ವಂದೇ ಮಾತರಂ ಗೀತೆಗೆ 150 ವರ್ಷವಾದ ಹಿನ್ನೆಲೆಯಲ್ಲಿ ಕೇಂದ್ರದಿಂದ ಮಹತ್ವದ ನಿರ್ಧಾರ ಎಂದು ಸಂಸದ ಬಿ.ವೈ.ರಾಘವೇಂದ್ರ ತಿಳಿಸಿದ್ದಾರೆ.
B.Y. Raghavendra ರಾಷ್ಟ್ರಗೀತೆಗೂ ಮುನ್ನ ವಂದೇ ಮಾತರಂ ಗೀತೆಯನ್ನು ಹಾಡುವುದು ಅಥವಾ ನುಡಿಸುವುದು ಕಡ್ಡಾಯ. ಪದ್ಮ ಪ್ರಶಸ್ತಿ ಸೇರಿದಂತೆ ನಾಗರಿಕ ಪ್ರಶಸ್ತಿ ಪ್ರದಾನ ಸಮಾರಂಭಗಳಲ್ಲಿ, ರಾಷ್ಟ್ರಪತಿಗಳು ಭಾಗವಹಿಸುವ ಇತರ ಎಲ್ಲಾ ಕಾರ್ಯಕ್ರಮಗಳು, ಅಧಿಕೃತ ಸರ್ಕಾರಿ ಕಾರ್ಯಕ್ರಮಗಳಲ್ಲಿ ವಂದೇ ಮಾತರಂ ಗೀತೆ ನುಡಿಸಬೇಕು ಅಥವಾ ಹಾಡಬೇಕು. 3 ನಿಮಿಷ 10 ಸೆಕೆಂಡ್ಗಳ ವಂದೇ ಮಾತರಂ ಗೀತೆಯ 6 ಚರಣಗಳ ಗೀತೆ ನುಡಿಸುವಾಗ ಅಥವಾ ಹಾಡುವಾಗ ಎಲ್ಲರೂ ಕಡ್ಡಾಯವಾಗಿ ಎದ್ದು ನಿಲ್ಲಬೇಕು ಎಂದು ಕೇಂದ್ರ ಗೃಹ ಸಚಿವಾಲಯ ಹೊಸ ಮಾರ್ಗಸೂಚಿ ಹೊರಡಿಸಿದೆ ಎಂದು ಶಿವಮೊಗ್ಗ ಲೋಕಸಭಾಕ್ಷೇತ್ರದ ಸಂಸದ ಬಿ.ವೈ.ರಾಘವೇಂದ್ರ ಕೇಂದ್ರ ಸರ್ಕಾರದ ಕ್ರಮಕ್ಕೆ ಮೆಚ್ಚುಗೆ ಸೂಚಿಸಿ, ಸ್ವಾಗತಿಸಿದ್ದಾರೆ
