Friday, March 27, 2026
Friday, March 27, 2026

Image of District Dispute Redressal Department ರೂ 216 ಹೆಚ್ಚುವರಿ ಪಡೆದ ಸಂಸ್ಥೆಗೆ ಬಡ್ಡಿ ಸಹಿತ ವಾಪಸ್.ಅಲ್ಲದೇ ದೂರಿನ ಖರ್ಚು ಸೇರಿ ರೂ 25,000 ದಂಡ.

Date:

Image of district dispute redressal department ಶಿವಮೊಗ್ಗ ಜಿಲ್ಲೆಯ ಮಂಡಘಟ್ಟದ ಶಿವಕುಮಾರ್ ಎಸ್. ಎಂಬುವವರು ಬೆಂಗಳೂರು ಫ್ಲಿಪ್‌ಕಾರ್ಟ್ ಮುಖ್ಯ ವ್ಯವಸ್ಥಾಪಕರು ಹಾಗೂ ಉತ್ತರ ಪ್ರದೇಶದ ಮುಜಫರ್‌ನಗರದ ಶ್ರೀ ಲಕ್ಷ್ಮೀ ಪೈಂಟ್ಸ್ ಹೌಸ್ ಇವರುಗಳ ವಿರುದ್ಧ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಎಂ.ಆರ್.ಪಿ ಗಿಂತ ಹೆಚ್ಚಿನ ಹಣ ಪಡೆದಿರುತ್ತಾರೆ ಎಂದು ನೀಡಿದ ದೂರನ್ನು ಸೇವಾನ್ಯೂನ್ಯತೆ ಎಸಗಿರುತ್ತಾರೆ ಎಂದು ನೀಡಿದ್ದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಎದುರುದಾರರಿಂದ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ.

ದೂರುದಾರರು ಎದುರುದಾರರಿಂದ ಒಂದು ಲೀಟರ್ ಏಷಿಯನ್ ವುಡ್ ಪ್ರೈಮರ್‌ಗೆ ಶೇ. 76 ರಷ್ಟು ರಿಯಾಯಿತಿದರದಲ್ಲಿ ರೂ. 540/- ಹಾಗೂ ಶಿಪ್ಪಿಂಗ್ ಚಾರ್ಚ್ ರೂ. 41/- ಸೇರಿ ರೂ. 540/- ಗಳನ್ನು ಪಾವತಿಸಿ ಖರೀದಿಸಿರುತ್ತಾರೆ.

ಆದರೆ ಪರೀಶೀಲಿದಾಗ ಎಂ.ಆರ್.ಪಿ. ಬೆಲೆಯನ್ನು ಅಳಿಸಿ, ಬಿಳಿ ಕಾಗದವನ್ನು ಅಂಟಿಸಿರುತ್ತಾರೆ. ಅದರ ನಿಜವಾದ ಬೆಲೆ 324/- ರೂ.ಗಳಿದ್ದು ರೂ. 216/-ಗಳ ಹೆಚ್ಚಿನ ಮೊತ್ತ ಪಡೆದಿದ್ದು, ಈ ಕುರಿತು ಎದುರುದಾರರಿಗೆ ಹೆಚ್ಚಿನ ಹಣವನ್ನು ಮರುಪಾವತಿಸುವಂತೆ ಲೀಗಲ್ ನೋಟೀಸ್ ನೀಡಿರುತ್ತಾರೆ. ಆದರೆ ಎದುರುದಾರರು ಯಾವುದೇ ಪ್ರತ್ಯುತ್ತರ ನೀಡದೆ ಸೇವಾನ್ಯೂನತೆ ಎಸಗಿರುತ್ತಾರೆ ಎಂದು ಆಯೋಗಕ್ಕೆ ದೂರನ್ನು ಸಲ್ಲಿಸಿರುತ್ತಾರೆ.

Image of district dispute redressal department ಆಯೋಗವು ದೂರುದಾರರ ಸಲ್ಲಿಸಿರುವ ಪ್ರಮಾಣ ಪತ್ರ ಮತ್ತು ದಾಖಲಾತಿಗಳನ್ನು ಪರಿಶೀಲಿಸಿ, ದೂರುದಾರರ ವಾದವನ್ನು ಆಲಿಸಿ, ಎದುರುದಾರರ ಎಂಆರ್‌ಪಿ ಗಿಂತ ಹೆಚ್ಚಿ ಹಣವನ್ನು ಪಡೆದು ಸೇವಾ ನ್ಯೂನ್ಯತೆ ಎಸಗಿರುತ್ತಾರೆ ಎಂದು ತೀರ್ಮಾನಿಸಿ, ದೂರನ್ನು ಭಾಗಶಃ ಪುರಸ್ಕರಿಸಿ, ಎದುರುದಾರರು ದೂರುದಾರರಿಂದ ಪಡೆದಿರುವ ಹೆಚಿನ ಮೊತ್ತ ರೂ. 216/-ಗಳಿಗೆ ದಿ:13/09/2024ರಿಂದ ವಾರ್ಷಿಕ ಶೇ. 9ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣವನ್ನು ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಹಾಗೂ ರೂ. 25,000/- ಗಳನ್ನು ಮಾನಸಿಕ ಹಿಂಸೆ ಮತ್ತು ದೂರಿನ ಖರ್ಚು ವೆಚ್ಚಕ್ಕಾಗಿ ಈ ಆದೇಶವಾದ 45 ದಿನಗಳೊಳಗಾಗಿ ದೂರುದಾರರಿಗೆ ಪಾವತಿಸುವಂತೆ ತಪ್ಪಿದ್ದಲ್ಲಿ ವಾರ್ಷಿಕ ಶೇ. 12ರ ಬಡ್ಡಿಯನ್ನು ಸೇರಿಸಿ ಪೂರ್ತಿ ಹಣ ಪಾವತಿಸುವವರೆಗೆ ನೀಡುವಂತೆ ಜಿಲ್ಲಾ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗದ ಅಧ್ಯಕ್ಷರಾದ ಟಿ.ಶಿವಣ್ಣ ಮತ್ತು ಸದಸ್ಯರಾದ ಬಿ.ಡಿ.ಯೋಗಾನಂದ ಭಾಂಡ್ಯ ಇವರನ್ನೊಳಗೊಂಡ ಪೀಠವು ಡಿ.31 ರಂದು ಆದೇಶಿಸಿದೆ ಎಂದು ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗದ ಸಹಾಯಕ ರಿಜಿಸ್ಟಾçರ್ ಗಂಗಾಧರ ನಾಯ್ಕ್ ಎಂ.ಟಿ. ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...

Online shopping ಆನ್ ಲೈನ್ ಶಾಪಿಂಗ್ ಬಗ್ಗೆ ಬಹಳ ಜಾಗರೂಕರು ಹಾಗು ಜಾಣರಾಗಿರಿ- ಟಿ.ಶಿವಣ್ಣ.

Online shopping ಇತ್ತೀಚಿನ ಕಾಲಮಾನದಲ್ಲಿ ಆನ್‌ಲೈನ್ ಶಾಪಿಂಗ್ ಹೆಚ್ಚುತ್ತಿದೆ. ಆನ್‌ಲೈನ್ ಶಾಪಿಂಗ್...

Shivamogga-Bangalore Train ಬೆಂಗಳೂರು- ತಾಳಗುಪ್ಪ ಇಂಟರ್ ಸಿಟಿ ಎಕ್ಸ್ ಪ್ರೆಸ್ ಗೆ ಹೊಸ ಕೋಚ್ ಗಳ ಸೇರ್ಪಡೆ-ಸಂಸದ ಬಿ.ವೈ.ರಾಘವೇಂದ್ರ.

Shivamogga-Bangalore Train ಬೆಂಗಳೂರು ಮತ್ತು ತಾಳಗುಪ್ಪ ನಡುವೆ ಸಂಚರಿಸುವ ರೈಲು ಸಂಖ್ಯೆ...

Pallavi G ನಿವೇಶನ ರಹಿತ ಅಲೆಮಾರಿ ಜನಾಂಗದವರಿಗೆ ಮೊದಲ ಆದ್ಯತೆ ನೀಡಿ- ಜಿ.ಪಲ್ಲವಿ.

Pallavi G ಶಿವಮೊಗ್ಗ ತಾಲ್ಲೂಕುಗಳಲ್ಲಿನ ಸಮಾಜ ಕಲ್ಯಾಣ ಅಧಿಕಾರಿಗಳು, ತಹಶೀಲ್ದಾರರು, ಇಓ,...