Friday, May 15, 2026
Friday, May 15, 2026

Subbaiah Medical College ವೈದ್ಯರು ಸದೃಢ ಆರೋಗ್ಯ ಕಾಪಾಡಿಕೊಂಡರೆ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ- ಡಾ.ಸಿ.ಆರ್.ಚಂದ್ರಶೇಖರ್

Date:

Subbaiah Medical College ವೈದ್ಯ ವೃತ್ತಿಯಲ್ಲಿ ಇರುವವರು ಸಹ ತಮ್ಮ ದೈಹಿಕ ಹಾಗೂ ಮಾನಸಿಕ ಆರೋಗ್ಯದ ಕಡೆ ಸಮಾನವಾಗಿ ಗಮನ ಹರಿಸುವುದು ಅವಶ್ಯಕ ಎಂದು ಪದ್ಮಶ್ರೀ ಪುರಸ್ಕೃತ ಮನೋವೈದ್ಯ ಡಾ. ಸಿ.ಆರ್.ಚಂದ್ರಶೇಖರ್ ಹೇಳಿದರು.

ಸುಬ್ಬಯ್ಯ ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಭಾರತೀಯ ವೈದ್ಯಕೀಯ ಸಂಘ ಶಿವಮೊಗ್ಗ ಘಟಕದ ವತಿಯಿಂದ ವೈದ್ಯಕೀಯ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಸ್ವಆರೋಗ್ಯ ನಿರ್ವಹಣೆ ಕುರಿತ ವಿಶೇಷ ಉಪನ್ಯಾಸದಲ್ಲಿ ಮಾತನಾಡಿದರು.

ವೈದ್ಯರು ಸದೃಢ ಆರೋಗ್ಯವನ್ನು ಕಾಪಾಡಿಕೊಂಡಾಗ ಮಾತ್ರ ರೋಗಿಗಳಿಗೆ ಉತ್ತಮ ಸೇವೆ ನೀಡಲು ಸಾಧ್ಯ. ಒತ್ತಡ ನಿರ್ವಹಣೆ, ಜೀವನಶೈಲಿ ಬದಲಾವಣೆಗಳು ಮತ್ತು ಸಮತೋಲನ ಜೀವನ ನಡೆಸಬೇಕು ಎಂದು ಉಪಯುಕ್ತ ಸಲಹೆಗಳನ್ನು ನೀಡಿದರು.

ವೈದ್ಯರು ಸೋಂಕು ರೋಗಗಳು, ಪೋಷಕಾಂಶ ಕೊರತೆ, ಒತ್ತಡ, ಖಿನ್ನತೆ, ಆತಂಕ, ಹೃದಯ ಹಾಗೂ ರಕ್ತನಾಳ ಸಂಬಂಧಿತ ಕಾಯಿಲೆಗಳು, ಸ್ಟ್ರೋಕ್, ಮಧುಮೇಹ, ಕ್ಯಾನ್ಸರ್, ವ್ಯಸನಗಳು ಮುಂತಾದ ಅನೇಕ ಸಮಸ್ಯೆಗಳಿಗೆ ಹೆಚ್ಚು ಒಳಗಾಗುವ ಅಪಾಯವಿದೆ ಎಂದು ಎಚ್ಚರಿಸಿದರು.

ಮಾತೃದೇವೋ ಭವ, ಪಿತೃದೇವೋ ಭವ, ಗುರುದೇವೋ ಭವ ಎಂದು ಹೇಳುವಾಗ ವೈದ್ಯೋ ನಾರಾಯಣ ಹರಿ” ಎಂಬ ಉನ್ನತ ಸ್ಥಾನಮಾನ ಸಮಾಜದಲ್ಲಿ ವೈದ್ಯರಿಗೆ ಮಾತ್ರ ಇದೆ. ಪ್ರತಿಯೊಬ್ಬರೂ ಸೇವಾ ಮನೋಭಾವ ವೃದ್ಧಿಸಿಕೊಳ್ಳಬೇಕು ಎಂದು ತಿಳಿಸಿದರು.

