Friday, July 24, 2026
Friday, July 24, 2026

ಭರಮಸಾಗರದಲ್ಲಿ ಭಕ್ತಿಪೂರ್ಣ ಶಿವರಾತ್ರಿ ಆಚರಣೆ

Date:

ಮಹಾಶಿವರಾತ್ರಿ ಅಂಗವಾಗಿ ಭರಮಸಾಗರದಲ್ಲಿ ಸ್ಥಾಪಿತವಾಗಿರುವ ಈಶ್ವರ ಸ್ವರೂಪದ ಶ್ರೀ ಸಿಬಾರ ಮೈಲಾರಲಿಂಗ ಸ್ವಾಮಿಗೆ ಭಕ್ತಿಭಾವಪೂರ್ಣ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಕಾರ್ಯಕ್ರಮಗಳು ವೈಭವದಿಂದ ನೆರವೇರಿದವು.

ಪ್ರತಿವರ್ಷದಂತೆ ಈ ವರ್ಷವೂ ನಾಡಿಗೇರ್ ಮನೆತನದವರಿಂದ ಭಕ್ತಿಪೂರ್ವಕವಾಗಿ ಸಾಂಗವಾಗಿ ಪೂಜಾ ಕೈಂಕರ್ಯಗಳನ್ನು ಆಯೋಜಿಸಲಾಗಿತ್ತು.

ಭರಮಸಾಗರದ ಐತಿಹಾಸಿಕ ಕೆರೆಯನ್ನು ಬಿಚ್ಚುಗತ್ತಿ ಭರಮಣ್ಣ ನಾಯಕರು ನಿರ್ಮಿಸಿದ್ದರೆಂದು ಪ್ರಸಿದ್ಧಿ ಹೊಂದಿದ್ದು, ಅದರ ತಟದಲ್ಲಿರುವ ಶ್ರೀ ಆಂಜನೇಯ ದೇವಸ್ಥಾನದ ಮುಂಭಾಗದಲ್ಲಿ 2006ರಲ್ಲಿ ಈ ಪವಿತ್ರ ಸಿಬಾರ ಕಟ್ಟೆ ಪ್ರತಿಷ್ಠಾಪಿಸಲಾಯಿತು. ಭರಮಸಾಗರದ ದಿವಂಗತ ಶ್ರೀ ಭೀಮರಾವ್ ನಾಡಿಗೇರ್ ಹಾಗೂ ದಿವಂಗತ ಶ್ರೀ ಮಾಲತೇಶರಾವ್ ನಾಡಿಗೇರ್ ಅವರು ಲೋಕಕಲ್ಯಾಣಾರ್ಥವಾಗಿ ಈ ದೇವರ ಪ್ರತಿಷ್ಠಾಪನೆ ನಡೆಸಿದದ್ದು ವಿಶೇಷವಾಗಿದೆ.

ಅಂದಿನಿಂದಲೂ ಪ್ರತಿವರ್ಷ ಶಿವರಾತ್ರಿ ಸಂದರ್ಭದಲ್ಲಿ ವಿಶೇಷ ಪೂಜೆ, ರುದ್ರಾಭಿಷೇಕ ಹಾಗೂ ಧಾರ್ಮಿಕ ಕಾರ್ಯಕ್ರಮಗಳು ಶ್ರದ್ಧಾ ಭಕ್ತಿಯಿಂದ ನಡೆಯುತ್ತಿವೆ.

ಈ ವರ್ಷದ ಮಹಾಶಿವರಾತ್ರಿ ಸಂದರ್ಭದಲ್ಲಿ ಮುಂಜಾನೆಯಿಂದಲೇ ವೇದಘೋಷಗಳ ನಡುವೆ ಅಭಿಷೇಕ, ಅಲಂಕಾರ, ನೈವೇದ್ಯ ಹಾಗೂ ಮಹಾಮಂಗಳಾರತಿ ನೆರವೇರಿಸಲಾಯಿತು. ವಿಶೇಷವಾಗಿ ರುದ್ರಪಠಣದೊಂದಿಗೆ ನಡೆದ ರುದ್ರಾಭಿಷೇಕ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಆಶೀರ್ವಾದ ಪಡೆದರು.

ಶ್ರೀ ಮಲ್ಲಾರಿರಾವ್, ಶ್ರೀ ನಾಗಭೂಷಣರಾವ್, ಶ್ರೀ ವಿಜಯಕುಮಾರ, ಶ್ರೀ ಚಂದ್ರಶೇಖರ್ ಹಾಗೂ ಶ್ರೀ ಮುರುಳೀಧರ ನಾಡಿಗೇರ್ ಅವರು ಪೂಜಾ ವಿಧಿಗಳನ್ನು ನೆರವೇರಿಸಿದರು. ಕಾರ್ಯಕ್ರಮದಲ್ಲಿ ಗ್ರಾಮಸ್ಥರು, ಭಕ್ತರು ಹಾಗೂ ಕುಟುಂಬ ಸದಸ್ಯರು ಉಪಸ್ಥಿತರಿದ್ದು ಧಾರ್ಮಿಕ ಭಾವನೆಯಲ್ಲಿ ತೊಡಗಿದರು.
ಸಂಜೆಯ ವೇಳೆಗೆ ಭಕ್ತರಿಗೆ ಪ್ರಸಾದ ವಿತರಣೆ ವ್ಯವಸ್ಥೆ ಮಾಡಲಾಗಿತ್ತು. ಶಿವನಾಮಸ್ಮರಣೆ ಹಾಗೂ ಭಜನೆಗಳೊಂದಿಗೆ ಭಕ್ತಿಭಾವದ ವಾತಾವರಣ ನಿರ್ಮಾಣಗೊಂಡಿದ್ದು, ಕಾರ್ಯಕ್ರಮವು ಶಾಂತಿಯುತವಾಗಿ ಹಾಗೂ ಭಕ್ತಿಯುತವಾಗಿ ಸಮಾಪ್ತಿಗೊಂಡಿತು.
ಶಿವರಾತ್ರಿಯ ಪವಿತ್ರ ಸಂದರ್ಭದಲ್ಲಿ ಭಕ್ತರ ಮನಸ್ಸಿನಲ್ಲಿ ಆಧ್ಯಾತ್ಮಿಕ ಚೈತನ್ಯ ಮೂಡಿಸುವ ಈ ಕಾರ್ಯಕ್ರಮ ಭರಮಸಾಗರದ ಧಾರ್ಮಿಕ ಪರಂಪರೆಯ ಪ್ರತೀಕವಾಗಿ ಮತ್ತೊಮ್ಮೆ ಬೆಳಗಿತು.

ಮುರುಳೀಧರ್ ನಾಡಿಗೇರ್

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...