Friday, March 27, 2026
Friday, March 27, 2026

DC Shivamogga ಫೆಬ್ರವರಿ 10 ರಂದು ಜಿಲ್ಲೆಯ ಅಂಗನವಾಡಿ, ಶಾಲಾ ಕಾಲೇಜುಗಳಲ್ಲಿ ಜಂತು ನಿರೋಧಕ ಮಾತ್ರೆ ಉಚಿತ ವಿತರಣೆ- ಪ್ರಭುಲಿಂಗ ಕವಳಿಕಟ್ಟಿ

Date:

DC Shivamogga ಶಿವಮೊಗ್ಗ ಜಿಲ್ಲೆಯಾದ್ಯಂತ ಫೆಬ್ರವರಿ 10 ರಂದು ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನವನ್ನು 1 ರಿಂದ 19 ವರ್ಷದ ಮಕ್ಕಳಿಗೆ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡುವ ಮೂಲಕ ಆಚರಿಸಲಾಗುತ್ತಿದ್ದು ಜಿಲ್ಲೆಯ ಎಲ್ಲ ಅರ್ಹ ಮಕ್ಕಳಿಗೆ ಈ ಮಾತ್ರೆಗಳನ್ನು ಕಡ್ಡಾಯವಾಗಿ ನೀಡಬೇಕೆಂದು ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ತಿಳಿಸಿದರು.
ಜಿಲ್ಲಾಡಳಿತ ಕಚೇರಿಯಲ್ಲಿ ಏರ್ಪಡಿಲಾಗಿದ್ದ ರಾಷ್ಟ್ರೀಯ ಜಂತು ಹುಳು ನಿವಾರಣಾ ದಿನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಜಂತು ಹುಳು ಇರುವ ಮಕ್ಕಳು ಅಪೌಷ್ಟಿಕತೆ ಮತ್ತು ರಕ್ತಹೀನತೆಯಿಂದ ಬಳಲುತ್ತಾರೆ. ಅದರಿಂದ ಅವರ ದೈಹಿಕ, ಮಾನಸಿಕ ಬೆಳವಣಿಗೆ ಕುಂಠಿತವಾಗುವುದರೊಂದಿಗೆ ಶೈಕ್ಷಣಿಕ ಬೆಳವಣಿಗೆ ಸಹ ಕಡಿಮೆಯಾಗುವ ಕಾರಣದಿಂದ ಎಲ್ಲ 1 ರಿಂದ 19 ವರ್ಷದ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆಗಳನ್ನು ತೆಗೆದುಕೊಳ್ಳಬೇಕು.
ಫೆ.10 ರಂದು ಜಿಲ್ಲೆಯ ಎಲ್ಲ ಅಂಗನವಾಡಿಗಳು, ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಅಲ್ಬೆಂಡಝೊಲ್ ಜಂತುಹುಳು ನಿವಾರಣೆ ಮಾತ್ರೆಗಳನ್ನು ನೀಡಲಾಗುವುದು. ಅಂದು ಬಾಕಿ ಉಳಿದ ಮಕ್ಕಳಿಗೆ ಫೆ.16 ರಂದು ಮಾತ್ರೆ ನೀಡಲಾಗುವುದು. ಮಾತ್ರೆಗಳನ್ನು ನೀಡಲು ಕಾರ್ಯಕರ್ತೆಯರಿಗೆ, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಕಡ್ಡಾಯವಾಗಿ ಎಲ್ಲ ಅರ್ಹ ಮಕ್ಕಳು ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶಾಲೆಗಳಲ್ಲಿ ಕೈ ತೊಳೆಯುವುದು ಸೇರಿದಂತೆ ಸ್ವಚ್ಚತೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಬೇಕು. ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರು ಮತ್ತು ಅಂಗನವಾಡಿಗಳಲ್ಲಿ ಕಾರ್ಯಕರ್ತೆಯರು ಪೋಷಕರಿಗೆ ಮಾತ್ರೆ ನೀಡುವ ಬಗ್ಗೆ ತಿಳಿಸಬೇಕು ಎಂದು ತಿಳಿಸಿದರು.
ಮಾಹಿತಿ, ಶಿಕ್ಷಣ ಮತ್ತು ಸಂವಹನ ಹಾಗೂ ಜಾಗೃತಿ ಚಟುವಟಿಕೆಗಳ ಮೂಲಕ ರಾಷ್ಟಿçÃಯ ಜಂತುಹುಳು ನಿವಾರಣಾ ದಿನದ ಬಗ್ಗೆ ಸಮುದಾಯದಲ್ಲಿ ಜಾಗೃತಿ ಮೂಡಿಸಬೇಕು. ಶಿಕ್ಷಕರು, ಸಿಡಿಪಿಓ, ಆಶಾ, ಅಂಗನವಾಡಿ ಕಾರ್ಯಕರ್ತೆಯರು ಸೇರಿದಂತೆ ಪೋಷಕರು ಈ ಕಾರ್ಯಕ್ರಮ ಶೇ.100 ಯಶಸ್ವಿಯಾಗಲು ಸಹಕರಿಸಬೇಕು ಎಂದರು.
