Tuesday, August 11, 2026
Tuesday, August 11, 2026

Rajana Foundation Trust ಭಾರತವನ್ನು ತಿಳಿಯಿರಿ – ಪ್ರೌಢಶಾಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆ

Date:

Rajana Foundation Trust ರಜನಾ ಫೌಂಡೇಶನ್ ಟ್ರಸ್ಟ್, ಹೊಸಪೇಟೆ ಇವರು ಕನ್ನಡ, ಸಂಸ್ಕೃತಿ, ಸಂಸ್ಕಾರ ಮತ್ತು ರಾಷ್ಟ್ರೀಯತೆಯ ಜಾಗೃತಿಯನ್ನು ಮೂಡಿಸುವ ಉದ್ದೇಶದಿಂದ ಶಿಕ್ಷಣ ಕ್ಷೇತ್ರ ಹಾಗೂ ಕುಟುಂಬ ಕ್ಷೇತ್ರವನ್ನು ಆಯ್ಕೆ ಮಾಡಿಕೊಂಡು ವಿವಿಧ ಚಟುವಟಿಕೆಗಳ ಮೂಲಕ ನಿರಂತರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಈ ಕಾರ್ಯಕ್ರಮದ ಅಂಗವಾಗಿ, ಹೊಸಪೇಟೆಯ ವಿವಿಧ ಪ್ರೌಢಶಾಲೆಗಳ ವಿದ್ಯಾರ್ಥಿಗಳಿಗಾಗಿ “ಭಾರತವನ್ನು ತಿಳಿಯಿರಿ” ಎಂಬ ವಿಷಯದ ಮೇಲೆ ದಿನಾಂಕ 10-01-2026 ರಂದು ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಈ ಪ್ರಥಮ ಹಂತದ ಸ್ಪರ್ಧೆಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಮೂರು ಶಾಲೆಗಳ ವಿದ್ಯಾರ್ಥಿಗಳಿಗೆ ದಿನಾಂಕ 22-01-2026 ರಂದು ಹೊಸಪೇಟೆಯ ಶ್ರೀ ನರ್ಬಾದಬಾಯಿ ಪ್ರೌಢಶಾಲೆಯಲ್ಲಿ ಎರಡನೇ ಹಂತದ ರಸಪ್ರಶ್ನೆ ಸ್ಪರ್ಧೆಯನ್ನು ಆಯೋಜಿಸಲಾಯಿತು.

ಈ ಅಂತಿಮ ಸ್ಪರ್ಧೆಯಲ್ಲಿ
ಹೊಸಪೇಟೆ ನೆಹರು ಕಾಲೋನಿಯ ಸರ್ಕಾರಿ ಪ್ರೌಢಶಾಲೆ – ಪ್ರಥಮ ಸ್ಥಾನ
ಶ್ರೀ ನರ್ಬಾದಬಾಯಿ ಪ್ರೌಢಶಾಲೆ – ದ್ವಿತೀಯ ಸ್ಥಾನ
ಕೆ.ಎಸ್.ಪಿ.ಎಲ್. ಪ್ರೌಢಶಾಲೆ – ತೃತೀಯ ಸ್ಥಾನ ಪಡೆದಿರುತ್ತವೆ.

ಕಾರ್ಯಕ್ರಮದಲ್ಲಿ ಕಿರ್ಲೋಸ್ಕರ್ ಆಫೀಸರ್ಸ್ ಕ್ಲಬ್ ಅಧ್ಯಕ್ಷರಾದ ಶ್ರೀಮತಿ ಕಮಲಾ ಗುಮಾಸ್ತೆ ಹಾಗೂ ಹೊಸಪೇಟೆಯ ಖಜಾನೆಯ ನಿವೃತ್ತ ಅಧಿಕಾರಿಗಳಾದ ಶ್ರೀ ವೆಂಕಟೇಶ್ ಮೂರ್ತಿ ಅವರು ಬಹುಮಾನ ಗಳಿಸಿದ ಶಾಲೆಗಳ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರಗಳು ಮತ್ತು ಪದಕಗಳನ್ನು ಪ್ರದಾನ ಮಾಡಿದರು. ಅತಿಥಿಗಳು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಪ್ರೋತ್ಸಾಹಕಾರಿ ಮಾತುಗಳನ್ನು ಆಡಿದರು.

ಈ ಕಾರ್ಯಕ್ರಮದ ಮುಖ್ಯ ರೂವಾರಿಯಾಗಿದ್ದ ರಚನಾ ಫೌಂಡೇಶನ್ ಅಧ್ಯಕ್ಷರಾದ ಶ್ರೀ ಚಂದ್ರಶೇಖರ್ ಅವರು ರಸಪ್ರಶ್ನೆ ಕಾರ್ಯಕ್ರಮವನ್ನು ಸುಗಮವಾಗಿ ನಡೆಸಿಕೊಟ್ಟರು.

