ಶಿವಮೊಗ್ಗ ನಗರದ ಸಾಗರ ರಸ್ತೆಯ ವೀರೇಶ್ವರ ಪುಣ್ಯಾಶ್ರಮ ಸಂಸ್ಕತ ಪಾಠ ಶಾಲೆಯಲ್ಲಿ ಗಾನಲಹರಿ ೧೧೭ನೇ ಅಮಾವಾಸ್ಯೆಯ ಸಂಗೀತ ಸಂಜೆ ಕಾರ್ಯಕ್ರಮವನ್ನು ಫೆ. ೧೭ರ ಮಂಗಳವಾರ ಸಂಜೆ ೬.೩೦ಕ್ಕೆ ಆಯೋಜಿಸಲಾಗಿದೆ.
ರಾಜ್ಯ ಪ್ರಶಸ್ತಿ ಪುರಸ್ಕೃತ ಆರ್.ಬಿ. ಸಂಗಮೇಶ್ವರ ಗವಾಯಿಗಳೂ ಅಧ್ಯಕ್ಷತೆ ವಹಿಸಿದ್ದರು. ನಗರದ ಶ್ರೀರಾಮ ಕ್ಷತ್ರಿಯ ಭಜನಾ ಮಂಡಳಿಯಿಂದ ಭಜನಾ ಸೇವೆ ಮತ್ತು ಆಶ್ರಮದ ಅಂಧ ಮಕ್ಕಳು ಪ್ರಾರ್ಥಿಸಲಿದ್ದಾರೆ. ದಾವಣಗೆರೆಯ ಗಾಯಕರಾದ ಕು. ಶ್ರೀಗೌರಿ ಎಂ. ಜೋಶಿ ಅವರು ಸಂಗೀತ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ರಾಜ್ಯ ಪ್ರಶಸ್ತಿ ಪುರಸ್ಕತ ರಾಮಣ್ಣ ಭಜಂತ್ರಿ, ವೀರಭದ್ರಶಾಸ್ತ್ರಿ ವೇದ ಘೋಷ, ವಿನಾಯಕ ಭಟ್ ತಬಲ, ಸಿದ್ದಣ್ಣ ಬಡಿಗೇರ್ ಹಾರ್ಮೋನಿಯಂ ಜೊತೆ ಸಾಥ್ ನೀಡಲಿದ್ದಾರೆ. ರೇವಣ್ಣ ಸಿದ್ದಯ್ಯ ಶಾಸ್ತ್ರಿಗಳು ನಿರೂಪಿಸಲಿದ್ದಾರೆ.
ಫೆ. 17. ವೀರೇಶ್ವರ ಪುಣ್ಯಾಶ್ರಮದಲ್ಲಿ ಕು.ಶ್ರೀಗೌರಿ ಎಂ.ಜೋಷಿ ಅವರ ಗಾಯನ
Date:
