Thursday, September 10, 2026
Thursday, September 10, 2026

S.N. Channabasappa ಶಿವಮೊಗ್ಗ ನಗರದ ಒಂದನೇ ವಾರ್ಡಿನ ಜನಸಮಸ್ಯೆ ಬಗ್ಗೆ ಶಾಸಕರಿಂದ ಪರಿಶೀಲನೆ. ಅಧಿಕಾರಿಗಳಿಗೆ ಸೂಚನೆ

Date:

S.N. Channabasappa ಶಿವಮೊಗ್ಗ ನಗರದ 1ನೇ ವಾರ್ಡ್ ವ್ಯಾಪ್ತಿಯ ಆದರ್ಶ ಕಾಲೋನಿಯ ನಿವಾಸಿಗಳು ಎದುರಿಸುತ್ತಿರುವ ಮೂಲಭೂತ ಸಮಸ್ಯೆಗಳನ್ನು ಬಗೆಹರಿಸುವಂತೆ ಶಾಸಕರಾದ ಶ್ರೀ ಎಸ್.ಎನ್. ಚನ್ನಬಸಪ್ಪ ಅವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಇಂದು ಬೆಳಿಗ್ಗೆ ಮಹಾನಗರ ಪಾಲಿಕೆಯ ಅಧಿಕಾರಿಗಳ ತಂಡದೊಂದಿಗೆ ಬಡಾವಣೆಯ ನಿವಾಸಿಗಳೊಂದಿಗೆ ಸಭೆ ನಡೆಸಿದ ಶಾಸಕರು, ಸಾರ್ವಜನಿಕರ ಅಹವಾಲು ಸ್ವೀಕರಿಸಿದರು. ಈ ವೇಳೆ ಬಡಾವಣೆಯಲ್ಲಿ ವಿದ್ಯುತ್ ಏರುಪೇರಿನಿಂದಾಗಿ ಗೃಹೋಪಯೋಗಿ ವಸ್ತುಗಳು ಹಾನಿಯಾಗುತ್ತಿರುವುದು ಬಗ್ಗೆ ಮಾಹಿತಿ ಪಡೆದು ಇಂತಹ ತಾಂತ್ರಿಕ ದೋಷಗಳನ್ನು ಅಧಿಕಾರಿಗಳು ತಕ್ಷಣವೇ ಸರಿಪಡಿಸುವಂತೆ ಸೂಚಿಸಿದರು.

ಜೊತೆಗೆ, ಬಡಾವಣೆಯ ಪಾರ್ಕ್ ಅಭಿವೃದ್ಧಿಪಡಿಸುವುದು, ಕುಡಿಯುವ ನೀರಿನ ಸಮರ್ಪಕ ಪೂರೈಕೆ, ಬೀದಿ ದೀಪಗಳ ದುರಸ್ತಿ ಹಾಗೂ ಪ್ರಮುಖ ರಸ್ತೆಗಳಿಗೆ ನಾಮಫಲಕಗಳನ್ನು ಅಳವಡಿಸುವ ಕಾರ್ಯಗಳನ್ನು ಕೂಡಲೇ ಆರಂಭಿಸಲು ಪಾಲಿಕೆ ಅಧಿಕಾರಿಗಳಿಗೆ ಸೂಚಿಸಿದರು.

S.N. Channabasappa ಈ ಸಂದರ್ಭದಲ್ಲಿ ಪಾಲಿಕೆಯ ಇಂಜಿನಿಯರ್‌ಗಳು, ಸ್ಥಳೀಯ ಮುಖಂಡರು ಹಾಗೂ ನಿವಾಸಿಗಳು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...