ಶಿವಮೊಗ್ಗ ಹಾಗೂ ಹೊಸನಗರ ತಾಲೂಕಿನ ಗಡಿ ಭಾಗದಲ್ಲಿ ಚಲಿಸುತ್ತಿದ್ದ ಬಸ್ ನಲ್ಲಿ ಕಾಣಿಸಿಕೊಂಡ ಬೆಂಕಿ ಘಟನೆ ನಡೆದಿದೆ.
ಶ್ರೀ ಅನ್ನಪೂರ್ಣೇಶ್ವರಿ ಎಂಬ ಖಾಸಗಿ ಬಸ್ ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅರಸಾಳು ಹಾಗೂ ಸುಡೂರು ಗ್ರಾಮಗಳ ಮಧ್ಯೆ ನಡೆದ ಈ ಘಟನೆ ಸಂಭವಿಸಿದೆ.
ಹೊಸನಗರದಿಂದ ಬೆಂಗಳೂರಿಗೆ ಹೊರಟಿದ್ದ ಸ್ಲೀಪರ್ ಬಸ್ ಇದಾಗಿದ್ದು,
ಚಾಲಕ ಸೇರಿದಂತೆ 40 ಜನ ಪ್ರಯಾಣಿಸುತಿದ್ದರು ಎನ್ನಲಾಗಿದೆ.
ಘಟನೆಯಲ್ಲಿ ಎಂಟು ಜನರಿಗೆ ಗಾಯಯಳಾಗಿವೆ.ರಸ್ತೆ ಪಕ್ಕದ ಮರಕ್ಕೆ ಡಿಕ್ಕಿಯಾದ ನಂತರ ಚಾಲಕ ಬಸ್ ನಿಲ್ಲಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಅಗ್ನಿಶಾಮಕದಳ, ಪೋಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.
