Thursday, June 18, 2026
Thursday, June 18, 2026

ಫೆಬ್ರವರಿ 01 ರಂದು ಶಿವಮೊಗ್ಗದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮ

Date:

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಜಿಲ್ಲಾ ಮಡಿವಾಳ ಸಮಾಜ ಸಂಘ, ಶಿವಮೊಗ್ಗ ಇವರ ಸಂಯುಕ್ತಾಶ್ರಯದಲ್ಲಿ ಫೆಬ್ರವರಿ 01 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಕುವೆಂಪು ರಂಗಮಂದಿರದಲ್ಲಿ ಶ್ರೀ ಮಡಿವಾಳ ಮಾಚಿದೇವ ಜಯಂತಿಯನ್ನು ಆಯೋಜಿಸಲಾಗಿದೆ.
ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಹಾಗೂ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಮಧುಬಂಗಾರಪ್ಪ ಇವರು ಕಾರ್ಯಕ್ರಮದ ಉದ್ಘಾಟನೆ ನೆರವೇರಿಸುವರು. ಶಾಸಕರಾದ ಎಸ್.ಎನ್. ಚನ್ನಬಸಪ್ಪರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ತಂಗಡಗಿ ಶಿವರಾಜ್ ಸಂಗಪ್ಪರವರು ವಿಶೇಷ ಆಹ್ವಾನಿತರಾಗಿ ಉಪಸ್ಥಿತರಿರಲಿದ್ದಾರೆ.
ಸಂಸದರು, ವಿಧಾನಸಭಾ, ವಿಧಾನ ಪರಿಷತ್ ಶಾಸಕರು, ವಿವಿಧ ನಿಗಮ, ಮಂಡಳಿ, ಪ್ರಾಧಿಕಾರದ ಅಧ್ಯಕ್ಷರು, ಮಹಾನಗರಪಾಲಿಕೆ ಮಹಾಪೌರರು, ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದ ನಾಮ ನಿರ್ದೇಶಕರು,ಜಿಲ್ಲಾ ಮಡಿವಾಳ ಸಮಾಜದ ಅಧ್ಯಕ್ಷರು, ಜಿಲ್ಲಾಧಿಕಾರಿಗಳು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು, ಜಿ.ಪಂ ಸಿಇಓ, ಪಾಲಿಕೆ ಆಯುಕ್ತರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕರು, ಜನಪ್ರತಿನಿಧಿಗಳು, ಸರ್ಕಾರಿ ಅಧಿಕಾರಿಗಳು ಸೇರಿದಂತೆ ವಿವಿಧ ಸಂಘಟನೆ ಮುಖಂಡರು, ಪದಾಧಿಕಾರಿಗಳು ಪಾಲ್ಗೊಳ್ಳುವರು.
ಈ ಕಾರ್ಯಕ್ರಮದಲ್ಲಿ ಸಾಗರ ತಾಲೂಕು, ತ್ಯಾಗರ್ತಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಳೆಯ ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕ ನಾಗರಾಜ ಎ.ಎಂ.ರವರು ವಿಶೇಷ ಉಪನ್ಯಾಸ ನೀಡುವರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...