Shivamogga Rangayana ಶಿವಮೊಗ್ಗ ರಂಗಾಯಣವು ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಬೊಳುವಾರು ಮೊಹಮ್ಮದ್ ಕುಂಞ ಅವರ ‘ಸ್ವಾತಂತ್ರ್ಯದ ಓಟ’ ಕಾದಂಬರಿಯನ್ನು ನಾಟಕ ರೂಪದಲ್ಲಿ ನಿರ್ಮಾಣ ಮಾಡಿ ರಾಜ್ಯಾದ್ಯಂತ ಪ್ರದರ್ಶನ ನೀಡಲು ಫೆ.17 ರಂದು ಬೆಳಿಗ್ಗೆ 11.00 ಲಂಕೇಶ್ ಪತ್ರಿಕೆಯ ವರದಿಗಾರರು ಮತ್ತು ಖ್ಯಾತ ಅಂಕಣಕಾರ ಬಿ.ಚಂದ್ರೇಗೌಡ ಇವರು ಸ್ವಾತಂತ್ರ್ಯದ ಓಟ ಕಾದಂಬರಿಯ ಕುರಿತು ಮಾತಾನಾಡುವುದರ ಮೂಲಕ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ‘ಸ್ವಾತಂತ್ರ್ಯದ ಓಟ’ ನಾಟಕ ನಿರ್ದೇಶಕಾರದ ನಟರಾಜ್ ಹೊನ್ನವಳ್ಳಿ, ಶಿವಮೊಗ್ಗ ರಂಗಾಯಣದ ನಿರ್ದೇಶಕ ಪ್ರಸನ್ನ ಡಿ ಸಾಗರ, ಆಡಳಿತಾಧಿಕಾರಿ ಡಾ.ಶೈಲಜಾ ಎ.ಸಿ., ಕಲಾವಿದರು, ಸಿಬ್ಬಂದಿಗಳು ಉಪಸ್ಥಿತರಿದ್ದರು.
