Thursday, June 4, 2026
Thursday, June 4, 2026

ನೃತ್ಯ ಮತ್ತು ಚಲನೆಯ ಚಿಕಿತ್ಸಾ ಶಿಬಿರಗಳು ಮಕ್ಕಳಿಗೆ ಉಪಯುಕ್ತ- ನ್ಯಾ. ದೀಪಾ

Date:

ಶಿವಮೊಗ್ಗ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಮತ್ತು ಬಾಲನ್ಯಾಯ ಮಂಡಳಿಯ ಸಂಯುಕ್ತ ಆಶ್ರಯದಲ್ಲಿ ಫೆ. 13 ರಂದು ಸರ್ಕಾರಿ ಬಾಲಕಿಯರ ಬಾಲಮಂದಿರದ ಮಕ್ಕಳಿಂದ ನೃತ್ಯ ಮತ್ತು ಚಲನೆಯ ಚಿಕಿತ್ಸಾ ಪ್ರಾತ್ಯಕ್ಷಿಕೆ ಯಶಸ್ವಿಯಾಗಿ ನಡೆಯಿತು.

ಡಾ.ಕೆ.ಎಸ್.ಪವಿತ್ರಾರ ನಿರ್ದೇಶನದಲ್ಲಿ ನಡೆದ ಈ ಶಿಬಿರದಲ್ಲಿ 3 ತಿಂಗಳುಗಳ ಕಾಲ ಕಲಿತ ನೃತ್ಯ ಚಲನೆಯ ವಿವಿಧ ಅಂಶಗಳನ್ನು ಮಕ್ಕಳು ಪ್ರದರ್ಶಿಸಿದರು.

ಬಾಲನ್ಯಾಯ ಮಂಡಳಿಯ ಅಧ್ಯಕ್ಷರು ಮತ್ತು ಹಿರಿಯ ನ್ಯಾಯಾಧೀಶರಾದ ಶ್ರೀಮತಿ ದೀಪಾ ರವರು ಕಾರ್ಯಕ್ರಮ ಉದ್ಘಾಟಿಸಿ ಇಂತಹ ಶಿಬಿರಗಳು ಅಪೇಕ್ಷಣೀಯ. ಮಕ್ಕಳ ಸಾಮರ್ಥ್ಯವನ್ನು ಹತ್ತು ಹಲವು ರೀತಿಗಳಲ್ಲಿ ಬೆಳೆಸುತ್ತವೆ ಎಂದು ಅಭಿಪ್ರಾಯ ಪಟ್ಟರು. ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಮಂಜುನಾಥ್ ಮಾತನಾಡಿ ಇಂತಹ ಪ್ರಯತ್ನಗಳನ್ನು ಎಲ್ಲಾ ಬಾಲಮಂದಿರಗಳಿಗೂ ವಿಸ್ತರಿಸಬೇಕಾದ ಅವಶ್ಯಕತೆಯ ಬಗ್ಗೆ ಗಮನಸೆಳೆದರು.
ಶಿಬಿರದ ನಿರ್ದೇಶಕಿ ಮತ್ತು ಬಾಲ ನ್ಯಾಯ ಮಂಡಳಿಯ ಸದಸ್ಯೆ ಡಾ.ಕೆ.ಎಸ್.ಪವಿತ್ರ. ಮಕ್ಕಳ ಕಲ್ಯಾಣ ಸಮಿತಿಯ ಅಧ್ಯಕ್ಷ ತಾಜುದ್ದೀನ್ ಖಾನ್, ಡಾ.ಪ್ರೀತಿ ಪೈ. ಡಾ.ಅರ್ಚನಾ ಭಟ್, ಶ್ರೀಮತಿ ಜ್ಯೋತಿಕಲಾ ಮತ್ತು ಬಾಲ ನ್ಯಾಯ ಮಂಡಳಿಯ ಸಿಬ್ಬಂದಿ ಭಾಗವಹಿಸಿ ಮಕ್ಕಳನ್ನು ಶ್ಲಾಘಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Tunga Reservoir ಅವಿರತ ಮಳೆ.ತುಂಗಾ ಜಲಾಶಯದಿಂದ ಹೆಚ್ಚುವರಿ ನೀರು ಬಿಡುಗಡೆ ಸಾಧ್ಯತೆ. ಸಾರ್ವಜನಿಕರಿಗೆ ಮುನ್ನೆಚ್ಚರಿಕೆ ಮಾಹಿತಿ.

Tunga Reservoir ತುಂಗಾ ಜಲಾಶಯದ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದ ಮಳೆಯಾಗುವ...

Shivamogga Railway Station ಚಲಿಸುತ್ತಿದ್ದ ರೈಲುಬೋಗಿ ಹತ್ತುವ ಪ್ರಯತ್ನದಲ್ಲಿ ಆಯತಪ್ಪಿ ಬೀಳಲು ಬಿಡದೇ ಪ್ರಯಾಣಿಕರನ್ನು ರಕ್ಷಿಸಿದ ಪೊಲೀಸ್ ಸಿಬ್ಬಂದಿ.

Shivamogga Railway Station ಚಲಿಸುತ್ತಿದ್ದ ರೈಲನ್ನು ಹತ್ತಲು ಯತ್ನಿಸಿದ ಪ್ರಯಾಣಿಕನನ್ನು ರೈಲ್ವೆ ಪೊಲೀಸರು...

H.S. Sundaresh ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು- ಹೆಚ್.ಎಸ್.ಸುಂದರೇಶ್.

H.S. Sundaresh ಪ್ರತಿಯೊಬ್ಬ ಆರೋಗ್ಯವಂತ ಯುವಜನರು ರಕ್ತದಾನ ಮಾಡಲು ಮುಂದಾಗಬೇಕು. ರಕ್ತದಾನ ಮಾಡುವುದರಿಂದ...