DC Shivamogga ಆರ್‌ಸಿಹೆಚ್‌ಓ ಡಾ.ಓ.ಮಲ್ಲಪ್ಪ ಮಾತನಾಡಿ, ಮಣ್ಣಿನ ಮೂಲಕ ಹರಡುವ ಜಂತುಹುಳು ಸೋಂಕು ಹೆಚ್ಚಾಗಿ ಮಕ್ಕಳಲ್ಲಿ ಕಂಡು ಬರುತ್ತದೆ. ನಮ್ಮ ದೇಶದಲ್ಲಿ 61 ಕೋಟಿ ಸೋಂಕಿತರಿದ್ದು, ರಾಜ್ಯದಲ್ಲಿ 2015 ರಲ್ಲಿ ನಡೆಸಿದ ಬೇಸ್‌ಲೈನ್ ಸಮೀಕ್ಷೆ ಪ್ರಕಾರ 1 ರಿಂದ 19 ವರ್ಷ ವಯಸ್ಸಿನ ಸುಮಾರು ಶೇ.49 ಮಕ್ಕಳು ಪೀಡಿತರಾಗುವ ಸಾಧ್ಯತೆ ಇದೆ. ಜಂತುಹುಳು ಬಾಧೆಯಿಂದಾಗಿ ವ್ಯಕ್ತಿಯ ದೈಹಿಕ ಮತ್ತು ಬೌದ್ದಿಕ ಸಾಮರ್ಥ್ಯ ಕುಗ್ಗಿ ಆರ್ಥಿಕ ಪ್ರಗತಿಗೆ ಅಡ್ಡಿಯುಂಟಾಗುತ್ತದೆ. ಆದ್ದರಿಂದ ಎಲ್ಲ ಮಕ್ಕಳು ಜಂತು ಹುಳು ನಿವಾರಣೆ ಮಾತ್ರೆ ತೆಗೆದುಕೊಳ್ಳಬೇಕು. ಜೊತೆಗೆ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಉಗುರುಗಳನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ಬಯಲಿನಲ್ಲಿ ಮಲ ವಿಸರ್ಜನೆ ಮಾಡಬಾರದು. ಬರಿಗಾಲಿನಲ್ಲಿ ನಡೆಯದೇ ಚಪ್ಪಲಿಗಳನ್ನು ಧರಿಸಬೇಕು ಎಂದು ತಿಳಿಸಿದರು.
ಕಳೆದ ಸಾಲಿನಲ್ಲಿ 4,70,316 ಮಕ್ಕಳಿಗೆ ಮಾತ್ರೆ ನೀಡುವ ಗುರಿ ನೀಡಲಾಗಿತ್ತು. ಶೇ.98 ಪ್ರಗತಿ ಸಾಧಿಸಲಾಗಿತ್ತು. ಇದೀಗ ಮಾತ್ರೆಗಳ ಸರಬರಾಜು ಆಗಿದ್ದು, ಅಂಗನವಾಡಿ ಕಾರ್ಯಕರ್ತೆಯರು, ಶಿಕ್ಷಕರಿಗೆ ತರಬೇತಿ ನೀಡಲಾಗಿದೆ. ಎಲ್ಲ ಅರ್ಹ ಮಕ್ಕಳಿಗೆ ಮಾತ್ರೆಗಳನ್ನು ನೀಡಲು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಹಾಗೂ ಶಿಕ್ಷಣ ಇಲಾಖೆಗಳು ಸಹಕರಿಸಬೇಕು ಎಂದು ಮನವಿ ಮಾಡಿದರು.
ಸಭೆಯಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಸಂತೋಷ್ ಎಂ ಎಸ್, ಜಿಲ್ಲಾ ಪಂಚಾಯತ್ ಸಿಇಓ ಹೇಮಂತ್ ಎನ್, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ನಿಖಿಲ್ ಬಿ, ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ, ಡಿಹೆಚ್‌ಓ ಡಾ. ನಟರಾಜ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕಿ ಭಾರತಿ ಬಣಕಾರ್, ಡಿಡಿಪಿಐ ಮಂಜುನಾಥ್, ಇತರೆ ವೈದ್ಯಾಧಿಕಾರಿಗಳು, ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Water Tax ಶಿವಮೊಗ್ಗದ ವಿವಿಧೆಡೆ ನೀರಿನ ಕಂದಾಯ ಪಾವತಿ ಕೌಂಟರ್ ವ್ಯವಸ್ಥೆ.

Water Tax ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ...

Adichunchanagiri Mutt ಏಪ್ರಿಲ್1. ಸರಳ ಸಾಮೂಹಿಕ ವಿವಾಹ & ಹಿರಿಯ ಆದರ್ಶ ದಂಪತಿಗಳಿಗೆ ಸನ್ಮಾನ

Adichunchanagiri Mutt ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪರಮಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀ...