ಶಿವಮೊಗ್ಗ ನಗರವನ್ನು ಮಾದರಿ ನಗರವನ್ನಾಗಿ ರೂಪಿಸುವ ನಿಟ್ಟಿನಲ್ಲಿ ಮೂಲಭೂತ ಸೌಕರ್ಯಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಇಂದು ನಗರದ ಬೊಮ್ಮನಕಟ್ಟೆ ಹಾಗೂ ನ್ಯೂ ಮಂಡ್ಲಿ ಪ್ರದೇಶಗಳಲ್ಲಿ ಸಾರ್ವಜನಿಕರ ಬಹುದಿನಗಳ ಬೇಡಿಕೆಯಾಗಿದ್ದ ಸುಸಜ್ಜಿತ ರಸ್ತೆ ನಿರ್ಮಾಣ ಹಾಗೂ ಯುಜಿಡಿ (UGD) ವ್ಯವಸ್ಥೆಯ ಅಭಿವೃದ್ಧಿ ಕಾಮಗಾರಿಗಳಿಗೆ ನ್ಯೂ ಮಂಡ್ಲಿ ಭೂಮಿಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು.
ಬಡಾವಣೆಗಳಲ್ಲಿ ಸುಗಮ ಸಂಚಾರ ಹಾಗೂ ನೈರ್ಮಲ್ಯ ಕಾಪಾಡುವುದು ನಮ್ಮ ಆದ್ಯತೆಯಾಗಿದ್ದು, ನಿಗದಿತ ಕಾಲಮಿತಿಯೊಳಗೆ ಗುಣಮಟ್ಟದ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜನರ ಅನುಕೂಲಕ್ಕಾಗಿ ಈ ಪ್ರದೇಶದ ಪ್ರತಿಯೊಂದು ಗಲ್ಲಿಯೂ ಅಭಿವೃದ್ಧಿ ಕಾಣಲಿದೆ.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾದ ಶ್ರೀ ನಾಗರಾಜ್, ಬಿಜೆಪಿ ಶಿವಮೊಗ್ಗ ನಗರದ ಪ್ರಧಾನ ಕಾರ್ಯದರ್ಶಿಗಳಾದ ನವಲೆ ಮಂಜು, ಸ್ಥಳೀಯ ಮುಖಂಡರು, ಮಹಾನಗರ ಪಾಲಿಕೆಯ ಅಧಿಕಾರಿಗಳು ಹಾಗೂ ಬಡಾವಣೆಯ ನಿವಾಸಿಗಳು ಉಪಸ್ಥಿತರಿದ್ದರು.
