Dinesh Gundu Rao ಕರ್ನಾಟಕ ಸಾರ್ವತ್ರಿಕ ಆರೋಗ್ಯ ಆಂದೋಲನ ವತಿಯಿಂದ ಬೆಂಗಳೂರಿನ ಗಾಂಧಿಭವನದಲ್ಲಿ ಇಂದು ಹಮ್ಮಿಕೊಂಡಿದ್ದ ಆರೋಗ್ಯ ಹಕ್ಕಿನ ಜಾಥಾ-2026ರ ಸಮಾರೋಪ ಕಾರ್ಯಕ್ರಮದಲ್ಲಿ ರಾಜ್ಯದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಪಾಲ್ಗೊಂಡು ಮಾತನಾಡಿದರು.
2025-26ನೇ ಸಾಲಿನ ವಾರ್ಷಿಕ ಬೇಡಿಕೆ ಪಟ್ಟಿಗೆ ಸಂಬಂಧಿಸಿದಂತೆ ಸರ್ಕಾರಿ ಆಸ್ಪತ್ರೆಗಳಿಗೆ ಅಗತ್ಯವಿರುವ ಔಷಧಿಗಳನ್ನು ಒದಗಿಸಲು ಕರ್ನಾಟಕ ರಾಜ್ಯ ವೈದ್ಯಕೀಯ ಸರಬರಾಜು ನಿಗಮ (ಕೆಎಸ್ಎಂಸಿಎಲ್) ವತಿಯಿಂದ ಔಷಧಿಗಳ ಖರೀದಿ ಪ್ರಕ್ರಿಯೆ ಆರಂಭಿಸಲಾಗಿದ್ದು ಮಾರ್ಚ್ ಅಂತ್ಯದೊಳಗೆ ಪೂರ್ಣಗೊಳ್ಳಲಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು
.
ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗೆಂದು ಆಗಮಿಸುವ ಯಾರೊಬ್ಬರೂ “ಔಷಧ ಇಲ್ಲ” ಎಂದು ವಾಪಸ್ ಹೋಗಬಾರದು. ಆ ನಿಟ್ಟಿನಲ್ಲಿ ನಮ್ಮ ಸರ್ಕಾರ ಹಲವು ಕಾರ್ಯಕ್ರಮಗಳನ್ನು ರೂಪಿಸಿದ್ದು, ಜಿಲ್ಲಾ ಹಾಗೂ ತಾಲೂಕು ಮಟ್ಟದಲ್ಲಿಯೂ ಸಮರ್ಪಕ ಔಷಧಗಳು ಲಭ್ಯವಾಗುವಂತೆ ಕ್ರಮ ಕೈಗೊಳ್ಳುತ್ತಿದೆ. ತಂತ್ರಜ್ಞಾನ ಬಳಸಿಕೊಂಡು ಯಾವ ಆಸ್ಪತ್ರೆಗಳಲ್ಲಿ ಯಾವ ಔಷಧಗಳ ಸಂಗ್ರಹ ಎಷ್ಟಿದೆ ಎಂಬುದನ್ನು ಟ್ರ್ಯಾಕ್ ಮಾಡುತ್ತಿದ್ದು, ಈ ಪ್ರಕ್ರಿಯೆ ಕೂಡ ಇನ್ನಷ್ಟು ಸರಳವಾಗಲಿದೆ.
ನಮ್ಮ ಸರ್ಕಾರ ಆರೋಗ್ಯ ವ್ಯವಸ್ಥೆಯಲ್ಲಿ ಅಮೂಲಾಗ್ರ ಸುಧಾರಣೆಗಳನ್ನು ನಿರಂತರವಾಗಿ ತರುತ್ತಿದ್ದು, ಗುಣಮಟ್ಟದ ಔಷಧ ಪೂರೈಕೆಯ ಬದ್ಧತೆಯೊಂದಿಗೆ ಕಾರ್ಯನಿರ್ವಹಿಸುತ್ತಿದೆ ಎಂದು ಸಚಿವರು ತಿಳಿಸಿದರು
