Narayana Super Specialty Hospital ಸಾರ್ವಜನಿಕರಲ್ಲಿ ಮೂಳೆ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸಲು ಮತ್ತು ಆರಂಭಿಕ ಹಂತದಲ್ಲಿ ಮೂಳೆ ಸಂಬಂಧಿತ ಸಮಸ್ಯೆಗಳನ್ನು ಪತ್ತೆಹಚ್ಚುವ ಉದ್ದೇಶದಿಂದ, ಶಿವಮೊಗ್ಗದ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ ವತಿಯಿಂದ ಉಚಿತ ಮೂಳೆ ಸಾಂದ್ರತಾ ಪರೀಕ್ಷೆ (Free BMD Test) ಮತ್ತು ವೈದ್ಯಕೀಯ ಸಮಾಲೋಚನಾ ಶಿಬಿರವನ್ನು ಆಯೋಜಿಸಲಾಗಿದೆ.
ಉಚಿತ ಶಿಬಿರವು ಫೆಬ್ರವರಿ 07 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1 ರವರೆಗೆ ಕುವೆಂಪು ರಸ್ತೆಯ ನಂಬಿಯಾರ್ ಅಟ್ರಿಯಂ ನಲ್ಲಿರುವ ನಾರಾಯಣ ಸೂಪರ್ ಸ್ಪೆಷಾಲಿಟಿ ಕ್ಲಿನಿಕ್ನಲ್ಲಿ ನಡೆಯಲಿದೆ.
ಶಿಬಿರದ ವೈಶಿಷ್ಟ್ಯಗಳು: ಈ ಶಿಬಿರದಲ್ಲಿ ನುರಿತ ಕೀಲು ಮೂಳೆ ಮತ್ತು ಕೀಲು ಮರುಜೋಡಣೆ ತಜ್ಞ ವೈದ್ಯರಾದ ಡಾ. ನಾಗೇಂದ್ರ ಪ್ರಸಾದ್ ಎಂ ಆರ್ ಅವರು ಸಾರ್ವಜನಿಕರಿಗೆ ಉಚಿತವಾಗಿ ಲಭ್ಯವಿರಲಿದ್ದಾರೆ. ಶಿಬಿರಕ್ಕೆ ಬರುವ ಸಾರ್ವಜನಿಕರಿಗೆ ವೈದ್ಯರೊಂದಿಗೆ ಸಮಾಲೋಚನೆ ನಡೆಸಲು ಯಾವುದೇ ಶುಲ್ಕವಿರುವುದಿಲ್ಲ.
ಈ ಕೆಳಗಿನ ಲಕ್ಷಣಗಳಿರುವವರು ಈ ಉಚಿತ ಶಿಬಿರದ ಪ್ರಯೋಜನವನ್ನು ಪಡೆಯಬಹುದು:
ದೀರ್ಘಕಾಲದ ಮಂಡಿ ಮತ್ತು ಸೊಂಟ ನೋವಿನಿಂದ ಬಳಲುತ್ತಿರುವವರು. ಮೆಟ್ಟಿಲು ಹತ್ತಲು ಅಥವಾ ಇಳಿಯಲು ಕಷ್ಟವಾಗುತ್ತಿರುವವರು. ಮೂಳೆಗಳ ಕಾರ್ಯಕ್ಷಮತೆ ಕ್ಷೀಣಿಸುತ್ತಿರುವವರು.
ಋತುಚಕ್ರ ನಿಂತ ಮಹಿಳೆಯರಲ್ಲಿ ಮೂಳೆ ಸವಕಳಿ ಕಂಡುಬಂದಲ್ಲಿ. ವಯಸ್ಸಾದಂತೆ ಮೂಳೆ ಸವಕಳಿ ಎದುರಿಸುತ್ತಿರುವ ಪುರುಷರು ಮತ್ತು ಮಹಿಳೆಯರು.
Narayana Super Specialty Hospital ಮೊಣಕಾಲು ನೋವಿನಿಂದ ಸಂಪೂರ್ಣ ಸ್ವಾತಂತ್ರ್ಯ ಪಡೆಯಲು ಮತ್ತು ನಿಮ್ಮ ಮೂಳೆಗಳ ಆರೋಗ್ಯವನ್ನು ಖಚಿತಪಡಿಸಿಕೊಳ್ಳಲು ಈ ಅವಕಾಶವನ್ನು ಬಳಸಿಕೊಳ್ಳುವಂತೆ ಆಸ್ಪತ್ರೆ ಪ್ರಕಟಣೆಯಲ್ಲಿ ವಿನಂತಿಸಿದೆ.
ಹೆಚ್ಚಿನ ಮಾಹಿತಿಗಾಗಿ ಅಥವಾ ನೋಂದಣಿಗಾಗಿ ಈ ಕೆಳಗಿನ ಸಂಖ್ಯೆಯನ್ನು ಸಂಪರ್ಕಿಸಿ: ದೂರವಾಣಿ ಸಂಖ್ಯೆ: 98864 13131
