Friday, July 24, 2026
Friday, July 24, 2026

Nijasharan Ambigara Chowdarya Development Corporation ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಆಹಾರ ವಾಹಿನಿ ಸೌಲಭ್ಯ ಪ್ರಕಟಣೆ

Date:

Nijasharan Ambigara Chowdarya Development Corporation ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ವತಿಯಿಂದ ಹಿಂದುಳಿದ ವರ್ಗಗಳ ಜನರಿಂದ 2025-26 ನೇ ಸಾಲಿಗೆ ಆಹಾರ ವಾಹಿನಿ ಯೋಜನೆಯಡಿ ಸ್ಥಳಾಂತರಿಸಬಹುದಾದ ತಿಂಡಿ ಮಳಿಗೆಗಳನ್ನು ನಾಲ್ಕು ಚಕ್ರಗಳ ಇವಿ-ಗೂಡ್ಸ್ ವಾಹನಗಳನ್ನು ಅಗತ್ಯಕ್ಕೆ ತಕ್ಕಂತೆ ನವೀಕರಿಸಿ ಫಲಾನುಭವಿಗಳಿಗೆ ವಿತರಿಸುವ ಯೋಜನೆಯಲ್ಲಿ ನಿಗಮದಿಂದ ವಾಹನ ಖರೀದಿಗೆ ರೂ.3.00 ಲಕ್ಷಗಳ ಸಹಾಯಧನವನ್ನು ಪಡೆಯಲು ಸೇವಾಸಿಂಧು ಪೋರ್ಟೆಲ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಈ ಯೋಜನೆಯು ವಿಶ್ವಕರ್ಮ, ಉಪ್ಪಾರ, ಅಂಬಿಗ, ಸವಿತಾ, ಅಲೆಮಾರಿ/ಅರೆಅಲೆಮಾರಿ ಸಮುದಾಯ,, ಒಕ್ಕಲಿಗೆ, ಲಿಂಗಾಯತ, ಕಾಡುಗೊಲ್ಲ, ಹಟ್ಟಿಗೊಲ್ಲ, ಮರಾಠ ಮತ್ತು ಇದರ ಉಪಜಾತಿ ಸಮುದಾಯಗಳನ್ನು ಹೊರತುಪಡಿಸಿ ನಿಜಶರಣ ಅಂಬಿಗರ ಚೌಡಯ್ಯ ಸಮುದಾಯಕ್ಕೆ ಮಾತ್ರ ಸೇರಿದವರಾಗಿರಬೇಕು.
ಅರ್ಜಿದಾರರು ಆಧಾರ್ ಜೋಡಣೆಯಾದ ಚಾಲ್ತಿಯಲ್ಲಿರುವ ಬ್ಯಾಂಕ್ ಖಾತೆಯನ್ನು ಹೊಂದಿರಬೇಕು. ಆಧಾರ್ ಕಾರ್ಡನಲ್ಲಿರುವಂತೆ ಅರ್ಜಿದಾರರ ಹೆಸರು ಇತರೆ ದಾಖಲಾತಿಗಳಾದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ, ಬ್ಯಾಕ್ ಪಾಸ್ ಪುಸ್ತಕದಲ್ಲಿಯೂ ಇರುವಂತೆ ಹೊಂದಾಣಿಕೆಯಾಗಬೇಕು. ಕುಟುಂಬದ ವಾರ್ಷಿಕ ವರಮಾನ 3.00 ಲಕ್ಷಗಳ ಒಳಗಿರಬೇಕು ಮತ್ತು ವಯಸ್ಸು 21 ರಿಂದ 45 ವರ್ಷ ಒಳಗಿನವರಾಗಿಬೇಕು. ಒಂದು ಕುಟುಂಬದ ಒಬ್ಬ ಸದಸ್ಯರು ಮಾತ್ರ ಯಾವುದಾದರು ಒಂದು ಯೋಜನೆಯಲ್ಲಿ ಸೌಲಭ್ಯ ಪಡೆಯಲು ಅರ್ಜಿ ಸಲ್ಲಿಸುವುದು. ಸರ್ಕಾರದ ವಿವೇಚನಾ ಕೋಟಾ/ನಿಗಮದ ಅಧ್ಯಕ್ಷರು/ನಿರ್ದೇಶಕರ ಮಂಡಳಿಯ ವಿವೇಚನಾ ಕೋಟಾದಲ್ಲಿ ಸೌಲಭ್ಯ ಪಡೆಯಬಯಸುವವರೂ ಸಹ ಆನ್‌ಲೈನ್‌ನಲ್ಲಿಯೇ ಅರ್ಜಿಯನ್ನು ಸಲ್ಲಿಸಬೇಕು.
Nijasharan Ambigara Chowdarya Development Corporation ಆಸಕ್ತರು ಸೇವಾಸಿಂಧು ಪೋರ್ಟಲ್ http://sevasindhukarnataka.gov.in ನ ಗ್ರಾಮ್ ಒನ್, ಬೆಂಗಳೂರು ಒನ್, ಕರ್ನಾಟಕ ಒನ್‌ಗಳ ಮೂಲಕ ಆನ್‌ಲೈನ್ ಮೂಲಕ ಮಾರ್ಚ್ 8 ರೊಳಗಾಗಿ ಅರ್ಜಿ ಸಲ್ಲಿಸುವಂತೆ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದರೆ.
ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ https://ambigaradevelopment.karnataka.gov.in ಹಾಗೂ ಜಿಲ್ಲಾ ವ್ಯವಸ್ಥಾಪಕರ ಕಛೇರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಬಾಲರಾಜ್ ಅರಸ್ ರಸ್ಥೆ, ಕೆ.ಇ.ಬಿ. ಸರ್ಕಲ್ ಹತ್ತಿರ,ಶಿವಮೊಗ್ಗ. ದೂ,ಸಂ: 08182-229634 ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ನೀಟ್ ಗೊಂದಲ, ಪ್ರತಿಭಟನೆ : ರಾಷ್ಟ್ರವಿರೋಧಿ ಶಕ್ತಿಗಳ ಕರಾಳ ತಂತ್ರ- ಎಸ್.ಎನ್.ಚನ್ನಬಸಪ್ಪ

