Madhu Bangarappa ಗುಡ್ಡೆಮನೆ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ ಸಾಗರ ತಾಲೂಕಿನ ತಾಳಗುಪ್ಪ ಹೋಬಳಿಯ ಗುಡ್ಡೆಮನೆ ಗ್ರಾಮದ ನಾಳಂದ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಆಯೋಜಿಸಿದ್ದ ‘ಬಂಗಾರಪ್ಪ ಟ್ರೋಫಿ’ ಕ್ರಿಕೆಟ್ ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಶಾಲಾ ಶಿಕ್ಷಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ. ಮಧು ಬಂಗಾರಪ್ಪ ಪಾಲ್ಗೊಂಡಿದ್ದರು.
ಕ್ರಿಕೆಟ್ ಕೇವಲ ಒಂದು ಆಟವಲ್ಲ ಅದು ಸಾಧನೆಯ ಹಾದಿಯಾಗಿದೆ. ಗ್ರಾಮೀಣ ಭಾಗದಲ್ಲಿ ಇಂತಹ ರಾಜ್ಯಮಟ್ಟದ ಪಂದ್ಯಾವಳಿಗಳು ನಡೆಯುವುದರಿಂದ ಸ್ಥಳೀಯ ಕ್ರೀಡಾಪಟುಗಳಿಗೆ ಹೆಚ್ಚಿನ ಅವಕಾಶಗಳು ದೊರಕುತ್ತವೆ. ಸತತ 4 ದಿನಗಳ ಕಾಲ ಶಿಸ್ತುಬದ್ಧವಾಗಿ ಈ ಟೂರ್ನಿಯನ್ನು ಆಯೋಜಿಸಿದ ಯುವಕರ ತಂಡಕ್ಕೆ ಮತ್ತು ಭಾಗವಹಿಸಿದ ಎಲ್ಲಾ ಆಟಗಾರರಿಗೆ ಅಭಿನಂದನೆಗಳನ್ನು ಮಧು ಬಂಗಾರಪ್ಪ ತಿಳಿಸಿದರು
Madhu Bangarappa ಬಳಿಕ ಪ್ರಥಮ ಬಹುಮಾನವಾಗಿ 2 ಲಕ್ಷ ರೂಪಾಯಿಗಳ ನಗದು, ದ್ವಿತೀಯ ಬಹುಮಾನವಾಗಿ 1 ಲಕ್ಷ ರೂಪಾಯಿಗಳ ನಗದು ಬಹುಮಾನದ ಚೆಕ್ ಗಳನ್ನು ವಿಜೇತ ತಂಡಗಳಿಗೆ ನೀಡುವ ಮೂಲಕ ಬಂಗಾರಪ್ಪ ಟ್ರೋಫಿ ಗೆದ್ದ ಸಾಧಕರಿಗೆ ಸಚಿವರು ಶುಭ ಹಾರೈಸಿದರು
