Shri Saraswati Music Institute ಶಿವಮೊಗ್ಗದ ಶ್ರೀ ಸರಸ್ವತಿ ಸಂಗೀತ ವಿದ್ಯಾಲಯದ ರಜತ ಮಹೋತ್ಸವದ ಅಂಗವಾಗಿ, ಸುಶ್ರಾವ್ಯ ಸಂಗೀತ ವಿದ್ಯಾಲಯ ಹಾಗೂ ಶ್ರೀ ಸಾಯಿಶಕ್ತಿ ಸಂಗೀತ ವಿದ್ಯಾಲಯಗಳ ಸಹಯೋಗದೊಂದಿಗೆ ‘ವೀಣಾ ತ್ರಿಶತೋತ್ಸವ’ ಕಾರ್ಯಕ್ರಮವನ್ನು
ಆಯೋಜಿಸಲಾಗಿತ್ತು
ಮೈಸೂರು ರಾಜವಂಶಸ್ಥರು ಹಾಗೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಶ್ರೀ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರೊಂದಿಗೆ ಸಂಸದ ಬಿ.ವೈ.ರಾಘವೇಂದ್ರ ಉದ್ಘಾಟಿಸಿದರು.
ಒಂದೇ ವೇದಿಕೆಯಲ್ಲಿ ‘301 ವೀಣಾ ನಾದ ಝೇಂಕಾರ’ ಮೊಳಗಿದ್ದು ನಿಜಕ್ಕೂ ರೋಮಾಂಚನಕಾರಿ ಮತ್ತು ಕಿವಿಗೆ ಇಂಪಾದ ಅನುಭವವಾಗಿತ್ತು. ನಮ್ಮ ಶಾಸ್ತ್ರೀಯ ಸಂಗೀತ ಪರಂಪರೆಯನ್ನು ಉಳಿಸಿ, ಬೆಳೆಸುತ್ತಿರುವ ಈ ಸಂಸ್ಥೆಗಳ ಕಾರ್ಯ ಶ್ಲಾಘನೀಯ.
Shri Saraswati Music Institute ಈ ಸಂದರ್ಭದಲ್ಲಿ ಶ್ರೀ ಡಿ. ಎಸ್. ಅರುಣ್ ವಿಧಾನ ಪರಿಷತ್ ಸದಸ್ಯರು, ಡಾ. ಧನಂಜಯ್ ಸರ್ಜಿ ವಿಧಾನ ಪರಿಷತ್ ಸದಸ್ಯರು, ಶಿವಮೊಗ್ಗ ನಗರದ ಶಾಸಕರಾದ ಎಸ್. ಏನ್ ಚೆನ್ನಬಸಪ್ಪ, ಶ್ರೀ ಕೆ. ಬಿ. ಪ್ರಸನ್ನ ಕುಮಾರ್ ಮಾಜಿ ಶಾಸಕರು, ಶ್ರೀಮತಿ ರೇವತಿ ಕಾಮತ್, ಶ್ರೀ ಉಮೇಶ್ ಹಾಲಾಡಿ ಸೇರಿದಂತೆ ವೇದಿಕೆಯಲ್ಲಿ ಅನೇಕ ಗಣ್ಯರು ಉಪಸ್ಥಿತರಿದ್ದರು.
