾರ್, ಎಸ್.ಜಿ.ಆನಂದ್, ಜಿಲ್ಲಾ ಕಾರ್ಯದರ್ಶಿ ಕೆ.ವಿ.ಚಂದ್ರಶೇಖರಯ್ಯ, ಲಕ್ಷ್ಮೀ ರವಿ, ಮಲ್ಲಿಕಾರ್ಜುನ್ ಕಾನೂರು, ದೀಪು, ರೇಣುಕಾ, ಶಿವಶಂಕರ್, ಕೆ.ರವಿ, ರಾಜ್ಯ ಕಾರ್ಯದರ್ಶಿ ಕೆ.ಗಂಗಪ್ಪ ಗೌಡ, ಪರಮೇಶ್ವರಯ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...