Wednesday, September 16, 2026
Wednesday, September 16, 2026

Dharmasthala Rural Development Project ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ವಾತ್ಸಲ್ಯ ಕಿಟ್ ವಿತರಣೆ

Date:

Dharmasthala Rural Development Project ಶಿವಮೊಗ್ಗ ತಾಲೂಕಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ವತಿಯಿಂದ ಪೂಜ್ಯ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಮಾರ್ಗದರ್ಶನದಂತೆ ದಿನಾಂಕ 05.02.2026 ರಂದು ತಾಲೂಕಿನ 10 ಮಂದಿ ಮಾಶಾಸನ ಫಲಾನುಭವಿಗಳಿಗೆ ವಾತ್ಸಲ್ಯ ಕಿಟ್ ವಿತರಣೆ ಮಾಡಲಾಯಿತು.

ಪೂಜ್ಯ ಡಾ. ಡಿ ವೀರೇಂದ್ರಹೆಗ್ಗಡೆಯವರು ಹಾಗೂ ಮಾತೃಶ್ರೀ ಹೇಮಾವತಿ ವಿ ಹೆಗ್ಗಡೆ ಯವರ ಆಶಯದಂತೆ ಪ್ರತೀ ತಿಂಗಳು 59 ಮಂದಿ ನಿರ್ಗತಿಕರಿಗೆ ರೂ.1000/- ಮಾಶಾಸನ ನೀಡಲಾಗುತ್ತಿದೆ. ಅಲ್ಲದೇ ಪ್ರತೀ ವರ್ಷದಂತೆ ಕಡು ಬಡವರಿಗೆ ವಾತ್ಸಲ್ಯ ಕಿಟ್ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಕಿಟ್ ನಲ್ಲಿ ದಿನ ಬಳಕೆಗೆ ಅಗತ್ಯ ವಸ್ತುಗಳಾದ ಚಾಪೆ, ದಿಂಬು, ಬೆಡ್ ಶೀಟ್ ಗಳು, ಟವಲ್, ಸೀರೆ, ಲಂಗ, ನೈಟಿ, ಪಂಚೆ, ಶರ್ಟ್, ಬರ್ಮುಡಾ, ಸೋಪು, ಬಚಾಣಿಕೆ ಮುಂತಾದ ವಸ್ತುಗಳನ್ನು ನೀಡಲಾಗಿದೆ.

Dharmasthala Rural Development Project ವಿತರಣಾ ಕಾರ್ಯಕ್ರಮದಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ), ನ ಜಿಲ್ಲಾ ನಿರ್ದೇಶಕರಾದ ಶ್ರೀಯುತ ಮುರುಳಿಧರ್ ಶೆಟ್ಟಿ, ಜಿಲ್ಲಾ ಎಂ.ಐ.ಎಸ್ ಯೋಜನಾಧಿಕಾರಿಗಳಾದ ಶ್ರೀಯುತ ಬಾಲಕೃಷ್ಣ ನಾಯ್ಕ್, ತಾಲೂಕಿನ ಕ್ಷೇತ್ರ ಯೋಜನಾಧಿಕಾರಿಗಳಾದ ಶ್ರೀಮತಿ ಯಶೋಧ, ತಾಲೂಕಿನ ಜ್ಞಾನವಿಕಾಸ ಸಮನ್ವಯಾಧಿಕಾರಿ, ವಲಯಗಳ ಮೇಲ್ವಿಚಾರಕರು ಹಾಗೂ ಸೇವಾಪ್ರತಿನಿಧಿಗಳು, ವಲಯಗಳ ಒಕ್ಕೂಟ ಪದಾಧಿಕಾರಿಗಳು, ಊರಿನ ಗಣ್ಯರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...