Friday, May 15, 2026
Friday, May 15, 2026

Samanvaya Trust ಉಚಿತ ವಾಚನಾಲಯ ದ ಪ್ರಯೋಜನ ಪಡೆದು ಉನ್ನತ ಹುದ್ದೆಗೆ ಆಯ್ಕೆಯಾದ ರಾಜಶೇಖರ್ ಗೆ ಸನ್ಮಾನ

Date:

Samanvaya Trust ಸಮನ್ವಯ ಟ್ರಸ್ಟ್ ನ ಕೆ.ಎ.ದಯಾನಂದ ಐಎಎಸ್ ವಾಚನಾಲಯದಲ್ಲಿ ಅಧ್ಯಯನ ನಡೆಸುತ್ತಿದ್ದ ಸೊರಬ ತಾಲೂಕಿನ ಹಲಸಿನಕೊಪ್ಪ ಗ್ರಾಮದ ರಾಜಶೇಖರ ಅವರು ಕೇಂದ್ರ ಸರ್ಕಾರದ ಗೃಹ ಇಲಾಖೆಯ ಸಿಐಎಸ್‌ಎಫ್ ( ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ) ಜನರಲ್ ಡ್ಯೂಟಿ ಹುದ್ದೆಗೆ ನೇಮಕಗೊಂಡಿದ್ದಾರೆ.

ಕೆ.ಎ.ದಯಾನಂದ್ ಐಎಎಸ್ ಹೆಸರಿನಲ್ಲಿ ಸಮನ್ವಯ ಟ್ರಸ್ಟ್ ವತಿಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಎರಡು ವರ್ಷದಿಂದ ಉಚಿತ ವಾಚನಾಲಯ ನಡೆಸುತ್ತಿದ್ದು, ಈವರೆಗೂ 7 ಆಕಾಂಕ್ಷಿಗಳು ಕೇಂದ್ರ ಮತ್ತು ಸರ್ಕಾರದ ಹುದ್ದೆಗೆ ನೇಮಕಗೊಂಡಿದ್ದಾರೆ.

ಸೊರಬ ತಾಲೂಕಿನ ಹಲಸಿನಕೊಪ್ಪ ಗ್ರಾಮದ ಸುರೇಶ್ ಅವರ ಪುತ್ರ ರಾಜಶೇಖರ ಅವರು ಕೆ.ಎ. ದಯಾನಂದ ಉಚಿತ ವಾಚನಾಲಯದಲ್ಲಿ ಅಧ್ಯಯನ ನಡೆಸುವ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗೆ ತರಬೇತಿ ಪಡೆಯುತ್ತಿದ್ದರು.

ಸಾವಿರಾರು ಪುಸ್ತಕಗಳು ಉಚಿತ ವಾಚನಾಲಯದಲ್ಲಿ ಲಭ್ಯವಿದ್ದು, ಡಿಜಿಟಲ್ ಲೈಬ್ರರಿ ಸೌಲಭ್ಯ ಸಹ ಇದೆ.
ಸಿಐಎಸ್‌ಎಫ್ ( ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯೂರಿಟಿ ಫೋರ್ಸ್ ) ಜನರಲ್ ಡ್ಯೂಟಿ ಹುದ್ದೆಗೆ ಆಯ್ಕೆಯಾಗಿರುವ ರಾಜಶೇಖರ ಅವರಿಗೆ ಸಮನ್ವಯ ಟ್ರಸ್ಟ್ ನ ಕೆ.ಎ.ದಯಾನಂದ ಐಎಎಸ್ ವಾಚನಾಲಯದ ಪರವಾಗಿ ಅಭಿನಂದಿಸಲಾಯಿತು.

Samanvaya Trust ಸಮನ್ವಯ ಟ್ರಸ್ಟ್ ಅಧ್ಯಕ್ಷೆ ಗಿರಿಜಾದೇವಿ, ಆಡಳಿತಾಧಿಕಾರಿ ಯತೀಶ್, ಸಮನ್ವಯ ಕಾಶಿ, ತರಬೇತಿ ಕೇಂದ್ರದ ವಿದ್ಯಾರ್ಥಿಗಳು ರಾಜಶೇಖರ ಅವರಿಗೆ ಶುಭಕೋರಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Forest Department ವಾಹನ ಸಂಚಾರದ ಹೆಚ್ಚಳ: ವನ್ಯಜೀವಿಗಳ ಮುಕ್ತ ಓಡಾಟಕ್ಕೆ ಅಡ್ಡಿಯಾಗಿ ಮಾನವ- ವನ್ಯಪ್ರಾಣಿ ಸಂಘರ್ಷ ಹೆಚ್ಚುತ್ತಿದೆ- ಕುಮಾರ್ ಪುಷ್ಕರ್

Karnataka Forest Department ರಾಜ್ಯದಲ್ಲಿ ವನ್ಯಜೀವಿಗಳ ಸಂಖ್ಯೆ ಹೆಚ್ಚಾಗುತ್ತಿರುವ ಬೆನ್ನಲ್ಲೇ ಮಾನವ–ವನ್ಯಜೀವಿ...

H.K.Patil ಗದಗ ಜಿಲ್ಲೆ ಲಕ್ಕುಂಡಿ ಪುರಾತನ ವಸ್ತುಗಳನ್ನ ದೆಹಲಿ ರಾಷ್ಟ್ರೀಯ ವಸ್ತು ಸಂಗ್ರಹಾಲಯದಲ್ಲಿ ವೀಕ್ಷಿಸಿ ಮೆಚ್ಚಿದ ಸಚಿವ ಎಚ್.ಕೆ.ಪಾಟೀಲ್

H.K.Patil. ನವದೆಹಲಿಯ ರಾಷ್ಟ್ರೀಯ ವಸ್ತುಸಂಗ್ರಹಾಲಯಕ್ಕೆ ಇಂದು ಸನ್ಮಾನ್ಯ ಪ್ರವಾಸೋದ್ಯಮ ಸಚಿವರಾದ...