Friday, June 5, 2026
Friday, June 5, 2026

Rotary Club Shimoga ಫೆಬ್ರವರಿ 14. ಶಿವಮೊಗ್ಗದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ

Date:

Rotary Club Shimoga ರೋಟರಿ ಕ್ಲಬ್ ಶಿವಮೊಗ್ಗ ಪೂರ್ವ ವತಿಯಿಂದ ಜೆಸಿಐ ಶಿವಮೊಗ್ಗ ಸಹ್ಯಾದ್ರಿ, ಶಿವಮೊಗ್ಗ ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘ ಹಾಗೂ ಹರಪನಹಳ್ಳಿಯ ಜನನಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಫೆಬ್ರವರಿ 14ರಂದು ಶನಿವಾರ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಶಾಂತಲಾ ಸ್ಫೆರೋಕಾಸ್ಟ್ ಸಭಾಂಗಣದಲ್ಲಿ ಉಚಿತ ಪ್ರಕೃತಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ.
ಫೆಬ್ರವರಿ 14ರಂದು ಬೆಳಗ್ಗೆ 10ಕ್ಕೆ ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಶಿಬಿರ ಉದ್ಘಾಟಿಸುವರು. ಜನನಿ ಆಸ್ಪತ್ರೆ ಮುಖ್ಯ ವೈದ್ಯಾಧಿಕಾರಿ ಡಾ. ರಾಜೇಶ್ ಪಾದೇಕಲ್ ಅಧ್ಯಕ್ಷತೆ ವಹಿಸುವರು. ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿ ಪ್ರಕಾಶ್, ಜನನಿ ಸಮೂಹ ಸಂಸ್ಥೆಗಳ ಸಾರ್ವಜನಿಕ ಸಂಪರ್ಕ ಮುಖ್ಯಸ್ಥ ಉದಯಶಂಕರ ಭಟ್, ರೋಟರಿ ಶಿವಮೊಗ್ಗ ಪೂರ್ವ ಅಧ್ಯಕ್ಷ ಕಿಶೋರ್ ಕುಮಾರ್, ಜೆಸಿಐ ಶಿವಮೊಗ್ಗ ಸಹ್ಯಾದ್ರಿ ಅಧ್ಯಕ್ಷ ಸಂತೋಷ್ ಕುಮಾರ್ ಬಿ.ಎನ್, ಜಿಲ್ಲಾ ಗಾಣಿಗ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಜಿ.ವಿಜಯಕುಮಾರ್ ಅತಿಥಿಗಳಾಗಿ ಭಾಗವಹಿಸುವರು.
ಬೆಳಗ್ಗೆ 10 ರಿಂದ ಮಧ್ಯಾಹ್ನ 2ರವರೆಗೆ ಶಿಬಿರ ನಡೆಯಲಿದೆ. ಶಿಬಿರದಲ್ಲಿ ಉಚಿತ ವೈದ್ಯಕೀಯ ಸಮಾಲೋಚನೆ ಮತ್ತು ಆಹಾರ ಸಲಹೆ, ರಕ್ತದಲ್ಲಿನ ಸಕ್ಕರೆ ಅಂಶ ತಪಾಸಣೆ, ಪ್ರಕೃತಿ ಚಿಕಿತ್ಸೆ ಹಾಗೂ ಯೋಗ ಸಮಾಲೋಚನೆ, ಆಕ್ಯುಪಂಕ್ಚರ್ ಮತ್ತು ಆಕ್ಯುಪ್ರೆಶರ್, ಬೊಜ್ಜು ಮತ್ತು ಬೆನ್ನು ನೋವು ಸಮಸ್ಯೆಗೆ ಚಿಕಿತ್ಸೆ ಮತ್ತಿತರ ಸೌಲಭ್ಯಗಳಿರುತ್ತವೆ.
Rotary Club Shimoga ಬೆನ್ನುನೋವು, ಕೀಲುನೋವು, ಅಧಿಕ ರಕ್ತದ ಒತ್ತಡ, ಬೊಜ್ಜು, ಮಧುಮೇಹ, ಹೈಪರ್‌ಟೆನ್ಷನ್, ಥೈರಾಯ್ಡ್ ತೊಂದರೆ, ಗ್ಯಾಸ್ಟ್ರೈಟೀಸ್, ಮೈಗ್ರೇನ್, ನಿದ್ರಾಹೀನತೆ, ಉದ್ವಿಗ್ನತೆ, ಪಾಶ್ರ‍್ವವಾಯು, ಸ್ಪಾಂಡಿಲೈಟಿಸ್ ಮತ್ತಿತರ ಸಮಸ್ಯೆಗಳಿಂದ ಬಳಲುವವರು ಶಿಬಿರದ ಪ್ರಯೋಜನ ಪಡೆಯಬಹುದು. ವಿವರಗಳಿಗೆ ಮೊಬೈಲ್ ಸಂಖ್ಯೆ 9448105198 ಸಂಪರ್ಕಿಸಬಹುದಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

DK Shivakumar ಸರ್ಕಾರದ ಸುಗಮ ಆಡಳಿತಕ್ಕೆ ಅಧಿಕಾರಿಗಳೇ ಬೆನ್ನೆಲುಬು. ಜನಗಳ ಕಷ್ಟಗಳಿಗೆ ತಕ್ಷಣ ಸ್ಪಂದಿಸಿ- ಡಿ.ಕೆ.ಶಿವಕುಮಾರ್.

DK Shivakumar ಸರ್ಕಾರದ ಎಲ್ಲಾ ಅಪರ ಕಾರ್ಯದರ್ಶಿ, ಪ್ರಧಾನ ಕಾರ್ಯದರ್ಶಿ, ಕಾರ್ಯದರ್ಶಿ, ಎಲ್ಲಾ...

Shivamogga News ತೆರಿಗೆ ಸಲಹೆಗಾರರೆ…ನಿಮಗಾಗಿ ಜೂನ್ 5 ರಂದು ವಿಶೇಷ ವಿಚಾರ ಸಂಕಿರಣ

Shivamogga News ಶಿವಮೊಗ್ಗ ಜಿಲ್ಲಾ ಟ್ಯಾಕ್ಸ್ ಬಾರ್ ವತಿಯಿಂದ ದಿನಾಂಕ 05-06-2026...

B.Y. Raghavendra ನಿಮ್ಮ ಆಡಳಿತ ಸಹಕಾರ,ಸಮನ್ವಯ , ಸಾರ್ಥಕತೆಯಿಂದ ಮುನ್ನಡೆಯಲಿ” – ಸಂಸದ ಬಿ.ವೈ.ರಾಘವೇಂದ್ರ ಹಾರೈಕೆ

B.Y. Raghavendra ಕರ್ನಾಟಕ ರಾಜ್ಯದ 24ನೇ ಮುಖ್ಯಮಂತ್ರಿಗಳಾಗಿ ಪ್ರಮಾಣ ವಚನ ಸ್ವೀಕರಿಸಿದ...