ವೈದ್ಯಕೀಯ ವಿದ್ಯಾರ್ಥಿಗಳು ಭವಿಷ್ಯದಲ್ಲಿ ವೈದ್ಯರಾಗಿ ಎದುರಿಸಬೇಕಾದ ವೃತ್ತಿಪರ ಹಾಗೂ ವೈಯಕ್ತಿಕ ಸವಾಲುಗಳು ಮತ್ತು ಅವಕ್ಕೆ ಬೇಕಾದ ಮಾನಸಿಕ-ದೈಹಿಕ ಸಿದ್ಧತೆ ಕುರಿತು ವಿವರಿಸಿದರು.

Subbaiah Medical College ಭಾರತೀಯ ವೈದ್ಯಕೀಯ ಸಂಘದ ಶಿವಮೊಗ್ಗ ಘಟಕದ ಅಧ್ಯಕ್ಷ ಡಾ. ಕೆ.ಆರ್.ರವೀಶ್, ಕಾರ್ಯದರ್ಶಿ ಡಾ. ಕೆ.ಎಸ್.ಶುಭ್ರತಾ, ಡಾ. ವಿನಾಯಕ ಜಿ, ಡಾ. ಸಿದ್ಧಲಿಂಗಪ್ಪ, ಡಾ. ಬಿ.ಎಸ್. ಸುರೇಶ್, ಡಾ. ವಿನಯಾ ಶ್ರೀನಿವಾಸ್, ಡಾ. ಕೌಸ್ತುಭ ಅರುಣ್, ಡಾ. ವಿ.ಎಲ್.ಎಸ್. ಕುಮಾರ್, ಡಾ. ಶೀಲಾ ವಿಜಯ್, ಡಾ. ವಿಜಯಾನಂದ್, ಡಾ. ಪದ್ಮೇಗೌಡ, ಶ್ರೇಯಸ್ ಸೇರಿದಂತೆ ಹಲವು ಗಣ್ಯ ವೈದ್ಯರು ಹಾಗೂ ಅಧ್ಯಾಪಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Club Shivamogga ಬೇಸಿಗೆಯಲ್ಲಿ ಪಕ್ಷಿಗಳಿಗೆ ನೀರುಣಿಸುವುದು ಮನುಷ್ಯರ ಜವಾಬ್ದಾರಿ- ಬಿ.ಜಿ.ಶಿವಮೂರ್ತಿ

Rotary Club Shivamogga ಬೇಸಿಗೆ ಕಾಲದಲ್ಲಿ ಪ್ರಾಣಿ ಪಕ್ಷಿಗಳಿಗೆ ನೀರನ್ನು ಒದಗಿಸುವುದು...

Bhadra dam ಮೇ17 ರ ಮಧ್ಯರಾತ್ರಿಯಿಂದ ಭದ್ರಾ ಬಲ ಮತ್ತು ಎಡದಂಡೆ ಕಾಲುವೆಗಳ ಮೂಲಕ ಹರಿಯುತ್ತಿರುವ ನೀರು ಬಂದ್

Bhadra dam ಭದ್ರಾ ಜಲಾಶಯದಿಂದ ಬೇಸಿಗೆ ಹಂಗಾಮಿನ ಬೆಳೆಗಳಿಗೆ ಬಲದಂಡ...

Royal Diamond English Medium School ಮನೆಯೇ ಮೊದಲ ಪಾಠಶಾಲೆ.ತಾಯಿಯೇ ಮೊದಲ ಗುರು- ವೀಣಾ ನಾಯಕ್

Royal Diamond English Medium School ಸಿರಿಗನ್ನಡ ವೇದಿಕೆ, ಮಹಿಳಾ...

Priyanka Kharge ಗ್ರಾಮ ಪಂಚಾಯತ್ ಗಳು ರಾಷ್ಡ್ರಮಟ್ಟದಲ್ಲಿ ಗಮನ ಸೆಳೆದು ಪ್ರಶಸ್ತಿಗೆ ಭಾಜನ: ಸಶಕ್ತೀಕರಣಕ್ಕೆ ಹಿಡಿದ ಕನ್ನಡಿ- ಸಚಿವ ಪ್ರಿಯಾಂಕ ಖರ್ಗೆ

Priyanka Kharge ಕೇಂದ್ರ ಸರ್ಕಾರದಿಂದ ಕೊಡಮಾಡುವ ರಾಷ್ಟ್ರೀಯ ಪಂಚಾಯತ್ ಪುರಸ್ಕಾರಕ್ಕೆ ಕರ್ನಾಟಕದ...