Friday, May 15, 2026
Friday, May 15, 2026

CM Siddharamaiah ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರದಿಂದಲೂ ಸರ್ವಧರ್ಮಗಳ ಸಮನ್ವಯತೆ ಪಾಲನೆ- ಸಿದ್ಧರಾಮಯ್ಯ

Date:

CM Siddharamaiah ಚಾಲುಕ್ಯರು ನಿರ್ಮಿಸಿದ ದೇಗುಲಗಳ ವಾಸ್ತುಶಿಲ್ಪದ ಮಹತ್ವ ಅರಿಯುವ ಉದ್ದೇಶವನ್ನು ಚಾಲುಕ್ಯ ಉತ್ಸವ ಹೊಂದಿದೆ. ಬಾದಾಮಿ, ಐಹೊಳೆ, ಪಟ್ಟದಕಲ್ಲುಗಳ ವೈಭವವನ್ನು ವೀಕ್ಷಿಸಲು ದೇಶವಿದೇಶಗಳಿಂದ ಜನರು ಬರುತ್ತಾರೆ. ಚಾಲುಕ್ಯರ ಆಡಳಿತ ವೈಖರಿಯಂತೆ ನಮ್ಮ ಸರ್ಕಾರವೂ ಸರ್ವಧರ್ಮಗಳ ಸಮನ್ವಯತೆಯನ್ನು ಪಾಲಿಸುತ್ತದೆ.

ನಾನು ಮುಖ್ಯಮಂತ್ರಿಯಾಗಿ ಈ ಎರಡು ವರ್ಷದಲ್ಲಿ ಬಾದಾಮಿ ಕ್ಷೇತ್ರಕ್ಕೆ ಸುಮಾರು 2 ಸಾವಿರ ಕೋಟಿ ರೂ.ಗಳ ಅನುದಾನವನ್ನು ನೀಡಿದ್ದೇನೆ.
ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಐತಿಹಾಸಿಕ ಚಾಲುಕ್ಯ ಉತ್ಸವವನ್ನು ಉದ್ಘಾಟಿಸಿ ಅವರು ಬಾದಾಮಿಯ ಸಮಾರಂಭದಲ್ಲಿ ಮಾತನಾಡಿದರು.

ಬದಾಮಿ ಕ್ಷೇತ್ರದಲ್ಲಿ 1,400 ಕೋಟಿ ರೂ.ಗಳ ಏತನೀರಾವರಿ ಯೋಜನೆ ಕೈಗೆತ್ತಿಕೊಳ್ಳಲಾಗುವುದು. ಅಲ್ಲದೇ 400 ಕೋಟಿ ರೂ.ಗಳಲ್ಲಿ ಬಾದಾಮಿಗೆ ಕುಡಿಯುವ ನೀರಿನ ಯೋಜನೆ, 50 ಕೋಟಿ ರೂ.ಗಳಲ್ಲಿ ರಸ್ತೆ ಯೋಜನೆ ಸೇರಿದಂತೆ ಹಲವು ಅಭಿವೃದ್ದಿ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ನಮ್ಮ ಸರ್ಕಾರ ನುಡಿದಂತೆ ನಡೆಯುವ ಸರ್ಕಾರ.

ಐದು ವರ್ಷಗಳ ಕಾಲ ಬಾದಾಮಿ ಕ್ಷೇತ್ರದ ಶಾಸಕನಾಗಿದ್ದೆ, 2018ರಲ್ಲಿ ಎರಡು ಕ್ಷೇತ್ರಗಳಲ್ಲಿ ನಾನು ಸ್ಪರ್ಧಿಸಿದ್ದೆ, ಐದು ಬಾರಿ ಗೆದ್ದಿದ್ದ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಿಸಲಾಯಿತು. ಆದರೆ ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ನನ್ನನ್ನು ಗೆಲ್ಲಿಸಿದ್ದರು ಎನ್ನುವುದನ್ನು ಮರೆಯಲು ಸಾಧ್ಯವಿಲ್ಲ. ಬಾದಾಮಿ ಕ್ಷೇತ್ರಕ್ಕೆ ಬಂದು ಎರಡು ಅಥವಾ ಮೂರು ಬಾರಿ ಸಾರ್ವಜನಿಕ ಸಭೆಯಲ್ಲಿ ಭಾಷಣ ಮಾಡಿ ಜನರ ಆಶೀರ್ವಾದ ಬೇಡಿರಬಹುದು. ಇಲ್ಲಿನ ಜನರು ದೊಡ್ಡ ಮನಸ್ಸು ಮಾಡಿ ವಿಧಾನಸಭೆಗೆ ಕಳುಹಿಸಿಕೊಟ್ಟಿದ್ದರಿಂದ ಈಗ ವರುಣಾ ಕ್ಷೇತ್ರದಲ್ಲಿ ಗೆದ್ದು ಮುಖ್ಯಮಂತ್ರಿಯಾಗಲು ಸಾಧ್ಯವಾಯಿತು. ನಿಮ್ಮ ಉಪಕಾರವನ್ನು ನಾನೆಂದಿಗೂ ಮರೆಯುವುದಿಲ್ಲ.

