ಬೆಂಗಳೂರಿನಲ್ಲಿ ನಡೆಯುವ ಅಂತರ್ರಾಷ್ಟ್ರೀಯ ವಾಣಿಜ್ಯ ಮೇಳ–2026ರ ಅಂಗವಾಗಿ ಸಿರಿಧಾನ್ಯಗಳ ಉತ್ಪಾದನೆ ಮತ್ತು ಅದರ ಬಳಕೆಯ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚಿನ ಅರಿವು ಮೂಡಿಸುವ ಉದ್ದೇಶದಿಂದ ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿ ಆವರಣದಿಂದ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಹಳೆ ತೀರ್ಥಹಳ್ಳಿ ರಸ್ತೆವರೆಗೆ ಸಿರಿಧಾನ್ಯ ಜಾಥಾವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಜಾಥಾದಲ್ಲಿ ಜಂಟಿ ಕೃಷಿ ನಿರ್ದೇಶಕ ಡಾ|| ಕಿರಣ್ಕುಮಾರ್ ಎಂ., ಸಿರಿಧಾನ್ಯಗಳ ಮಹತ್ವದ ಕುರಿತು ಮಾಹಿತಿ ನೀಡಿದರು. ನಂತರ ಅಪರ ಜಿಲ್ಲಾಧಿಕಾರಿ ಅಭಿಷೇಕ್ರವರು ಆರೋಗ್ಯದ ದೃಷ್ಠಿಯಿಂದ ಸಿರಿಧಾನ್ಯಗಳ ಸೇವನೆಯ ಪ್ರಾಮುಖ್ಯತೆ ಕುರಿತು ಮಾತನಾಡಿದರು. ಈ ಜಾಥಾದಲ್ಲಿ ಜಿಲ್ಲೆಯ ಕೃಷಿ ಇಲಾಖೆಯ ಎಲ್ಲಾ ಸಿಬ್ಬಂದಿ ವರ್ಗ, ಕರ್ನಾಟಕ ಪ್ರಾದೇಶಿಕ ಕೃಷಿಕ ಸಮಾಜ, ಬೆಂಗಳೂರು ಇದರ ಆಡಳಿತ ಅಧ್ಯಕ್ಷರಾದ ನಗರದ ಮಹದೇವಪ್ಪನವರು ಜಾಥಾಗೆ ಚಾಲನೆ ನೀಡಿದ್ದು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಹೆಚ್.ಎನ್. ನಾಗರಾಜ ಹಾಗೂ ಎಲ್ಲಾ ಸದಸ್ಯರು, ವಿವಿಧ ಇಲಾಖೆಗಳು, ಸಂಘ ಸಂಸ್ಥೆಗಳು, ಶಾಲಾ ಕಾಲೇಜು ವಿದ್ಯಾರ್ಥಿಗಳು ಆರೋಗ್ಯಕ್ಕಾಗಿ ಸಿರಿಧಾನ್ಯಗಳ ಮಹತ್ವವನ್ನು ಸಾರುವ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
