Thursday, June 18, 2026
Thursday, June 18, 2026

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Date:

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ “ತರಳಬಾಳು ಹುಣ್ಣಿಮೆ ಮಹೋತ್ಸವ-2026″ ರ ಧರ್ಮಸಭೆಯಲ್ಲಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಪಾಲ್ಗೊಂಡು, ಸಿರಿಗೆರೆಯ ಪರಮಪೂಜ್ಯ ಜಗದ್ಗುರು ಡಾ. ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಯವರ ಆಶೀರ್ವಾದ ಪಡೆದರು..

“ಸದ್ಧರ್ಮ ನ್ಯಾಯಪೀಠ”ದ ಮೂಲಕ ನ್ಯಾಯದ ಹಾದಿ ತೋರಿಸುವ, “ಅಕ್ಷರ ಮತ್ತು ಅನ್ನ ದಾಸೋಹ”ದ ಮೂಲಕ ಬದುಕು ಕಟ್ಟಿಕೊಡುವ ಜೊತೆಗೆ 12ನೇ ಶತಮಾನದ ಶರಣ ಸಂಸ್ಕೃತಿಯನ್ನು ಇಂದಿನ ಆಧುನಿಕ ಕಾಲದ ಅಗತ್ಯಕ್ಕೆ ತಕ್ಕಂತೆ ಮುನ್ನಡೆಸುತ್ತಿರುವ ಶ್ರೀಮಠದ ಕಾರ್ಯವೈಖರಿ ಇಡೀ ಜಗತ್ತಿಗೇ ಮಾದರಿಯಾಗಿದೆ‌ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ , ಧರ್ಮಸಭೆಯಲ್ಲಿ ಹೇಳಿದರು.

Madhu Bangarappa ಶ್ರೀಗಳ ದೂರದೃಷ್ಟಿ ನಮಗೆಲ್ಲರಿಗೂ ಸ್ಫೂರ್ತಿ. ನನ್ನ ತಂದೆ ಮಾಜಿ ಮುಖ್ಯಮಂತ್ರಿ ಸನ್ಮಾನ್ಯ ಶ್ರೀ ಎಸ್. ಬಂಗಾರಪ್ಪಾಜಿಯವರು ಶ್ರೀಮಠದೊಂದಿಗೆ ಹೊಂದಿದ್ದ ಅವಿನಾಭಾವ ಸಂಬಂಧವನ್ನು ಸ್ಮರಿಸುತ್ತಾ, ನಾನು ಕೂಡ ಪೂಜ್ಯ ಶ್ರೀಗಳ ಮಾರ್ಗದರ್ಶನದಲ್ಲಿ ಅವರ ಆಶೀರ್ವಾದದೊಂದಿಗೆ ಜನರ ಸೇವೆಯಲ್ಲಿ ಸದಾ ತೊಡಗಿಸಿಕೊಳ್ಳುವುದಕ್ಕೆ ಬದ್ಧನಾಗಿರುತ್ತೇನೆ ಎಂದು ಸಚಿವರು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...