ಜ. 27 ರ ನಾಳೆ ಸಂಜೆ 5:30ಕ್ಕೆ ಶಿವಮೊಗ್ಗದ ಹೆಸರಾಂತ ಭರತನಾಟ್ಯ ಶಾಲೆಯಾದ ನಟನಂ ಬಾಲ ನಾಟ್ಯ ಕೇಂದ್ರದ ನರ್ತನಾಂಕುರ – ೧ ಎಂಬ ಭರತನಾಟ್ಯ, ಜಾನಪದ ಹಾಗೂ ಫ್ಯೂಶನ್ ನೃತ್ಯದ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಹಾಗೂ ವಿದ್ವಾನ್ ಚೇತನ್ ಎಸ್, ಸಿ ವಿದುಷಿ ನಾಟ್ಯಶ್ರೀ ಚೇತನ್ ಇವರು ಪ್ರಸ್ತುತಪಡಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಹಾಕಾಳಿ ಸ್ತುತಿ, ಈಜಿಪ್ಟಿಯನ್ ವಿನ್ ಡ್ಯಾನ್ಸ್ ಮತ್ತು ಜಪಾನ್ ಫ್ಯಾನ್ ಡ್ಯಾನ್ಸ್ ಅಭಿನಯಿಸುತ್ತಿದ್ದಾರೆ.
ಶಿವಮೊಗ್ಗದ ನಮ್ಮ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಹೊಳೆ ಹೊನ್ನೂರಿನ ಹೊಸ ಶಾಖೆಯ 40 ವಿದ್ಯಾರ್ಥಿಗಳು ಸೇರಿ ಒಟ್ಟು 95 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನರ್ತಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಶೇಖರ್ ಅವರು ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವ್ ಕುಮಾರ್ ಪಿಳ್ಳೈ ಅವರು ಕೋರಿದ್ದಾರೆ.
ಜ.27 ರಂದು ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದಿಂದ ವಿಶೇಷ ನೃತ್ಯ ಕಾರ್ಯಕ್ರಮ
Date:
