ಶಿವಮೊಗ್ಗದಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ವಿಶೇಷ ಭೂ ಸ್ವಾಧೀನಾಧಿಕಾರಿ ಮತ್ತು ಗ್ರಾಮ ಸಹಾಯಕರನ್ನು ಅವರನ್ನು ವಶಕ್ಕೆ ಪಡೆದಿದ್ದಾರೆ.
40 ಸಾವಿರ ರೂ. ಲಂಚ ಪಡೆಯುವಾಗ ಗ್ರಾಮ ಸಹಾಯಕ ರಾಜೇಶ್ ಹಾಗೂ ವಿಶೇಷ ಭೂ ಸ್ವಾಧೀನಾಧಿಕಾರಿ ಸಿದ್ಧಲಿಂಗರೆಡ್ಡಿ ಅವರನ್ನ ವಶಕ್ಕೆ ಪಡೆದಿದ್ದಾರೆ.
ಸಿದ್ದಲಿಂಗರೆಡ್ಡಿ ಅವರು ಈ ಹಿಂದೆ ಶಿವಮೊಗ್ಗದ ಅಪರ ಜಿಲ್ಲಾಧಿಕಾರಿಯಾಗಿ ಕಾರ್ಯ ನಿರ್ವಹಿಸಿದ್ದರು.
ಕೆಲ ತಿಂಗಳ ಹಿಂದೆಯಷ್ಟೇ ವಿಶೇಷ ಭೂ ಸ್ವಾಧೀನಾಧಿಕಾರಿ ವರ್ಗಾವಣೆಯಾಗಿದ್ದ ಸಿದ್ದಲಿಂಗ ರೆಡ್ಡಿ ಅವರು
ತಮ್ಮ ಸಹಾಯಕನ ಮೂಲಕ
ಕಾರಿನ ಮಾಸಿಕ ಬಾಡಿಗೆ ಹಣ ಮಂಜೂರು ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಕಾರು ಚಾಲಕ ಕೇಶವಮೂರ್ತಿ ದೂರಿನನ್ವಯ ಲೋಕಾಯುಕ್ತ ಟೀಮ್ ದಾಳಿ ನಡೆಸಲಾಗಿತ್ತು.
ಇಬ್ಬರನ್ನೂ ಲೋಕಾಯುಕ್ತ ಕಚೇರಿಯಲ್ಲಿ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ ಎನ್ನಲಾಗಿದೆ.
