Saturday, March 28, 2026
Saturday, March 28, 2026

Sri Sri Sri Dr.Nirmalanandanatha Maha Swamiji ಪೋಷಕರು ,ಮಕ್ಕಳ ಅಭಿರುಚಿಯನ್ನ ಪ್ರೋತ್ಸಾಹಿಸಬೇಕು- ಶ್ರೀನಾದಮಯಾನಂದನಾಥ ಶ್ರೀ.

Date:

Sri Sri Sri Dr.Nirmalanandanatha Maha Swamiji “ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅವಶ್ಯಕ – ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಕಿವಿ ಮಾತು.”
ಶಿವಮೊಗ್ಗ,ಫೆ,07: ಮಗು ಮೊದಲು ತನ್ನಲ್ಲಿ ತಾನು ಆತ್ಮವಿಶ್ವಾಸ ಮೂಡಿಸಿಕೊಳ್ಳುವುದು ಅತ್ಯಾವಶ್ಯಕ. ತನ್ನ ಕಲಿಕೆ ತನ್ನ ಏಳಿಗೆ ಎಂಬ ಅರಿವು ಮೂಡಿದರೆ ಕಲಿಕೆಯ ಶ್ರಮ ಸಾರ್ಥಕವಾಗುತ್ತದೆ ಎಂದು ಶ್ರೀ ಆದಿಚುಂಚನಗಿರಿ ಶಾಖಾಮಠದ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ಅಭಿಪ್ರಾಯ ಪಟ್ಟರು.
ಅವರು ನಗರದ ಶ್ರೀ ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಶಿವಮೊಗ್ಗ ಶಾಖೆಯ ಗುರುಪುರದ ಬಿಜಿಎಸ್ ಗುರುಕುಲ ಶಾಲೆಯ ಸಭಾಂಗಣದಲ್ಲಿ ಪ್ರೌಢ ಶಾಲೆಯ ವಿಭಾಗದ ಹತ್ತನೇ ತರಗತಿ ವಿದ್ಯಾರ್ಥಿಗಳಿಗೆ ಪುನಶ್ಚೇತನ ಕಾರ್ಯಕ್ರಮದಲ್ಲಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಿದ ಶ್ರೀಗಳು
ಪರೀಕ್ಷೆಯ ಅಂಕಗಳಿಕೆಯೇ ಜೀವನವಲ್ಲ, ವ್ಯಾಸಂಗದ ಮೂಲಕ ಬದುಕಿನ ಪ್ರತಿ ಗಳಿಕೆಯನ್ನು ಪ್ರಜ್ಞಾಪೂರ್ವಕವಾಗಿ ಕಳೆಯಬೇಕು. ಮೊದಲು ನಮಗೆ ನಾವು ಬೆಳಕಾಗಬೇಕು, ನಮ್ಮ ಬದುಕು ಬೆಳಗುತ್ತಿದ್ದರೆ, ಬೇರೆಯವರಿಗೆ ಬೆಳಕು ಸಿಗುತ್ತದೆ ಎಂದರು.
ಪ್ರತಿಯೊಬ್ಬ ವಿದ್ಯಾರ್ಥಿಯಲ್ಲಿಯೂ ಒಂದೇ ರೀತಿಯ ಗ್ರಹಿಕ ಶಕ್ತಿ ಹಾಗೂ ಸಾಮರ್ಥ್ಯ ಇರಲು ಸಾಧ್ಯವಿಲ್ಲ.ಹಾಗಾಗಿ ಪೋಷಕರು ಮಕ್ಕಳ ಅಭಿರುಚಿಗೆ ತಕ್ಕ ಪ್ರೋತ್ಸಾಹ ನೀಡಿದರೆ ಅವರು ಉತ್ತಮ ಸಾಧನೆ ಮಾಡಲು ಸಾಧ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ್ದ, ಖ್ಯಾತ ಮನೋವೈದ್ಯರು ಹಾಗೂ ಕೌನ್ಸೆಲರ್ ಆಗಿರುವ ಡಾ. ಐಶ್ವರ್ಯ ವಿ .ಎಚ್. ವಿದ್ಯಾರ್ಥಿಗಳನ್ನು ಕುರಿತು ಮಾತನಾಡುತ್ತಾ,
Sri Sri Sri Dr.Nirmalanandanatha Maha Swamiji ಪರೀಕ್ಷೆಗೆ ಕೆಲವೇ ದಿನಗಳು ಇರುವ ಈ ಸಂದರ್ಭದಲ್ಲಿ ಪ್ರತಿ ನಿಮಿಷವನ್ನೂ ಕೂಡ ವ್ಯಯಮಾಡದೇ ಸದುಪಯೋಗ ಪಡಿಸಿಕೊಂಡು ಅಭ್ಯಾಸ ಮಾಡಿದ್ದೇ ಆದರೆ ಪರೀಕ್ಷೆಯಲ್ಲಿ ನಿಮ್ಮ ನಿರೀಕ್ಷೆಯ ಗೋಲನ್ನು ಮುಟ್ಟಲು ಸಾಧ್ಯವಾಗುತ್ತದೆ ಎಂದರು.
ತಾನು ಓದಲು ಕೂರುವ ಸ್ಥಳದಲ್ಲಿ ವೇಳಾ ಪಟ್ಟಿ, ದಿನಚರಿಯ ಪಟ್ಟಿಯನ್ನು ಸದಾ ಕಣ್ಣಿಗೆ ಕಾಣುವಂತೆ ಇರಿಸಿಕೊಳ್ಳಬೇಕು. ತರಗತಿಯಲ್ಲಿ ತನಗಿಂತ ಹೆಚ್ಚು ಅಂಕ ಪಡೆದ ಸಹಪಾಠಿಯನ್ನು ಕಂಡು ಅಸೂಯೆ ಪಡದೆ ಅವನ ಓದಿನ ವಿಧಾನವನ್ನು ಅರಿತು ತಾನೂ ಅದನ್ನು ಕ್ರಮೇಣ ಅಳವಡಿಸಿಕೊಳ್ಳಬಹುದು.ಓದುವಾಗ ಏಕಾಗ್ರತೆ ಹೆಚ್ಚಲು ತನಗೆ ತಾನೆ ಸಕಾರತ್ಮಾಕವಾದ ಅಂಶಗಳನ್ನು ಹೇಳಿಕೊಂಡು ಓದಲು ಕೂರುವ ಮುನ್ನ ಎಲ್ಲವನ್ನು ಬಳೆಯಲ್ಲಿರಿಸಿಕೊಂಡು ಒಂದೆಡೆ ಏಕಾಗ್ರತೆಯಿಂದ ಕೂತು ಕಲಿಯಲು ಪ್ರಯತ್ನಿಸಬೇಕು. 10 ನಿಮಿಷಗಳ ನಂತರ ಪುಸ್ತಕವನ್ನು ಮುಚ್ಚಿ ಅಲ್ಲಿಯವರೆಗೆ ಓದಿದ್ದನ್ನು ಮರುಕಳಿಸಬೇಕು.
ನಿಮ್ಮ ಜೀವನದಲ್ಲಿ ನಿಮಗೆ ತಂದೆ-ತಾಯಿಗಳೇ ಶಕ್ತಿ ಮತ್ತು ಆಸರೆ ಹಾಗಾಗಿ ನಿಮ್ಮ ಈ ಒಂದು ಎರಡು ವರ್ಷ ಮೊಬೈಲ್,ರೀಲ್ಸ್, ಫೇಸ್ಬುಕ್,ಇನ್ಸ್ಟಾಗ್ರಾಮ್ ಸಾಮಾಜಿಕ ಜಾಲತಾಣಗಳಿಂದ ದೂರ ಇದ್ದರೆ ನಿಮ್ಮ ಗುರಿ ತಲುಪಲು ಸಾಧ್ಯವಾಗುತ್ತದೆ ಎಂದರು.
ಮಕ್ಕಳ ಮನಸ್ಸನ್ನು ಅರ್ಥ ಮಾಡಿಕೊಂಡು ಪಾಠ ಮಾಡುವುದು ಒಂದು ಕಲೆ, ಯಾವುದೋ ಒಂದು ಪರೀಕ್ಷೆಯಲ್ಲಿ ಮಗು ಶೂನ್ಯ ಅಂಕವನ್ನು ಪಡೆಯಿತು ಎಂದರೆ ಅದರ ಭವಿಷ್ಯವೇ ಮುಗಿದಂತೆ ಅಲ್ಲ. ಇದನ್ನು ಅರ್ಥ ಮಾಡಿಕೊಂಡು ಶಿಕ್ಷಕರು ಮಗುವನ್ನು ಹುರಿದುಂಬಿಸುವಂತಹ ಕಾರ್ಯವನ್ನು ಮಾಡಬೇಕು.ಪ್ರತಿಯೊಂದು ಮಗುವಿನಲ್ಲಿಯೂ ಕೂಡ ಅದರದ್ದೇ ಆದ ಜ್ಞಾನ ಮಟ್ಟವಿರುತ್ತದೆ. ಅದನ್ನು ಪುನಶ್ಚೇತನಗೊಳಿಸುವ ಕಾರ್ಯ ನಿಮ್ಮದಾಗಿರುತ್ತದೆ ಎಂದು ಶಿಕ್ಷಕರಿಗೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಗುರುಪುರದ ಬಿಜಿಎಸ್ ಶಾಲಾ ಕಾಲೇಜಿನ ಪ್ರಾಂಶುಪಾಲರಾದ ಸುರೇಶ್ ಎಸ್.ಹೆಚ್, ಮತ್ತು ಗಣ್ಯರು ಹಾಗೂ ವಿದ್ಯಾರ್ಥಿಗಳು,ಪೋಷಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa 2026-27 ನೇ ಶೈಕ್ಷಣಿಕ ವರ್ಷದಲ್ಲಿ ಒಂದನೇ ತರಗತಿಗೆ ದಾಖಲಾಗುವ ಮಕ್ಕಳ ವಯೋಮಿತಿಯಲ್ಲಿ 60 ದಿನ ಸಡಿಲಿಕೆ- ಮಧು ಬಂಗಾರಪ್ಪ.

Madhu Bangarappa “ಒಂದನೇ ತರಗತಿಗೆ ದಾಖಲಾಗುವ ಮಕ್ಕಳಿಗೆ ಆರು ವರ್ಷ ತುಂಬಿರಲೇಬೇಕು...

MADHU BANGARAPPA ಶಿಕ್ಷಣದಲ್ಲಿ ಹಿಂದಿ ಹೇರಿಕೆ ವಿರೋಧ ಮತ್ತು ‘ಪಾಸ್ ವಿಥೌಟ್ ಹಿಂದಿ’ ಜಾರಿ ಕುರಿತು ಚರ್ಚೆ

MADHU BANGARAPPA ರಾಜ್ಯದ ಶಾಲಾಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಮಂತ್ರಿಗಳಾದ ಮಧುಬಂಗಾರಪ್ಪ...

Morarji Desai Residential School ಜಿಲ್ಲೆಯ ಮೊರಾರ್ಜಿ ದೇಸಾಯಿ‌ ವಸತಿ ಶಾಲೆ 6 ನೆ ತರಗತಿಗೆ ಪ್ರವೇಶ ಪರೀಕ್ಷೆ.

Morarji Desai Residential School ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯ...

Mylaralingeshwara Temple Shimoga ಮಾರ್ಚ್ 29. ಮೈಲಾರೇಶ್ವರ ದೇವಸ್ಥಾನದಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ

Mylaralingeshwara Temple in Shimoga ಶಿವಮೊಗ್ಗ ನಗರದಲ್ಲಿನ ಶ್ರೀ ಮೈಲಾರೇಶ್ವರ ದೇವಸ್ಥಾನನಲ್ಲಿ...