Thursday, September 10, 2026
Thursday, September 10, 2026

ಮರಾಠ ಅಭಿವೃದ್ದಿ ನಿಗಮದಿಂದ ಆಹಾರ ವಾಹಿನಿ ಯೋಜನೆ ಸೌಲಭ್ಯದ ಪ್ರಕಟಣೆ

Date:

ಶಿವಮೊಗ್ಗ ಜಿಲ್ಲಾ ಮರಾಠ ಸಮುದಾಯದ ಹಿಂದುಳಿದ ವರ್ಗಗಳ ಅಭಿವೃದ್ದಿ ನಿಗಮದ ವತಿಯಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ. 3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ತಂತ್ರಾಂಶದ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ಮರಾಠ ಜನಾಂಗದಲ್ಲಿ ಪ್ರವರ್ಗ 3-ಬಿ ಅಡಿಯಲ್ಲಿ 2(ಎ) ರಿಂದ 2 (ಎಫ್) ವರೆಗೆ ಬರುವ (ಎ) ಮರಾಠ, ಮರಾಠ (ಬಿ) ಅರೆಕ್ಷತ್ರಿಯ, ಅರೆ ಮರಾಠ, ರ‍್ಯ ಮರಾಠ (ಸಿ), ಆರ್ಯ, ಅರ್ಯರು (ಡಿ), ಕೊಂಕಣ ಮರಾಠ (ಇ), ಕ್ಷತ್ರಿಯ ಮರಾಠ/ಕ್ಷತ್ರಿಯ ಮರಾಠ (ಎಫ್), ಕುಳವಾಡಿ ಜಾತಿಗಳಿಗೆ ಅನ್ವಯವಾಗುತ್ತದೆ.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡಿನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಂಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬ ವಾರ್ಷಿಕ ವರಮಾನ 3 ಲಕ್ಷ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿರಬೇಕು. ಒಂದು ಬಾರಿ ನಿಗಮದ ಯಾವುದಾದರು ಯೋಜನೆಯಲ್ಲಿ ಪ್ರಯೋಜನ ಪಡೆದಿದ್ದಲ್ಲಿ ಅಂತಹವರು ಹಾಗೂ ಅವರ ಕುಟುಂಬದವರು ಮತ್ತೊಮ್ಮೆ ಸೌಲಭ್ಯ ಕೋರಿ ಅರ್ಜಿ ಸಲ್ಲಿಸುವಂತಿಲ್ಲ.
ಆಸಕ್ತರು ಸೇವಾಸಿಂಧು ಪೋರ್ಟಲ್ https://sevasindhu.karnataka.gov.in ಮೂಲಕ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಮಾ. 05 ರೊಳಗಾಗಿ ಸಲ್ಲಿಸುವಂತೆ ಕ. ಮ. ಸ. ಅ. ನಿ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://kmcdc.karnataka.gov.in/kn/ ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಚೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ತೆ, ಕೆ,ಇ.ಬಿ. ಸರ್ಕಲ್ ಹತ್ತಿರ, ಶಿವಮೊಗ್ಗ, ದೂ.ಸಂ: 08182-229634 ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...