Sunday, August 2, 2026
Sunday, August 2, 2026

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ ಮತ್ತು ಪಾಲನೆ-ಪೋಷಣೆಯಲ್ಲಿ ಜಿಲ್ಲೆ ಅಗ್ರಸ್ಥಾನ : ನ್ಯಾ.ಸಂತೋಷ ಎಂ.ಎಸ್

Date:

Karnataka State Commission for Protection of Child Rights ಮಕ್ಕಳ ಹಕ್ಕುಗಳ ರಕ್ಷಣೆ, ಪಾಲನೆ ಮತ್ತು ಪೋಷಣೆಯಲ್ಲಿ ಜಿಲ್ಲೆಯು ಅಗ್ರ ಸ್ಥಾನ ಪಡೆದಿದ್ದು, ಇದರಲ್ಲಿ ಅಧಿಕಾರ ವರ್ಗದ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಎಂ.ಎಸ್.ಸಂತೋಷ್ ಶ್ಲಾಘಿಸಿದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು, ಮಕ್ಕಳ ರಕ್ಷಣಾ ನಿರ್ದೇಶನಾಲಯ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ಪೊಲೀಸ್ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಇವರುಗಳ ಸಂಯುಕ್ತಾಶ್ರಯದಲ್ಲಿ ಶುಕ್ರವಾರ ನಗರದ ಜಿಲ್ಲಾ ಡಯಟ್ ಸಂಸ್ಥೆಯಲ್ಲಿ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಮಕ್ಕಳ ಸಹಾಯವಾಣಿ ಸಿಬ್ಬಂದಿಗಳು ಹಾಗೂ ಜಿಲ್ಲಾ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿರುವ ಮಕ್ಕಳ ಪಾಲನಾ ಸಂಸ್ಥೆಗಳ ಸಿಬ್ಬಂದಿಗಳಿಗೆ ಶುಕ್ರವಾರ ಏರ್ಪಡಿಸಿದ್ದ “ಬಾಲ್ಯ ವಿವಾಹ, ಪೊಕ್ಸೋ ಮತ್ತು ಮಕ್ಕಳ ರಕ್ಷಣೆಗೆ ಸಂಬAಧಿಸಿದ ಅರಿವು ಹಾಗೂ ಮಕ್ಕಳ ಪಾಲನಾ ಸಂಸ್ಥೆಗಳಲ್ಲಿ ಮಕ್ಕಳ ಸುರಕ್ಷತೆ, ಮೂಲಭೂತ ಸೌಕರ್ಯಗಳ ಕುರಿತಾದ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರತಿ ಮಗುವಿಗೆ ಸಮಾಜದಲ್ಲಿ ಪಾಲನೆ ಪೋಷಣೆ ಸಿಗಬೇಕು. ಸಿಗಬೇಕಾದ ಪಾಲನೆ ಪೋಷಣೆ ದೊರಕದಿದ್ದಾಗ ಅದು ಕಾನೂನಿನ ಉಲ್ಲಂಘನೆಯಾಗುತ್ತದೆ, ಆದ್ದರಿಂದ ಪಾಲನೆ ಸಂಸ್ಥೆಯಲ್ಲಿ ಪ್ರತಿ ಮಗುವಿನ ಪಾಲನೆ ಪೋಷಣೆಯನ್ನು ಸರಿಯಾಗಿ ಮಾಡಿ, ಈ ಮಕ್ಕಳು ಮುಖ್ಯವಾಹಿನಿಗೆ ಬರುವಂತೆ ಪಾಲನಾ ಸಂಸ್ಥೆಗಳು ಮಾಡಬೇಕೆಂದರು.
ಬಾಲ್ಯ ವಿವಾಹ, ಪೊಕ್ಸೋ ಮತ್ತು ಮಕ್ಕಳ ರಕ್ಷಣೆಗೆ ಸಂಬAಧಿಸಿದAತೆ ಅರಿವು ಮತ್ತು ಜಾಗೃತಿಗಾಗಿ ಪ್ರತಿ ಮೂರು ತಿಂಗಳಿಗೊಮ್ಮೆ ಸಮನ್ವಯ ಸಭೆ ಕೈಗೊಂಡು ನಿರಂತರ ಅಭಿಯಾನ ನಡೆಸಬೇಕು. ಎಲ್ಲ ಪಾಲುದಾರ ಇಲಾಖೆಗಳು ಸಕ್ರಿಯವಾಗಿ, ಕ್ರಿಯಾಶೀಲರಾಗಿ ಅಭಿಯಾನದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಬೇಕೆಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಅಪರ್ಣ ಕೊಳ್ಳ ಮಾತನಾಡಿ, ಅಧಿಕಾರಿಗಳು ಮಕ್ಕಳ ಪಾಲನೆ ಪೋಷಣೆಗೆ ಸಂಬಂಧಿಸಿದಂತೆ ಯಾವುದೇ ರಾಜಿ ಮಾಡಿಕೊಳ್ಳದೇ ಸರಿಯಾಗಿ ಕ್ರಮ ವಹಿಸಬೇಕು.ಬಾಲ್ಯ ವಿವಾಹ, ಪೋಕ್ಸೋ ಕಾಯ್ದೆಗಳು ಮತ್ತು ಮಕ್ಕಳ ಹಕ್ಕುಗಳ ಬಗ್ಗೆ ಸಂಪೂರ್ಣವಾಗಿ ತಿಳಿದುಕೊಂಡು ಪರಿಣಾಮಕಾರಿಯಾಗಿ ಅನುಷ್ಟಾನಗೊಳಿಸಬೇಕು ಎಂದರು.
Karnataka State Commission for Protection of Child Rights ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿಗಳಿಂದ ಜಿಲ್ಲೆಯಲ್ಲಿ ಬಾಲ್ಯ ವಿವಾಹ ಕುರಿತಾದ ಮಾಹಿತಿ ತೆಗೆದುಕೊಂಡು ಜಾಗೃತಿ ಕಾರ್ಯಕ್ರಮಗಳನ್ನು ಇನ್ನೂ ಪರಿಣಾಮಕಾರಿಯಾಗಿ ಮಾಡಬೇಕು. ಬಾಲ್ಯ ವಿವಾಹ, ಪೋಕ್ಸೋದಂತಹ ಪ್ರಕರಣಗಳನ್ನು ತಡೆಗಟ್ಟಲು ಶ್ರಮ ವಹಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಆರ್, ಜಿಲ್ಲಾ ಬಾಲನ್ಯಾಯ ಮಂಡಳಿ ಸದಸ್ಯೆ ರೇಖಾ.ಜಿ.ಎಂ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷರಾದ ತಾಜುದ್ದೀನ್ ಖಾನ್, ಡಯಟ್ ಪ್ರಾಂಶುಪಾಲರಾದ ಹೆಚ್.ಆರ್. ಕೃಷ್ಣಮೂರ್ತಿ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...