ಅಚ್ಚುಕಟ್ಟಾಗಿ ಈ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಿ ಪೂರ್ಣಗೊಳಿಸುವಲ್ಲಿ ಹೊಸಪೇಟೆಯ ರಚನಾ ಫೌಂಡೇಶನ್ ಸಂಚಾಲಕರು ಹಾಗೂ ಕಿರ್ಲೋಸ್ಕರ್ ಕಾರ್ಖಾನೆಯ ಸುರಕ್ಷತಾ ವಿಭಾಗದ ಮ್ಯಾನೇಜರ್ ಶ್ರೀ ಮುರುಳೀಧರ್ ನಾಡಿಗೇರ್ ಅವರು ಕಳೆದ ಒಂದು ತಿಂಗಳಿನಿಂದ ಶ್ರಮವಹಿಸಿ ಪ್ರಮುಖ ಪಾತ್ರವಹಿಸಿದರು.

Rajana Foundation Trust ಕಾರ್ಯಕ್ರಮವು ಭಾರತಮಾತೆಗೆ ಪೂಜೆ ಸಲ್ಲಿಸುವುದರೊಂದಿಗೆ ಪ್ರಾರಂಭವಾಗಿ ರಾಷ್ಟ್ರಗೀತೆಯೊಂದಿಗೆ ಸಮಾಪ್ತಿಯಾಯಿತು.
ಮುಖ್ಯ ಅತಿಥಿಗಳಾಗಿ ಆಗಮಿಸಿದ ಶ್ರೀಮತಿ ಕಮಲಾ ಗುಮಾಸ್ತೆ, ಶ್ರೀ ವೆಂಕಟೇಶ್ ಮೂರ್ತಿ ಹಾಗೂ ಈ ಕಾರ್ಯಕ್ರಮ ಆಯೋಜನೆಗೆ ನೇರ ಸಹಕಾರ ನೀಡಿದ ನರ್ಬಾದಬಾಯಿ ಪ್ರೌಢಶಾಲೆಯ ಉಪಾಧ್ಯಾಯಿನಿ ಶ್ರೀಮತಿ ರೀಥಾ ಇವರನ್ನು ಸನ್ಮಾನಿಸಿ ಧನ್ಯವಾದಗಳನ್ನು ಸಲ್ಲಿಸಲಾಯಿತು.

ವರಧಿ

ಮುರುಳೀಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ತೀರ್ಥಹಳ್ಳಿ ತಾಲ್ಲೂಕಿನಲ್ಲಿ ಮುಂದೆ ಯಾವುದೇ ರೀತಿ ಭೂಕುಸಿತ ಆಗದಂತೆ ಮುನ್ನೆಚ್ಚರಿಕೆ ವಹಿಸಿ- ಸಚಿವ ಮಧು ಬಂಗಾರಪ್ಪ

Madhu Bangarappa ಇತ್ತೀಚಿಗೆ ಬಿದ್ದ ಭಾರಿ ಮಳೆಯಿಂದಾಗಿ ತೀರ್ಥಹಳ್ಳಿಯ ಗಾಂಧಿನಗರದಲ್ಲಿ ನಡುರಾತ್ರಿ...

Madhu Bangarappa ತೀರ್ಥಹಳ್ಳಿ ಬಳಿ ಗುಡ್ಡ ಕುಸಿತದಿಂದ ಸಾವಿನ ಅವಘಡ: ಸಚಿವ ಮಧು ಬಂಗಾರಪ್ಪ ಮೌಖಿಕ ಪರಿಶೀಲನೆ, ಪರಿಹಾರಕ್ಕೆ ಶೀಘ್ರ ಕ್ರಮ

Madhu Bangarappa ತೀರ್ಥಹಳ್ಳಿಯಲ್ಲಿ ಭೂಕುಸಿತದಿಂದ ಮೂವರು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿವಮೊಗ್ಗ...

Madhu Bangarappa ಗ್ರಾಮೀಣರಲ್ಲಿ ವಿಬಿ-ಜಿ ರಾಮ್ ಜಿ ಯೋಜನೆ ಬಗ್ಗೆ ಮನವರಿಕೆ ಮಾಡಿ, ಹೆಚ್ಚಿನ ಜನಕ್ಕೆ ಕೆಲಸ ನೀಡಿ- ಮಧು ಬಂಗಾರಪ್ಪ

Madhu Bangarappa ಬರಗಾಲದ ಹಿನ್ನೆಲೆಯಲ್ಲಿ ವಿಬಿ-ಜಿ ರಾಮ್ ಜಿ ಯೋಜನೆಯಡಿ ಗ್ರಾಮೀಣ...