Monday, May 4, 2026
Monday, May 4, 2026

ಪತ್ರಿಕಾ ವಿತರಕರ ಒಕ್ಕೂಟದ ಕ್ಯಾಲೆಂಡರ್ ಬಿಡುಗಡೆ ಮಾಡಿದ ಚಲನ ಚಿತ್ರನಟ ಸೂರಜ್

Date:

ಕುಂಭಾಶಿ ಕ್ರಿಯೇಷನ್ ಲಾಂಛನದಲ್ಲಿ ಮೂಡಿ ಬರುತ್ತಿರುವ “ಪ್ರಣಯ “” ಕನ್ನಡ ಚಲನಚಿತ್ರದ ನಟ ಸೂರಜ್ ರವರು ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಘಟಕದ ತಾಲೂಕು ಮಟ್ಟದ ವಿತರಕರ ಕ್ಯಾಲೆಂಡರನ್ನು ವಿಶೇಷ ಪೂಜೆ ವಿಧಿ ವಿಧಾನದೊಂದಿಗೆ ಕ್ಷೇತ್ರ ದೇವತೆ ಶ್ರೀ ಹುಚ್ಚರಾಯ ಸ್ವಾಮಿ ದೇವಸ್ಥಾನದ ದೇವರ ಸನ್ನಿಧಿಯಲ್ಲಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ವಿತರಕ ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಮಾತನಾಡಿ ಪತ್ರಕರ್ತರು ಹಾಗೂ ವಿತರಕರು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಸಂಪಾದಕರು ಬಂಡವಾಳ ಹಾಕಿ ಶ್ರಮಿಸಿದರೆ ವರದಿಗಾರರು ಮುಂದಿನ ಸವಾಲುಗಳನ್ನು ಎದುರಿಸಿ ಸುದ್ದಿಗಳನ್ನು ತರುತ್ತಾರೆ. ಸಿಬ್ಬಂದಿಗಳು ಅದನ್ನು ಮುದ್ರಿಸಿ ಓದುಗರ ಮನ ಮುಟ್ಟಿಸಲು ಪ್ರಯತ್ನ ಪಡುತ್ತಾರೆ ಆದರೆ ವಿತರಕರು ಚಳಿ ಗಾಳಿ ಬಿಸಿಲು ಎನ್ನದೆ ಬೆಳಿಗ್ಗೆ ನಸುಕಿನಲ್ಲಿ ಎದ್ದು ಇವರೆಲ್ಲರ ಶ್ರಮದ ಫಲವನ್ನು ಮನೆ ಮನೆಗೆ ತಲುಪಿಸುವ ಪ್ರಾಮಾಣಿಕ ಸೇವೆಯನ್ನು ಸಲ್ಲಿಸುತ್ತಿರುತ್ತಾರೆ ಇವರ ಈ ಉತ್ತಮ ಸೇವೆ ಪತ್ರಿಕೆ ಅಭಿವೃದ್ಧಿಗೆ ಪೂರಕ ಹಾಗಾಗಿ ವರದಿಗಾರರು ಹಾಗು ವಿತರಕರು ಒಂದೇ ನಾಣ್ಯದ ಎರಡು ಮುಖಗಳಂತೆ ಕಾರ್ಯನಿರ್ವಹಿಸುತ್ತಾರೆ ಎಂದು ಹಿರಿಯ ಪತ್ರಕರ್ತ ಜಿಕೆ ಹೆಬ್ಬಾರ್ ಅಭಿಪ್ರಾಯೆಸಿದರು. ಸರ್ಕಾರ ವಿತರಕರ ಗೋಳನ್ನ ಅರಿತು ಅವರಿಗೆ ಸೇವಾ ಭದ್ರತೆ ಆರೋಗ್ಯ ವಿಮೆಯಂತಹ ಸೌಲಭ್ಯಗಳನ್ನು ನೀಡುವುದು ಸೂಕ್ತ ಪತ್ರಿಕೆ ಅಭಿವೃದ್ಧಿಗೆ ವಿತರಕನ ಶ್ರಮ ಅನನ್ಯ ಹಾಗಾಗಿ ವಿತರಕರಿಗೆ ಯಾವುದೇ ಸರ್ಕಾರ ಬಂದರೂ ಆರ್ಥಿಕ ಭದ್ರತೆಯ ಯೋಜನೆಗಳನ್ನು ನೀಡಬೇಕೆಂದು ಈ ಸಂದರ್ಭದಲ್ಲಿ ಮನವಿ ಮಾಡಿದರು. ಹಿರಿಯ ಅರ್ಚಕರಾದ ಪಾಂಡುರಂಗ ಹಾಗೂ ಹಿಮಾಲಯ ರವರು ಇತರರು ಉಪಸ್ಥಿತರಿದ್ದು ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ ಮಾಡಿ ಸಂಭ್ರಮಿಸಿದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...