ಬಾದಾಮಿ ಶಾಸಕನಾಗಿದ್ದ ಸಂದರ್ಭದಲ್ಲಿ ಚಾಲುಕ್ಯ ಉತ್ಸವ ನಡೆಯಲಿಲ್ಲ ಹಾಗೂ ಇಮ್ಮಡಿ ಪುಲಕೇಶಿ ಪ್ರತಿಮೆ ಸ್ಥಾಪನೆಯಾಗಲಿಲ್ಲ ಎನ್ನುವುದು ನೋವಿನ ಸಂಗತಿ. ಇಂದು ಭೀಮಸೇನಾ ಚಿಮ್ಮನಕಟ್ಟಿಯವರ ಒತ್ತಾಸೆಯಿಂದ ಪ್ರತಿಮೆ ಸ್ಥಾಪನೆಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ.

CM Siddharamaiah ಈ ವರ್ಷ ಚಾಲುಕ್ಯ ಉತ್ಸವ ನಡೆಯಲೇಬೇಕೆಂದು ಈ ಭಾಗದ ಶಾಸಕರ ಒತ್ತಾಸೆಯಾಗಿತ್ತು. ಇದರ ಮೇರೆಗೆ ಬಜೆಟ್ ನಲ್ಲಿಯೇ ಚಾಲುಕ್ಯ ಉತ್ಸವವನ್ನು ಘೋಷಣೆ ಮಾಡಲಾಯಿತು. ಮೂರು ಕೋಟಿ ರೂ.ಗಳನ್ನೂ ಇದಕ್ಕಾಗಿ ಒದಗಿಸಲಾಗಿದೆ. ಉತ್ಸವಕ್ಕೆ ಒಂದು ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ನೀಡಲಾಗುವುದು. ಇಮ್ಮಡಿ ಪುಲಕೇಶಿ ಪ್ರತಿಮೆ ಅನಾವರಣಕ್ಕೆ ಸರ್ಕಾರ ನೆರವು ಒದಗಿಸಲಿದೆ.

ಕೇಂದ್ರ ಸರ್ಕಾರದಿಂದ ನೆರವು ಒದಗಿಸುವುದಾಗಿ ಸಂಸದರು ತಿಳಿಸಿದ್ದು, ಇದಕ್ಕೆ ಮನವಿ ಪತ್ರವನ್ನು ನಾಳೆಯೇ ಕೊಡಲಾಗುವುದು. ಕೇಂದ್ರ ಸರ್ಕಾರ ನಮ್ಮ ಮನವಿಗಳಿಗೆ ಸ್ಪಂದಿಸುತ್ತಿಲ್ಲ ಎನ್ನುವ ಕಾರಣದಿಂದ ಇವರಿಗೆ ಮನವಿಯನ್ನು ನೀಡಿರಲಿಲ್ಲ. ಇದೇ ವೇಳೆ ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ನ್ಯಾಯಯುತ ಅನುದಾನವನ್ನು ಕೊಡಿಸಲು ಬಿಜೆಪಿ ಸಂಸದರು ಪ್ರಯತ್ನಿಸಬೇಕು
ಎಂದು ಸಿದ್ಧರಾಮಯ್ಯನವರು ಆಗ್ರಹಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...