Wednesday, September 16, 2026
Wednesday, September 16, 2026

ಜ.27 ರಂದು ಶಿವಮೊಗ್ಗದ ನಟನಂ ಬಾಲ ನಾಟ್ಯ ಕೇಂದ್ರದಿಂದ ವಿಶೇಷ ನೃತ್ಯ ಕಾರ್ಯಕ್ರಮ

Date:

ಜ. 27 ರ ನಾಳೆ ಸಂಜೆ 5:30ಕ್ಕೆ ಶಿವಮೊಗ್ಗದ ಹೆಸರಾಂತ ಭರತನಾಟ್ಯ ಶಾಲೆಯಾದ ನಟನಂ ಬಾಲ ನಾಟ್ಯ ಕೇಂದ್ರದ ನರ್ತನಾಂಕುರ – ೧ ಎಂಬ ಭರತನಾಟ್ಯ, ಜಾನಪದ ಹಾಗೂ ಫ್ಯೂಶನ್ ನೃತ್ಯದ ಕಾರ್ಯಕ್ರಮವನ್ನು ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವಕುಮಾರ್ ಪಿಳ್ಳೈ ಹಾಗೂ ವಿದ್ವಾನ್ ಚೇತನ್ ಎಸ್, ಸಿ ವಿದುಷಿ ನಾಟ್ಯಶ್ರೀ ಚೇತನ್ ಇವರು ಪ್ರಸ್ತುತಪಡಿಸಲಿದ್ದಾರೆ.
ಈ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿ ಮಹಾಕಾಳಿ ಸ್ತುತಿ, ಈಜಿಪ್ಟಿಯನ್ ವಿನ್ ಡ್ಯಾನ್ಸ್ ಮತ್ತು ಜಪಾನ್ ಫ್ಯಾನ್ ಡ್ಯಾನ್ಸ್ ಅಭಿನಯಿಸುತ್ತಿದ್ದಾರೆ.
ಶಿವಮೊಗ್ಗದ ನಮ್ಮ ಕೇಂದ್ರದ ವಿದ್ಯಾರ್ಥಿಗಳು ಹಾಗೂ ಹೊಳೆ ಹೊನ್ನೂರಿನ ಹೊಸ ಶಾಖೆಯ 40 ವಿದ್ಯಾರ್ಥಿಗಳು ಸೇರಿ ಒಟ್ಟು 95 ವಿದ್ಯಾರ್ಥಿಗಳು ಕಾರ್ಯಕ್ರಮದಲ್ಲಿ ನರ್ತಿಸಲಿದ್ದಾರೆ.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಆರ್ ಶೇಖರ್ ಅವರು ವಹಿಸಲಿದ್ದಾರೆ.
ಈ ಕಾರ್ಯಕ್ರಮಕ್ಕೆ ಕಲಾಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕಾಗಿ ಕರ್ನಾಟಕ ಕಲಾಶ್ರೀ ವಿದ್ವಾನ್ ಡಾ. ಎಸ್ ಕೇಶವ್ ಕುಮಾರ್ ಪಿಳ್ಳೈ ಅವರು ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...