Thursday, June 18, 2026
Thursday, June 18, 2026

S.N. Channabasappa ಫಲಾನುಭವಿಗಳಿಗೆ ತಕ್ಷಣ ಹಕ್ಕುಪತ್ರ ವಿತರಿಸಿ – ಎಸ್.ಎನ್.ಚನ್ನಬಸಪ್ಪ.

Date:

S.N. Channabasappa “ನಗರದ ಶಾಂತಿನಗರ, ಟಿಪ್ಪು ನಗರ ಹಾಗೂ ಚಿಕ್ಕಮಟ್ಟಿ ಕ್ಯಾಂಪ್ (ತ್ರಿಮೂರ್ತಿ ನಗರ) ಬಡಾವಣೆಗಳಲ್ಲಿ ಈಗಾಗಲೇ ಹಕ್ಕುಪತ್ರಗಳು ತಯಾರಾಗಿದ್ದು, ಅವುಗಳನ್ನು ತಕ್ಷಣವೇ ಫಲಾನುಭವಿಗಳಿಗೆ ತಲುಪಿಸಲು ಕ್ರಮ ಕೈಗೊಳ್ಳಬೇಕು” ಎಂದು ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಕೊಳಚೆ ನಿರ್ಮೂಲನ ಮಂಡಳಿಯ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಇಂದು ನಗರದ ಕರ್ನಾಟಕ ಕೊಳಚೆ ನಿರ್ಮೂಲನ ಮಂಡಳಿ (KSDB) ಕಚೇರಿಯಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ಸಿದ್ಧವಿರುವ ದಾಖಲೆಗಳನ್ನು ಹಸ್ತಾಂತರಿಸುವಲ್ಲಿ ವಿಳಂಬ ಮಾಡಬಾರದು ಎಂದು ತಾಕೀತು ಮಾಡಿದರು.

S.N. Channabasappa ಜೊತೆಗೆ, ಸರ್ಕಾರಿ ಜಾಗಗಳಲ್ಲಿರುವ ನಿವಾಸಿಗಳಿಗೆ ಪಹಣಿಯಲ್ಲಿ ದಾಖಲೆಗಳನ್ನು ಸರಿಪಡಿಸಿ ಹಕ್ಕುಪತ್ರ ಒದಗಿಸುವುದು ಹಾಗೂ ಸರ್ಕಾರದ ಹಂತದಲ್ಲಿ ಬಾಕಿ ಇರುವ ಪ್ರದೇಶಗಳ ಇತ್ಯರ್ಥಕ್ಕೆ ಜಿಲ್ಲಾಧಿಕಾರಿಗಳ ಮೂಲಕ ಪ್ರಸ್ತಾವನೆ ಸಲ್ಲಿಸಲು ಸಭೆಯಲ್ಲಿ ತೀರ್ಮಾನಿಸಲಾಯಿತು. ಕಂದಾಯ ಮತ್ತು ಸರ್ವೆ ಇಲಾಖೆಯೊಂದಿಗೆ ಸಮನ್ವಯ ಸಾಧಿಸಿ ಹಕ್ಕುಪತ್ರ ವಿತರಣಾ ಪ್ರಕ್ರಿಯೆಯನ್ನು ಸಮರೋಪಾದಿಯಲ್ಲಿ ಪೂರ್ಣಗೊಳಿಸುವಂತೆ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಬಡವರ ಹಕ್ಕುಗಳ ವಿಷಯದಲ್ಲಿ ವಿಳಂಬ ಧೋರಣೆ ಸಹಿಸುವುದಿಲ್ಲ. ವಿವಿಧ ಇಲಾಖೆಗಳ ನಡುವಿನ ಸಮನ್ವಯದ ಕೊರತೆಯಿಂದ ಹಕ್ಕುಪತ್ರ ವಿತರಣೆ ಕುಂಠಿತವಾಗಬಾರದು. ಮುಂದಿನ ದಿನಗಳಲ್ಲಿ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಂಟಿ ಸಭೆ ನಡೆಸಿ ಸಾರ್ವಜನಿಕರ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುವುದು” ಎಂದು ಅವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...