Thursday, June 4, 2026
Thursday, June 4, 2026

ಶ್ರೀಕ್ಷೇತ್ರ ಆದಿಚುಂಚನಗಿರಿಯಲ್ಲಿ ಫೆ. 24 ರಿಂದ ಮಾರ್ಚ್ 4 ವರೆಗೆ ಜಾತ್ರಾ ಮಹೋತ್ಸವ

Date:

ಶರಾವತಿ ನಗರದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠ,ಶಿವಮೊಗ್ಗ ಶಾಖೆಯಲ್ಲಿ
ದಿ :15.02.2026 ರಂದು ಭಾನುವಾರ ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನ ಮಠದ ಪ್ರಧಾನ ಕಾರ್ಯದರ್ಶಿಗಳಾದ ಪೂಜ್ಯ ಶ್ರೀ ಶ್ರೀ ಪ್ರಸನ್ನನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಹಾಗೂ ಶ್ರೀ ಆದಿಚುಂಚನಗಿರಿ ಶಾಖಾ ಮಠ ಶಿವಮೊಗ್ಗ ಶಾಖೆಯ ಪೂಜ್ಯ ಶ್ರೀ ಶ್ರೀ ನಾದಮಯಾನಂದನಾಥ ಸ್ವಾಮೀಜಿ ರವರ ದಿವ್ಯ ಉಪಸ್ಥಿತಿಯಲ್ಲಿ ಹಾಗೂ ನಗರದ ಭಜನಾ ಪರಿಷತ್ ಶಿವಮೊಗ್ಗ, ಮತ್ತು ನಗರದ ಎಲ್ಲಾ ಭಜನಾ ಮಂಡಳಿಗಳ ಒಕ್ಕೂಟ ಇವರುಗಳ ಸಹಯೋಗದಲ್ಲಿ 18ನೇ ವರ್ಷದ ಅಖಂಡ ಭಜನೆಯನ್ನು ಏರ್ಪಡಿಸಲಾಗಿದೆ.
ಶರಾವತಿ ನಗರ ಶ್ರೀ ಕಾಲಭೈರವೇಶ್ವರ ಸ್ವಾಮಿ ದೇವಾಲಯದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಫೆಬ್ರವರಿ 15 ರ ಬೆಳಿಗ್ಗೆ 6:00 ಗಂಟೆಗೆ ದೇವರಿಗೆ ವಿಶೇಷ ಪೂಜೆ,ಮತ್ತು ಸಾಯಂಕಾಲ 6:00. ಗಂಟೆಗೆ ಜಲಾಭಿಷೇಕ, ಕ್ಷೀರಾಭಿಷೇಕ. ಪಂಚಾಮೃತ ಅಭಿಷೇಕ. ರುದ್ರಾಭಿಷೇಕ,ಪೂಜಾ ಕೈಂಕರ್ಯ ಗಳನ್ನು ಶ್ರೀಮಠದ ವತಿಯಿಂದ ಹಮ್ಮಿಕೊಳ್ಳಲಾಗಿದೆ.
ವಿಶೇಷ ಪೂಜಾ ಕೈಂಕರ್ಯಗಳು:
ಫೆ 15 ರಂದು ಬೆಳಿಗ್ಗೆ 5.30 ರಿಂದ ಏಕವಾರ ರುದ್ರಾಭಿಷೇಕ ಆರಂಭಿಸಲಾಗುವುದು, 6ಕ್ಕೆ ಅಖಂಡ ಭಜನೆ ಉದ್ಘಾಟನೆ,ಬೆಳಗ್ಗೆ 7 ಕ್ಕೆ ಮಹಾಮಂಗಳಾರತಿ ಮಾಡಲಾಗುವುದು.
ಸಂಜೆ 6 ಗಂಟೆಗೆ ರುದ್ರಾಭಿಷೇಕ, ರಾತ್ರಿ 7:30ಕ್ಕೆ ಮಹಾ ಮಂಗಳಾರತಿ ನಡೆಯುವುದು.
ರಾತ್ರಿ 10 ರಿಂದ ರುದ್ರಾಭಿಷೇಕ, ರಾತ್ರಿ 11:30 ಗಂಟೆಗೆ ಮಹಾಮಂಗಳಾರತಿ ನಡೆಯುವುದು.
ರಾತ್ರಿ 1 ಗಂಟೆಗೆ ರುದ್ರಾಭಿಷೇಕ,ರಾತ್ರಿ 2.30 ಗಂಟೆಗೆ ಮಹಾ ಮಂಗಳಾರತಿ ನಡೆಸಲಾಗುವುದು, ರಾತ್ರಿ 3:00ಗೆ ರುದ್ರಾಭಿಷೇಕ,ಬೆಳಿಗ್ಗೆ 4:30 ಗಂಟೆಗೆ ಮಹಾಮಂಗಳಾರತಿ ಮಾಡಲಾಗುವುದು.
ಫೆ. 9ರ ಸೋಮವಾರದಂದು ಬೆಳಿಗ್ಗೆ 5:00 ಗಂಟೆಗೆ ರುದ್ರಾಭಿಷೇಕ, ಬೆಳಗೆ 6 ಗಂಟೆಗೆ ಅಖಂಡ ಭಜನೆ ಸಮಾರೋಪ, 6:15 ಗಂಟೆಗೆ ಮಹಾಮಂಗಳಾರತಿ ನಡೆಯುವುದು. ದೇವರಿಗೆ ರುದ್ರಾಭಿಷೇಕ, ಬಿಲ್ವಪತ್ರೆ, ಹೂಗಳಿಂದ ವಿಶೇಷ ಅಲಂಕಾರ ಮಾಡಲಾಗುವುದು.
ವಿಶೇಷವೆಂದರೆ ಫೆ. 15 ರ ಬೆಳಿಗ್ಗೆ 6 ರಿಂದ ನಗರದ ವಿವಿಧ ಭಜನಾ ತಂಡಗಳಿಂದ ಸೋಮವಾರ ಬೆಳಿಗ್ಗೆ 6:00 ಗಂಟೆಯ ವರೆಗೆ ಅಖಂಡ ಭಜನೆ ಮತ್ತು ಶಿವ ಸಂಕೀರ್ತನೆಗಳನ್ನು ಭಜನಾ ತಂಡಗಳಿಂದ ಏರ್ಪಡಿಸಲಾಗಿದೆ.
ಶ್ರೀ ಆದಿಚುಂಚನ ಗಿರಿ ಶಿಕ್ಷಣ ಟ್ರಸ್ಟ್, ಶಿವಮೊಗ್ಗ ಶಾಖೆಯ
ಹೊರವಲಯ ಗುರುಪುರದ “ಶ್ರೀ ವೀರಸೋಮೇಶ್ವರಸ್ವಾಮಿ ದೇವಾಲಯ” ದಲ್ಲಿ ಮಹಾ ಶಿವರಾತ್ರಿ ಪ್ರಯುಕ್ತ ಭಾನುವಾರ ಬೆಳಿಗ್ಗೆ 6:30ಕ್ಕೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜೆ ಅಲಂಕಾರಗಳನ್ನು ಮತ್ತು ಜಾಗರಣೆ ಮತ್ತು ಶಿವ ಸಂಕೀರ್ತನೆಗಳನ್ನು,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು.
ಸೋಮವಾರ ಬೆಳಿಗ್ಗೆ ವೀರ ಸೋಮೇಶ್ವರ ಸ್ವಾಮಿಗೆ ಪಂಚಾಮೃತ ಅಭಿಷೇಕ, ರುದ್ರಾಭಿಷೇಕ,ವಿಶೇಷ ಪೂಜಾ ಕೈಂಕರ್ಯಗಳನ್ನು ನಡೆಸಲಾಗುವುದು. ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬಂದು ದೇವರ ಕೃಪೆಗೆ ಪಾತ್ರರಾಗಬೇಕಾಗಿ,ಶ್ರೀಮಠದ ವ್ಯವಸ್ಥಾಪಕರು ಪತ್ರಿಕಾ ಕೋರಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...