S.N. Channabasappa ದೆಹಲಿಯಲ್ಲಿ ಜಿರಳೆ ಪಕ್ಷದ ಹೆಸರಿನಲ್ಲಿ ನಡೆದದ್ದು ವಿದ್ಯಾರ್ಥಿಗಳ ಹೋರಾಟ...

K. J.George ಪ್ರವಾಸೋದ್ಯಮ ಇಲಾಖೆ ವ್ಯಾಪ್ತಿಯ ಹೋಟೆಲ್ ಗಳು, ಆತಿಥ್ಯ ಕೇಂದ್ರಗಳು ಹಂತಹಂತವಾಗಿ ಉನ್ನತೀಕರಣ : ಸಚಿವ ಕೆ.ಜೆ.ಜಾರ್ಜ್

K.J. George ರಾಜ್ಯದ ಪ್ರವಾಸೋದ್ಯಮ ಮೂಲಸೌಕರ್ಯವನ್ನು ಜಾಗತಿಕ ಗುಣಮಟ್ಟಕ್ಕೆ ಏರಿಸುವ ಉದ್ದೇಶದಿಂದ,...

Kuvempu University ಕುವೆಂಪು ವಿವಿಯ ಸ್ನಾತಕೋತ್ತರ ಡಿಪ್ಲೊಮಾ ಪ್ರವೇಶಾತಿಗೆ ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

Kuvempu University ಕುವೆಂಪು ವಿಶ್ವವಿದ್ಯಾಲಯವು 2026-27ನೇ ಸಾಲಿನ ವಿವಿಧ ಸ್ನಾತಕೋತ್ತರ ಪದವಿ,...