Saturday, July 25, 2026
Saturday, July 25, 2026

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಫೆ. 24 ರಿಂದ ಮಾರ್ಚ್ 4 ವರೆಗೆ ಜಾತ್ರಾ ಮಹೋತ್ಸವ

Date:

ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿ
ದಿ :15.02.2026 ರಂದು ಭಾನುವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ರವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ನಗರದ ಭಜನಾ ಪರಿಷತ್ ಶಿವಮೊಗ್ಗ, ಮತ್ತು ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಇವರುಗಳ ಸಹಯೋಗದಲ್ಲಿ 18ನೇ ವರ್ಷದ ಅಖಂಡ ಭಜನೆಯನ್ನು ಏರ್ಪಡಿಸಲಾಗಿದೆ.
ಶರಾವತಿ ನಗರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15 ರ ಬೆಳಿಗ್ಗೆ 6:00 ಗಂಟೆಗೆ ದೇವರಿಗೆ ವಿಶೇಷ ಪೂಜೆ,ಮತ್ತು ಸಾಯಂಕಾಲ 6:00. ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ,ಪೂಜಾ ಕೈಂಕರ್ಯ ಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ವಿಶೇಷ ಪೂಜಾ ಕೈಂಕರ್ಯಗಳು:
ಫೆ 15 ರಂದು ಬೆಳಿಗ್ಗೆ 5.30 ರಿಂದ ಏಕವಾರ ರುದ್ರಾಭಿಷೇಕ ಆರಂಭಿಸಲಾಗುವುದು, 6ಕ್ಕೆ ಅಖಂಡ ಭಜನೆ ಉದ್ಘಾಟನೆ,ಬೆಳಗ್ಗೆ 7 ಕ್ಕೆ ಮಹಾಮಂಗಳಾರತಿ ಮಾಡಲಾಗುವುದು.
ಸಂಜೆ 6 ಗಂಟೆಗೆ ರುದ್ರಾಭಿಷೇಕ, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ ನಡೆಯುವುದು.
ರಾತ್ರಿ 10 ರಿಂದ ರುದ್ರಾಭಿಷೇಕ, ರಾತ್ರಿ 11:30 ಗಂಟೆಗೆ ಮಹಾಮಂಗಳಾರತಿ ನಡೆಯುವುದು.
ರಾತ್ರಿ 1 ಗಂಟೆಗೆ ರುದ್ರಾಭಿಷೇಕ,ರಾತ್ರಿ 2.30 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುವುದು, ರಾತ್ರಿ 3:00ಗೆ ರುದ್ರಾಭಿಷೇಕ,ಬೆಳಿಗ್ಗೆ 4:30 ಗಂಟೆಗೆ ಮಹಾಮಂಗಳಾರತಿ ಮಾಡಲಾಗುವುದು.
ಫೆ. 9ರ ಸೋಮವಾರದಂದು ಬೆಳಿಗ್ಗೆ 5:00 ಗಂಟೆಗೆ ರುದ್ರಾಭಿಷೇಕ, ಬೆಳಗೆ 6 ಗಂಟೆಗೆ ಅಖಂಡ ಭಜನೆ ಸಮಾರೋಪ, 6:15 ಗಂಟೆಗೆ ಮಹಾಮಂಗಳಾರತಿ ನಡೆಯುವುದು. ದೇವರಿಗೆ ರುದ್ರಾಭಿಷೇಕ, ಬಿಲ್ವಪತ್ರೆ, ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗುವುದು.
ವಿಶೇಷವೆಂದರೆ ಫೆ. 15 ರ ಬೆಳಿಗ್ಗೆ 6 ರಿಂದ ನಗರದ ವಿವಿಧ ಭಜನಾ ತಂಡಗಳಿಂದ ಸೋಮವಾರ ಬೆಳಿಗ್ಗೆ 6:00 ಗಂಟೆಯ ವರೆಗೆ ಅಖಂಡ ಭಜನೆ ಮತ್ತು ಶಿವ ಸಂಕೀರ್ತನೆಗಳನ್ನು ಭಜನಾ ತಂಡಗಳಿಂದ ಏರ್ಪಡಿಸಲಾಗಿದೆ.
ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ
ಹೊರವಲಯ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಿಗ್ಗೆ 6:30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜೆ ಅಲಂಕಾರಗಳನ್ನು ಮತ್ತು ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಸೋಮವಾರ ಬೆಳಿಗ್ಗೆ ವೀರ ಸೋಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ,ಶ್ರೀಮಠದ ವ್ಯವಸ್ಥಾಪಕರು ಪತ್ರಿಕಾ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...