ಹುಂಚಾ ಗ್ರಾಮದ ಮಾರ್ನಮಿ ಬೈಲು ನಿವಾಸಿ ಧನುಷ್ ಎನ್.ಡಿ (25) ಜ. 19 ರಂದು ಬೆಳಿಗ್ಗೆ ಮನೆಯಿಂದ ಶಿವಮೊಗ್ಗದ ಮಹೇಂದ್ರ ಶೋರೂಮ್ಗೆ ತೆರಳುವುದಾಗಿ ಹೇಳಿ ಹೊರಟು ಹೋಗಿದ್ದು, ನಂತರ ಮನೆಗೂ ವಾಪಸ್ ಬಾರದೇ ಕಾಣೆಯಾಗಿರುವ ಘಟನೆ ನಡೆದಿದೆ.
ಧನುಷ್ ಶಿವಮೊಗ್ಗಕ್ಕೆ ತೆರಳಿದ ಬಳಿಕ ಕಾಣೆಯಾಗಿದ್ದು, ಸಂಬಂಧಿಕರು ಹಾಗೂ ಕುಟುಂಬಸ್ಥರು ಎಲ್ಲಾ ಕಡೆ ಹುಡುಕಾಟ ನಡೆಸಿದರೂ ಯಾವುದೇ ಸುಳಿವು ಲಭಿಸಿಲ್ಲ. ಈ ಹಿನ್ನೆಲೆಯಲ್ಲಿ ಕಾಣೆಯಾದ ಯುವಕನ ತಂದೆ ದಿನೇಶ್ ಮರಗಿ ಬಿನ್ ನಾಗಪ್ಪ ಮರಗಿ ಅವರು ನೀಡಿದ ದೂರಿನ ಆಧಾರದಲ್ಲಿ ರಿಪ್ಪನಪೇಟೆ ಪೊಲೀಸ್ ಠಾಣೆಯಲ್ಲಿ ಗುನ್ನೆ ನಂ. 09/2026, ಮನುಷ್ಯ ಕಾಣೆ ಪ್ರಕರಣ ದಾಖಲಿಸಿಕೊಂಡು ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಶಿವಮೊಗ್ಗಕ್ಕೆ ತೆರಳಿದ್ದ ಟೆಕ್ನಿಷಿಯನ್ ನಾಪತ್ತೆ
Date:
