Wednesday, September 9, 2026
Wednesday, September 9, 2026

H.S. Sundaresh ಅಂತರ್ಜಲ ಕಾಪಿಡಲು ಶಿವಮೊಗ್ಗದ ಕೆರೆಗಳ ಅಭಿವೃದ್ಧಿ ನಮ್ಮ ಗುರಿ- ಹೆಚ್.ಎಸ್.ಸುಂದರೇಶ್

Date:

H.S. Sundaresh ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಅವರು ಸಾಗರ ರಸ್ತೆಯ ಶಿವಪ್ಪನಾಯಕ ಕೆರೆಯ ಜೀರ್ಣೋದ್ಧಾರ ಸಂಬಂಧ ಸ್ಥಳ ಪರಿಶೀಲನೆಗೆ ಅಧಿಕಾರಿ ವರ್ಗದವರೊಂದಿಗೆ ಇಂದು, (ತಾ. 17-2-26) ರಂದು ಭೇಟಿ ನೀಡಿದ್ದರು.

ಶಿವಮೊಗ್ಗ ಮತ್ತು ಸುತ್ತಮುತ್ತ ಅಂತರ್ಜಲ ಹೆಚ್ಚಿಸುವ ನಿಟ್ಟಿನಲ್ಲಿ ಸಾಧ್ಯವಿರುವ ಎಲ್ಲ ಕೆರೆಗಳ ಅಭಿವೃದ್ಧಿ ಪ್ರಸ್ತಾವನೆ ಇದೆ. ಹೀಗಾಗಿ ಸದ್ಯ ಸಾಗರ ರಸ್ತೆಯಲ್ಲಿ ಸಿರಿಮಲ್ಲಿಗೆ ವಸತಿ ಸಂಘಕ್ಕೆ ಹೊಂದಿಕೊಂಡಂತೆ ಇರುವ ಕೆರೆಯ ಅಭಿವೃದ್ಧಿಯ ಯೋಜನೆಯೂ ಸೇರಿದೆ ಎಂದು ಅಧ್ಯಕ್ಷ ಹೆಚ್.ಎಸ್.ಸುಂದರೇಶ್ ,ಸಿರಿಮಲ್ಲಿಗೆ ವಸತಿ ಸಂಘದ ಅಧ್ಯಕ್ಷರೊಂದಿಗೆ ಮಾತನಾಡುತ್ತಾ ತಿಳಿಸಿದರು.
ಸಿರಿಮಲ್ಲಿಗೆ ವಸತಿ ಸಂಘದ ಜಯಕಮಲ್ ಮತ್ತು ಮಲ್ಲಿಗೆ ನಗರ ಬಡಾವಣೆಗಳ ಪಾರ್ಕ್
ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆಯುವ ಪ್ರಕ್ರಿಯೆ ಹಂತಕ್ಕೆ ಹೋಗಿದೆ ಎಂದು ಹೇಳಿದರು.
ಆದಷ್ಟು ಶೀಘ್ರ ಕೆರೆ ಮತ್ತು ಪಾರ್ಕ್ ಕಾಮಗಾರಿ ಆರಂಭಿಸಿ, ಈ ಪಾರ್ಕ್ ಮತ್ತು ಕೆರೆ ಅಭಿವೃದ್ಧಿಯಿಂದ ಸುತ್ತಲ ಹತ್ತು ಬಡಾವಣೆಯಲ್ಲಿ ವಾಸಿಸುವ ಸಾರ್ವಜನಿಕರಿಗೆ ವಿನೋದ ವಿಹಾರ ತಾಣವಾಗಿ ಕಂಗೊಳಿಸುವಲ್ಲಿ ಸೂಡಾ ಕೊಡುಗೆಯಾಗಿ ಇಲ್ಲಿ ವಸತಯಿರುವ ಸಮುದಾಯಕ್ಕೆ ನೀಡಲಿ, ಸುಂದರೇಶ್ ಅವರ ಅಧಿಕಾರಾವಧಿಯಲ್ಲೇ ಈ ಜನೋಪಯೋಗಿ ಕಾರ್ಯ ಪೂರ್ಣವಾಗುವಂತಾಗಲಿ ಎಂದು ಸಿರಿಮಲ್ಲಿಗೆ ವಸತಿ ಸಂಘದ ಅಧ್ಯಕ್ಷ ಡಾ.ಸುಧೀಂದ್ರ ಹಾರೈಸಿ ಮಾತನಾಡಿದರು.

H.S. Sundaresh ಸಿರಿಮಲ್ಲಿಗೆ ವಸತಿ ಸಂಘದ ಖಜಾಂಚಿ ಮಹೇಶ್ ಯಲಿಗಾರ್, ಹಿರಿಯ ಸಲಹೆಗಾರರುಗಳಾದ ಡಿ.ಎನ್.ಶ್ರೀಧರ ರಾವ್
ನಾಡಿಗ್ ಮತ್ತು ಶಿವಾಜಿರಾವ್, ಸೂಡಾ ಇಂಜಿನಿಯರ್ ಗಂಗಾಧರ ಸ್ವಾಮಿ ಮುಂತಾದ ಅಧಿಕಾರಿ ವರ್ಗದವರು ಈ ಸಂದರ್ಭದಲ್ಲಿ ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa ಸರ್ಕಾರದ ಸೇವೆಗಳನ್ನ ಜನರ ಮನೆಬಾಗಿಲಿಗೆ ತಲುಪಿಸುವ ಉದ್ದೇಶದಿಂದ “ಪ್ರಜಾಸೇವೆ “ಜಾರಿಗೆ: ಮಧು ಬಂಗಾರಪ್ಪ

Madhu Bangarappa ಜನಸಾಮಾನ್ಯರ ದಿನನಿತ್ಯದ ಸಮಸ್ಯೆ-ಸವಾಲುಗಳಿಗೆ, ದುಃಖ ದುಮ್ಮಾನಗಳಿಗೆ ತ್ವರಿತವಾಗಿ ಸ್ಪಂದಿಸಿ,...

S.N. Channabasappa ಸಮಾಜಮುಖಿಯಾಗಿ ಕ್ರಿಯಾಶೀಲವಾಗಿರುವ ಆರ್ಯವೈಶ್ಯ ಶ್ರೀರಾಮಸಹಕಾರ ಸಂಘದ ಕಾರ್ಯ ಶ್ಲಾಘನೀಯ : ಎಸ್.ಎನ್.ಚನ್ನಬಸಪ್ಪ

S.N. Channabasappa "ಸಮಾಜದ ಉದಯೋನ್ಮುಖ ಯುವ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುವುದು ಹಾಗೂ...

B.Y. Raghavendra ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ವಿಳಂಬಕ್ಕೆ ಸಂಸದ ಬಿ.ವೈ. ರಾಘವೇಂದ್ರ ಅಸಮಾಧಾನ

B.Y. Raghavendra ಶಿವಮೊಗ್ಗ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯುತ್ತಿರುವ ವಿವಿಧ ರಾಷ್ಟ್ರೀಯ ಹೆದ್ದಾರಿ...